Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ-ಪ್ರಧಾನಿ ಮೋದಿ ಸ್ವಾಗತಕ್ಕೆ ಅಣಿಯಾದ ಕಲ್ಪತರು ನಾಡು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ-ಪ್ರಧಾನಿ ಮೋದಿ ಸ್ವಾಗತಕ್ಕೆ ಅಣಿಯಾದ ಕಲ್ಪತರು ನಾಡು

Karnataka

ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ-ಪ್ರಧಾನಿ ಮೋದಿ ಸ್ವಾಗತಕ್ಕೆ ಅಣಿಯಾದ ಕಲ್ಪತರು ನಾಡು

Public TV
Last updated: January 1, 2020 9:14 pm
Public TV
Share
2 Min Read
tmk pm modi
SHARE

ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆ ಕಿಸಾನ್ ಸಮ್ಮಾನ್ ನಾಲ್ಕನೇ ಹಂತದ ಹಣ ಬಿಡುಗಡೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದು, ಜೊತೆಗೆ ಸಿದ್ದಗಂಗಾ ಮಠಕ್ಕೂ ಭೇಟಿ ನೀಡಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ನಗರದ ಜೂನಿಯರ್ ಕಾಲೇಜು ಮೈದಾನ ಹಾಗೂ ಸಿದ್ದಗಂಗಾ ಮಠದಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಪ್ರಧಾನಿ ಮೋದಿ ಸ್ವಾಗತಕ್ಕೆ ಅಣಿಯಾಗಿದೆ.

ಕಿಸಾನ್ ಸಮ್ಮಾನ್ ನಿಧಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆ ಇದಾಗಿದ್ದು, ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಈ ಯೋಜನೆಯ ನಾಲ್ಕನೇ ಹಂತದ ಕಾರ್ಯಕ್ರಮ ನಾಳೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧಗೊಂಡಿದೆ. ಸುಮಾರು 60-80 ಸಾವಿರ ರೈತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಆಗಮಿಸ್ತಿರೋ ಪ್ರಧಾನಿ ಮೋದಿ ಊಟದ ಮೆನು

TMK PM MODI 4 e1577893115791

ಪ್ರಧಾನಿ ಮೋದಿ ಬಟನ್ ಒತ್ತುವುದರ ಮೂಲಕ ಏಕಕಾಲಕ್ಕೆ 6 ಕೋಟಿ ರೈತ ಕುಟುಂಬಗಳಿಗೆ ನೇರ ನಗದು ವರ್ಗಾವಣೆಯಾಗಲಿದೆ. ಅಲ್ಲದೆ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿವಿಧ ರಾಜ್ಯಗಳ 32 ರೈತರಿಗೆ ‘ಕೃಷಿ ಕರ್ಮಣ್’ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಇದರಲ್ಲಿ 16 ಜನ ರೈತ ಮಹಿಳೆಯರು ಹಾಗೂ 16 ಪುರುಷ ರೈತರು ಇರಲಿದ್ದಾರೆ. ಜೊತೆಗೆ ಮೀನು ಸಾಕಣಿಕಾರರಿಗೆ ಸೌಲಭ್ಯ ವಿತರಣೆ ಮಾಡಲಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಕೇಂದ್ರ ಕೃಷಿ ಸಚಿವ (ರಾಜ್ಯ) ನರೇಂದ್ರ ಸಿಂಗ್ ತೋಮರ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಕೇಂದ್ರ ಹಾಗೂ ರಾಜ್ಯದ ಹಲವು ನಾಯಕರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ- ಎಲ್ಲೆಲ್ಲಿ ಸಂಚಾರಕ್ಕೆ ತೊಂದ್ರೆಯಾಗುತ್ತೆ ಗೊತ್ತಾ?

TMK PM MODI 2

ಮಧ್ಯಾಹ್ನ 2.10ಕ್ಕೆ ತುಮಕೂರು ವಿಶ್ವವಿದ್ಯಾಲಯದ ಹೆಲಿಪ್ಯಾಡ್‍ಗೆ ಆಗಮಿಸಲಿರುವ ಪ್ರಧಾನಿ ಮೋದಿ, ರಸ್ತೆ ಮಾರ್ಗವಾಗಿ ಮೊದಲು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು, ಪೂಜೆ ನೆರವೇರಿಸಲಿದ್ದಾರೆ. ಅಲ್ಲದೆ ಭೇಟಿಕೊಟ್ಟ ಸ್ಮರಣಾರ್ಥವಾಗಿ ಗದ್ದುಗೆ ಪಕ್ಕದಲ್ಲಿ ಬಿಲ್ವ ಪತ್ರೆ ಗಿಡ ನೆಡಲಿದ್ದಾರೆ. ನಂತರ ಶ್ರೀಗಳ ವಸ್ತು ಸಂಗ್ರಹಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಠದ ಆವರಣದ ವೇದಿಕೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಚುಟುಕಾಗಿ ಮಾತನಾಡಲಿದ್ದಾರೆ. ಸುಮಾರು 40 ನಿಮಿಷಗಳ ಕಾಲ ಪ್ರಧಾನಿ ಮೋದಿ ಮಠದಲ್ಲಿ ಇರಲಿದ್ದಾರೆ. ಬಳಿಕ ಮಧ್ಯಾಹ್ನ 3:30ಕ್ಕೆ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

TMK PM MODI 5

ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಪಿಎಂ ಮೋದಿ ಜೊತೆಗೆ ಸಿಎಂ ಯಡಿಯೂರಪ್ಪ, ಕೇಂದ್ರದ ಸಚಿವರು, ಜಾರ್ಖಂಡ್ ಸಿಎಂ, ಮಣಿಪುರ ಸಿಎಂ, ಉತ್ತರಾಖಂಡ್ ರಾಜ್ಯಪಾಲರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ವೀಕ್ಷಣೆಗೆ ನಗರದ ವಿವಿಧೆಡೆ ಎಲ್.ಇ.ಡಿ ಸ್ಕ್ರೀನ್ ಅಳವಡಿಸಲಾಗುತ್ತಿದೆ. ರಿಂಗ್ ರಸ್ತೆ, ಶಿರಾ ರಸ್ತೆ ಸೇರಿ ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಬರುವ ರೈತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3-30 ರಿಂದ 5 ಗಂಟೆ ವರೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇರಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

TAGGED:Kisan Samman Projectprime minister narendra modiPublic TVSiddaganga Mathtumkurಕಿಸಾನ್ ಸಮ್ಮಾನ್ ಯೋಜನೆತುಮಕೂರುಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
7 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
11 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
18 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
28 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
35 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?