ಪ್ರಧಾನಿ ಮೋದಿ ವಿಷ್ಣುವಿನ ಅವತಾರ: ಕಂಗನಾ ಹೇಳಿಕೆ ವೈರಲ್

Public TV
1 Min Read
Kangana Ranaut

ಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿ, ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್, ದಿನಕ್ಕೊಂದು ಹೇಳಿಕೆ ನೀಡಿ ಸುದ್ದಿ ಆಗುತ್ತಿದ್ದಾರೆ. ಈ ಬಾರಿ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಹಾಡಿಹೊಗಳಿದ್ದಾರೆ. ಮೋದಿ ಅವರನ್ನು ವಿಷ್ಣುವಿನ ಅವತಾರ (Vishnu Avatar) ಎಂದಿದ್ದಾರೆ. ಈ ಮಾತು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Kangana Ranaut

ಬಿಜೆಪಿ ತನ್ನ ಲೋಕಸಭಾ (Lok Sabha) ಚುನಾವಣೆಯ 5ನೇ ಪಟ್ಟಿ ಘೋಷಣೆ ಮಾಡಿ, ಈ ಪಟ್ಟಿಯಲ್ಲಿ ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut)ಗೆ ತವರು ರಾಜ್ಯ ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಕಂಗನಾ ಮಂಡಿ ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿನ  ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ಕೂಡ ಆಡುತ್ತಿದ್ದಾರೆ.

Kangana Ranaut 5

ಈವರೆಗೂ ಬಾಲಿವುಡ್ ನಲ್ಲಿನ ನೆಪೋಟಿಸಂ (Nepotism) ಬಗ್ಗೆ ಮಾತನಾಡುತ್ತಿದ್ದರು ನಟಿ ಕಂಗನಾ ರಣಾವತ್. ಹಿಂದಿ ಸಿನಿಮಾ ರಂಗದಲ್ಲಿನ ನೆಪೋಟಿಸಂ ಬಗ್ಗೆ ಸಾಕಷ್ಟು ಬಾರಿ ಅವರು ಮಾತನಾಡಿದ್ದಾರೆ. ಅದರಿಂದಾಗಿ ಕಷ್ಟವನ್ನೇ ಎದುರಿಸಿದ್ದಾರೆ. ಇದೀಗ ರಾಜಕಾರಣಕ್ಕೂ ಎಂಟ್ರಿ ಕೊಟ್ಟಿರುವ ಕಂಗನಾ, ಇಲ್ಲಿನ ನೆಪೋಟಿಸಂ ಬಗ್ಗೆ ಟೀಕಿಸಿದ್ದಾರೆ.

Kangana Ranaut 4

ಮೊದಲಿನಿಂದಲೂ ನಾನು ಕಾಂಗ್ರೆಸ್ ಅನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕೆ ಕಾರಣ ಕುಟುಂಬ ರಾಜಕಾರಣ. ರಾಹುಲ್ ಗಾಂಧಿ (Rahul Gandhi) ಹೆಸರನ್ನು ನೇರವಾಗಿಯೇ ತಗೆದುಕೊಳ್ಳುತ್ತೇನೆ. ಈ ನೆಪೋಟಿಸಂ ಅಂತ್ಯವಾಗಬೇಕು. ಎಲ್ಲರಿಗೂ ಅವಕಾಶ ಸಿಗಬೇಕು ಎಂದು ಕಂಗನಾ ರಣಾವತ್ ಕಟು ನುಡಿಯಲ್ಲೇ ಟೀಕೆ ಮಾಡಿದ್ದಾರೆ.

 

ಸದ್ಯ ಲೋಕಸಭಾ ಅಖಾಡದಲ್ಲಿ ಕಸರತ್ತು ಮಾಡುತ್ತಿದ್ದಾರೆ ನಟಿ ಕಂಗನಾ ರಣಾವತ್. ಇದೇ ವೇಳೆಯಲ್ಲಿ ಮಾಧ್ಯಮಗಳ ಜೊತೆಯೂ ಅವರು ಮಾತನಾಡಿದ್ದಾರೆ. ಸಾಲು ಸಾಲು ಸಿನಿಮಾಗಳ ಸೋಲಿನ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ, ಸೂಪರ್ ಸ್ಟಾರ್ ಅನಿಸಿಕೊಂಡ ಶಾರುಖ್ (Shahrukh Khan) ಕೂಡ ಹತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಸೋಲುಂಡಿದ್ದಾರೆ. ನಾನು ಮತ್ತು ಶಾರುಖ್ ಈ ಯುಗದ ಕೊನೆಯ ಸೂಪರ್ ಸ್ಟಾರ್ಸ್ ಎಂದು ಬಣ್ಣಿಸಿಕೊಂಡಿದ್ದಾರೆ.

Share This Article