ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಜುನಾಥನ ಕ್ಷೇತ್ರದಲ್ಲಿ ಕಂಡುಕೇಳರಿಯದ ಬಿಗಿ ಭದ್ರತೆಗಳನ್ನು ಕೈಗೊಳ್ಳಲಾಗಿದೆಯಾದರೂ ಭಕ್ತಾದಿಗಳ ಅನುಕೂಲಕ್ಕಾಗಿ ಇಂದು ರಾತ್ರಿ 9 ಗಂಟೆಯವರೆಗೆ ಸ್ವಾಮಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಮೋದಿ ಆಗಮನ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ 2 ಗಂಟೆಯವರೆಗೂ ಭಕ್ತಾದಿಗಳಿಗೆ ದರ್ಶನ ಭಾಗ್ಯ ಇರಲ್ಲ. ನಾಳೆ ಬೆಳಗ್ಗೆ 9 ಗಂಟೆಗೆ ಧರ್ಮಸ್ಥಳಕ್ಕೆ ಬರಲಿರುವ ಪ್ರಧಾನಿ ಅಲ್ಲಿಂದ ಮಧ್ಯಾಹ್ನ 1 ಗಂಟೆಗೆ ಹೊರಡಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ನವವಧುವಿನಂತೆ ಶೃಂಗಾರಗೊಂಡಿದ್ದು, ಪ್ರಧಾನಿ ಸ್ವಾಗತಕ್ಕೆ ಕಾತರಗೊಂಡಿದೆ.
- Advertisement 2
- Advertisement 3
ಭದ್ರತಾ ದೃಷ್ಟಿಯಿಂದಾಗಿ ನಾಳೆ ಬೆಳಗ್ಗೆ 9 ಗಂಟೆ ಬಳಿಕ ಧರ್ಮಸ್ಥಳ-ಉಜಿರೆ-ಕೊಕ್ಕಡ ನಡುವಿನ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಚಾರ್ಮಾಡಿ, ಮಂಗಳೂರು ಕಡೆಯಿಂದ ಬರುವ ರಸ್ತೆಗಳು ಮುಕ್ತವಾಗಿರುತ್ತವೆ. ಸಮಾರಂಭ ನಡೆಯುವ ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣಕ್ಕೆ ಬೆಳಗ್ಗೆ 10.30ರೊಳಗೆ ಸಾರ್ವಜನಿಕರು ಬಂದು ಪ್ರವೇಶಿಸಿಬಹುದು. ನೀರಿನ ಬಾಟಲ್ ಮತ್ತು ಚೀಲಗಳನ್ನು ನಿಷೇಧಿಸಲಾಗಿದೆ.
- Advertisement 4
ಪ್ರಧಾನಿಯವರ ಬಳಕೆಗಾಗಿ ವಿಶೇಷ ವಾಯುಸೇನಾ ವಿಮಾನದಲ್ಲಿ ಗುಂಡು ನಿರೋಧಕ ಐಷಾರಾಮಿ ಕಾರನ್ನು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ತರಲಾಗಿದೆ. ನಾಳೆ ಬೆಳಗ್ಗೆ ಈ ಕಾರು ಧರ್ಮಸ್ಥಳ ತಲುಪಲಿದೆ. ಉಜಿರೆ ಹೆಲಿಪ್ಯಾಡ್ನಿಂದ ಧರ್ಮಸ್ಥಳ ದೇವಸ್ಥಾನ, ಉಜಿರೆಯ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಪ್ಯಾಡ್ ಹಿಂದಿರುಗುವವರೆಗೆ ಈ ಕಾರನ್ನೇ ಪ್ರಧಾನಿ ಬಳಸಲಿದ್ದಾರೆ.