ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್ನ ತ್ರಿವೇಣಿ ಸಂಗಮದಲ್ಲಿ ಪೌರಕಾರ್ಮಿಕರ ಪಾದ ಪೂಜೆ ಮಾಡಿದ್ದಾರೆ.
ಈ ಮೂಲಕ ದೇಶದ ಇತಿಹಾಸದಲ್ಲೇ ಮೊದಲ ಬಾರಿ ಪೌರಕಾರ್ಮಿಕರ ಪಾದಪೂಜೆ ಮಾಡಿದ ಪ್ರಧಾನಿ ಎಂಬ ಖ್ಯಾತಿಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.
ಹಣೆಗೆ ವಿಭೂತಿ ಹಚ್ಚಿಕೊಂಡಿದ್ದ ಪ್ರಧಾನಿ ಮೋದಿ ಅವರು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 5 ಜನ ಪೌರಕಾರ್ಮಿಕರ ಪಾದಕ್ಕೆ ನೀರು ಹಾಕಿ ತೊಳೆದು, ಕರವಸ್ತ್ರದಿಂದ ಸ್ವಚ್ಛಗೊಳಿಸಿದರು. ಪಾದಪೂಜೆಯ ಬಳಿಕ ಅವರಿಗೆ ಶಾಲು ಹೊದಿಸಿ ಕೈಮುಗಿದು ಧನ್ಯವಾದ ತಿಳಿಸಿದರು.
#WATCH: Prime Minister Narendra Modi washes feet of sanitation workers in Prayagraj pic.twitter.com/otTUJpqynU
— ANI UP/Uttarakhand (@ANINewsUP) February 24, 2019
ಪಾದಪೂಜೆ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರು ತ್ರಿವೇಣಿ ಸಂಗಮಕ್ಕೆ ತೆರಳಿ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರು. ಬಳಿಕ ಸ್ವಚ್ಛ ಕುಂಭ್ – ಸ್ವಚ್ಛ ಆಭಾರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಪ್ರಧಾನಿ ಮೋದಿ ಅವರು ಸ್ವಚ್ಛತ್ ಭಾರತ್ ಅಭಿಯಾನವನ್ನು ಆರಂಭಿಸಿದ್ದರು. ಈ ನಿಟ್ಟಿನಲ್ಲಿ ದೇಶದಲ್ಲಿ ಪಕ್ಷಾತೀತವಾಗಿ ಎಲ್ಲರೂ ಸ್ವಚ್ಛತೆಯ ಕಡೆ ಗಮನ ಹರಿಸಬೇಕೆಂದು ಮನವಿ ಮಾಡಿದ್ದರು. ಹೀಗಾಗಿ ನಗರ ಪ್ರದೇಶ, ಗ್ರಾಮಗಳನ್ನು ಸ್ವಚ್ಛವಾಗಿಡಲು ಶ್ರಮಿಸುವ ಪೌರಕಾರ್ಮಿಕರನ್ನು ಸ್ವಚ್ಛತಾ ಯೋಧರೆಂದು ಪ್ರಧಾನಿ ನರೇಂದ್ರ ಮೋದಿ ಕರೆದು ಗೌರವಿಸಿದ್ದರು.
Prime Minister Narendra Modi addressing the ‘Swachh Kumbh, Swachh Aabhaar’ programme in Prayagraj. pic.twitter.com/Lr7VbqotG6
— ANI UP/Uttarakhand (@ANINewsUP) February 24, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv