ಸೂಪರ್ ಸ್ಟಾರ್ ಕೃಷ್ಣ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

Public TV
1 Min Read
FotoJet 1 48

ತೆಲುಗು ಸಿನಿಮಾ ರಂಗದ ಸೂಪರ್ ಸ್ಟಾರ್ ಕೃಷ್ಣ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕಂಬನಿ ಮಿಡಿದಿದ್ದು, ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕೃಷ್ಣ ಅವರ ವೃತ್ತಿ ಜೀವನದ ಸಾಧನೆಯನ್ನು ಕೊಂಡಾಡುತ್ತಲೇ, ಈ ಸಂದರ್ಭದಲ್ಲಿ ದುಃಖದಲ್ಲಿರುವ ಕೃಷ್ಣ (Krishna) ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ‘ಕೃಷ್ಣ ಲೆಜೆಂಡರಿ ನಟರಾಗಿದ್ದು, ತಮ್ಮ ನಟನೆ ಮೂಲಕ ಅಸಂಖ್ಯಾತ ಅಭಿಮಾನಿಗಳ ಹೃದಯದಲ್ಲಿ ಇದ್ದರು’ ಎಂದು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

FotoJet 4 13

ಸಿನಿಮಾ, ನಾಟಕಗಳಲ್ಲಿ ಮಾತ್ರವಲ್ಲ, ರಾಜಕಾರಣದಲ್ಲೂ ತಮ್ಮದೇ ಆದ ಛಾಪು ಮೂಡಿಸಿದವರು ಕೃಷ್ಣ. ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡು ಲೋಕಸಭಾ ಸದಸ್ಯರಾಗಿಯೂ ಜನಪರ ಕೆಲಸಗಳನ್ನೂ ಮಾಡಿದ್ದಾರೆ. ಇವರ ಸೇವೆಗೆ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ. ಇತ್ತೀಚಿನ ದಿನಗಳಲ್ಲಿ ಸಿನಿಮಾ ರಂಗದಿಂದ ದೂರವಿದ್ದರೂ, ಇವರ ಪುತ್ರ ಮಹೇಶ್ ಬಾಬು ತೆಲುಗು ಸಿನಿಮಾ ರಂಗದ ಸೂಪರ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಇದನ್ನೂ ಓದಿ:ಡಿವೋರ್ಸ್ ವದಂತಿಯ ನಡುವೆ ಸಾನಿಯಾ ಮಿರ್ಜಾ ಬರ್ತ್‌ಡೇಗೆ ಶೋಯೆಬ್ ಮಲಿಕ್ ವಿಶ್

mahesh babu father KRISHNA

ಮಹೇಶ್ ಬಾಬು ಕುಟುಂಬದಲ್ಲಿ ಈ ವರ್ಷ ಸೂತಕದ ವರ್ಷವೆಂದೇ ಹೇಳಬಹುದು. ಜನವರಿಯಲ್ಲಿ ಕೃಷ್ಣ ಅವರ ಹಿರಿಯ ಮಗ ರಮೇಶ್ ಬಾಬು ನಿಧನಹೊಂದಿದ್ದರೆ, ಎರಡು ತಿಂಗಳ ಹಿಂದೆಯಷ್ಟೇ ಕೃಷ್ಣ ಅವರ ಎರಡನೇ ಪತ್ನಿ ಇಂದಿರಾ ದೇವಿ ಇಹಲೋಕ ತ್ಯಜಿಸಿದ್ದಾರೆ. ಮೊದಲನೇ ಹೆಂಡತಿ  ವಿಜಯ ನಿರ್ಮಲಾ ನಾಲ್ಕು ವರ್ಷಗಳ ಹಿಂದೆ ಬಾರದ ಲೋಕಕ್ಕೆ ಹೋಗಿದ್ದಾರೆ. ಇದೀಗ ಕೃಷ್ಣ ಕೂಡ ಕಣ್ಮರೆಯಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *