Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಈಗ ಜಗತ್ತು ಬಲಿಷ್ಠ ಭಾರತವನ್ನು ನೋಡಲು ಬಯಸುತ್ತದೆ: ಮೋದಿ

Public TV
Last updated: February 2, 2022 12:57 pm
Public TV
Share
2 Min Read
narendra modi
SHARE

ನವದೆಹಲಿ: ಬಿಜೆಪಿ ರೈತರ ಪರವಾದ ಪಕ್ಷವಾಗಿದ್ದು, ಆತ್ಮನಿರ್ಭರ ಭಾರತ ಹಾಗೂ ಬಜೆಟ್‍ನಿಂದಾಗಿ ದೇಶದ ಅಭಿವೃದ್ಧಿ ಇನ್ನಷ್ಟು ವೇಗ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಪ್ರಪಂಚ ಭಾರತವನ್ನು ನೋಡುವ ದೃಷ್ಟಿಕೋನವು ಬಹಳಷ್ಟು ಬದಲಾಗಿದೆ. ಈಗ ಜಗತ್ತು ಬಲಿಷ್ಠ ಭಾರತವನ್ನು ನೋಡಲು ಬಯಸುತ್ತದೆ ಎಂದು ಹೇಳಿದರು.

Nirmala Sitharaman 1

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಅನ್ನು ಅದರ ವಿಶಾಲತೆಯನ್ನು ಗಮನದಲ್ಲಿಟ್ಟುಕೊಂಡು ಸಮಯೋಚಿತವಾಗಿ ವಿವರಿಸಿದ್ದರು. ನಾನು ಇಂದು ಬಜೆಟ್‍ನ ಪ್ರಮುಖ ಅಂಶಗಳತ್ತ ಗಮನ ಹರಿಸಲು ಪ್ರಯತ್ನಿಸುತ್ತೇನೆ ಎಂದ ಅವರು, ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಮೂಲಕ ದೇಶವನ್ನು ತ್ವರಿತಗತಿಯಲ್ಲಿ ಮುನ್ನಡೆಸುವುದು ನಮಗೆ ಅನಿವಾರ್ಯವಾಗಿದೆ. ಇದು ಹೊಸ ಅವಕಾಶಗಳನ್ನು ಹಾಗೂ ಹೊಸ ಸಂಕಲ್ಪಗಳ ನೆರವೇರಿಸುವ ಸಮಯವಾಗಿದೆ. ಸ್ವಾವಲಂಬಿ ಭಾರತದ ಅಡಿಪಾಯದ ಮೇಲೆ ಆಧುನಿಕ ಭಾರತವನ್ನು ನಿರ್ಮಿಸುವುದು ಬಹಳ ಮುಖ್ಯ ಎಂದರು.

ಈ ಕಾರ್ಯಕ್ರಮವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai, ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ @BSYBJP, ಸಚಿವರು, ಸಂಸದರು, ಶಾಸಕರು, ಪಕ್ಷದ ರಾಜ್ಯ ಪದಾಧಿಕಾರಿಗಳು, ಕಾರ್ಯಕರ್ತರು ವೀಕ್ಷಿಸಿದರು. (2/2)#AatmanirbharArthavyavastha pic.twitter.com/uqxhLsfCKn

— BJP Karnataka (@BJP4Karnataka) February 2, 2022

ಗಡಿಗಳಲ್ಲಿರುವ ಗ್ರಾಮಗಳಿಗೆ ವಿಶೇಷ ಅನುದಾನ ನೀಡಲಾಗಿದೆ. ಬಡವರಿಗಾಗಿ ಮನೆಯನ್ನು ನಿರ್ಮಿಸಲಾಗಿದೆ. ಜೊತೆಗೆ 48 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಭಾರತದಲ್ಲಿ ಯಾವುದೇ ಹಿಂದುಳಿದ ವರ್ಗಗಳು ಇರಬಾರದು ಎನ್ನುವುದು ನಮ್ಮ ಮುಂದಿನ ಗುರಿಯಾಗಿದೆ. ಆದರೆ ಪ್ರತಿಪಕ್ಷಗಳು ಬಡತನದ ವಿಷಯಗಳನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪೊಲೀಸ್ ಠಾಣೆಯಿಂದಲೇ ಜೀಪ್ ಕದ್ದ ಕಳ್ಳ

ಪ್ರಧಾನಿ ಶ್ರೀ @narendramodi ಅವರು ಕೇಂದ್ರ ಬಜೆಟ್‌ 2022-23 ರ ಕುರಿತು ‘ಆತ್ಮನಿರ್ಭರ ಅರ್ಥವ್ಯವಸ್ಥೆʼ ಬಗ್ಗೆ ಇಂದು ದೇಶದಾದ್ಯಂತದ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ವರ್ಚುವಲ್‌ ವೇದಿಕೆ ಮೂಲಕ ಮಾತನಾಡಿದರು. (1/2)#AatmanirbharArthavyavastha pic.twitter.com/iYImmAkpYM

— BJP Karnataka (@BJP4Karnataka) February 2, 2022

ಹಳ್ಳಿಗಳ ಸ್ವರೂಪವೇ ಇಂದು ಬದಲಾಗಿದೆ. ಬಡವರಿಗೆ ಮನೆ ಸಿಕ್ಕರೆ ಬದುಕೆ ಬದಲಾಗುತ್ತದೆ. ಹಿಂದಿನ ಸರ್ಕಾರ ಮಾಡಿದ ತಪ್ಪುಗಳನ್ನು ಸರಿಪಡಿಸಲಾಗಿದೆ. ಬಡವರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತನ್ನು ನೀಡಿದೆ ಎಂದ ಅವರು, ಕಳೆದ ವರ್ಷ ಭಾರತದಲ್ಲಿ 80 ಬಿಲಿಯನ್ ಡಾಲರ್ ವಿದೇಶಿ ನೇರ ಬಂಡವಾಳ(ಎಫ್‍ಡಿಐ) ಹೂಡಿಕೆಯಾಗಿದೆ. ಕಳೆದ 7 ವರ್ಷಗಳಲ್ಲಿ ಕೈಗೊಂಡ ನಿರ್ಧಾರಗಳಿಂದ ಭಾರತದ ಆರ್ಥಿಕತೆ ನಿರಂತರವಾಗಿ ವಿಸ್ತರಿಸುತ್ತಿದೆ ಎಂದು ಮಾಹಿತಿ ನೀಡಿದರು.

NARENDRA MODI 1 5

ಬಜೆಟ್‍ಗೆ ಹೆಚ್ಚು ಮೆಚ್ಚುಗೆ ವ್ಯಕ್ತವಾಗಿದೆ. 7 ವರ್ಷಗಳ ಹಿಂದೆ, ಭಾರತದ ಜಿಡಿಪಿ 1 ಲಕ್ಷ 10,000 ಕೋಟಿ ರೂ.ಗಳಷ್ಟಿತ್ತು. ಆದರೆ ಇಂದು ಅದು ಸುಮಾರು 2 ಲಕ್ಷದ 30,000 ಕೋಟಿ ರೂ.ಗೆ ಏರಿಕೆಯಾಗಿದೆ. ದೇಶದ ವಿದೇಶಿ ವಿನಿಮಯ ಮೀಸಲು ಕೂಡ 200 ಶತಕೋಟಿಯಿಂದ ಡಾಲರ್ ನಿಂದ 630 ಶತಕೋಟಿ ಡಾಲರ್ ಗೆ ಏರಿದೆ. ಇದಕ್ಕೆಲ್ಲಾ ನಮ್ಮ ಸರ್ಕಾರದ ಪರಿಣಾಮಕಾರಿ ನೀತಿಗಳೇ ಕಾರಣ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ Vs ಸಿದ್ದು ಬಣಗಳ ಕಿತ್ತಾಟ: ಲಾಭ ಪಡೆಯಲು ಮುಂದಾದ ಹಿರಿಯ ನಾಯಕರು

ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಯು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶವನ್ನು ವ್ಯಾಪಿಸಿರುವ ಬುಂದೇಲ್‍ಖಂಡದ ಮುಖವನ್ನು ಬದಲಾಯಿಸಲಿದೆ. ಬಜೆಟ್‍ನಲ್ಲಿ ನದಿಗಳ ಜೋಡಣೆಗೆ ಸಾವಿರಾರು ಕೋಟಿ ಮೀಸಲಿಡಲಾಗಿದೆ ಎಂದು ಹೇಳಿದರು.

TAGGED:atma nirbar bharatbudgetnarendra modiಆತ್ಮನಿರ್ಭರ ಭಾರತನರೇಂದ್ರ ಮೋದಿನವದೆಹಲಿಬಜೆಟ್
Share This Article
Facebook Whatsapp Whatsapp Telegram

You Might Also Like

amit shah
Latest

ತುರ್ತು ಪರಿಸ್ಥಿತಿ ಕಾಂಗ್ರೆಸ್‌ನ ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯ ಪ್ರತಿಬಿಂಬವಾಗಿತ್ತು: ಅಮಿತ್ ಶಾ

Public TV
By Public TV
5 minutes ago
salman khan 2
Cinema

ಭದ್ರತೆಗೆ ಹೊಸ ಬುಲೆಟ್‌ ಪ್ರೂಫ್‌ ಕಾರು ಖರೀದಿಸಿದ ಸಲ್ಮಾನ್ ಖಾನ್

Public TV
By Public TV
16 minutes ago
flood threat restrictions on tourist destinations along the cauvery riverbed
Districts

ಪ್ರವಾಹ ಭೀತಿ – ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ

Public TV
By Public TV
55 minutes ago
KRS Dam cauvery water
Latest

KRS ಡ್ಯಾಂ ಒಳಹರಿವಿನಲ್ಲಿ ಭಾರೀ ಏರಿಕೆ – ಕಾವೇರಿ ನದಿಗೆ 29,000 ಕ್ಯೂಸೆಕ್‌ ನೀರು ಬಿಡುಗಡೆ

Public TV
By Public TV
1 hour ago
Young man Kills his Lover in Mandya
Crime

10 ದಿನದಲ್ಲಿ ಪ್ರೀತಿ, ಪ್ರಣಯ – ಇನ್ಸ್ಟಾದಲ್ಲಿ ಪರಿಚಯವಾದ ವಿವಾಹಿತ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯ!

Public TV
By Public TV
1 hour ago
pm modi on emergency
Latest

ಯಾವ ಭಾರತೀಯನು ಎಂದಿಗೂ ಮರೆಯುವುದಿಲ್ಲ: ತುರ್ತು ಪರಿಸ್ಥಿತಿ ಕರಾಳತೆ ನೆನೆದು ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?