Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪ್ರತಿ ವಲಯದಲ್ಲೂ ಸಂಶೋಧನೆ ಅಭಿವೃದ್ಧಿಗೆ ಆದ್ಯತೆ: ಬೊಮ್ಮಾಯಿ

Public TV
Last updated: October 11, 2021 4:34 pm
Public TV
Share
4 Min Read
BASAVARJ BOMMAI 3
SHARE

-ಯುವ ಶಕ್ತಿ ಬಗ್ಗೆ ನನಗೆ ಅಪಾರ ನಂಬಿಕೆ ಇದೆ
-6,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

ಬೆಂಗಳೂರು: ಸುಸ್ಥಿರ ಬೆಳವಣಿಗೆ ಮತ್ತು ಹೂಡಿಕೆಗಳಿಗೆ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ ಹೊಸ ತಂತ್ರಜ್ಞಾನಗಳಿಗೆ ಸಂಬಂಧಿಸಿದಂತೆ ಸಹಭಾಗಿತ್ವಕ್ಕೆ ಸದಾ ಆಸಕ್ತಿ ತೋರುತ್ತಾ ಬಂದಿದ್ದು, ಭವಿಷ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದ ಬೆಳವಣಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

BASAVARJ BOMMAI 2

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಬೆಂಗಳೂರು ಅರಮನೆಯಲ್ಲಿ ಹಮ್ಮಿಕೊಂಡಿರುವ “ಉದ್ಯಮಿಯಾಗು ಉದ್ಯೋಗ ನೀಡು’ ಹಾಗೂ “ಕೈಗಾರಿಕಾ ಅದಾಲತ್’ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಭವಿಷ್ಯದಲ್ಲಿ ಪ್ರತಿ ವಲಯದಲ್ಲೂ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದ ಬೆಳವಣಿಗೆ ಆದ್ಯತೆ ನೀಡಬೇಕಾಗಿದ್ದು, ಈ ನಿಟ್ಟಿನಲ್ಲಿ ಹೂಡಿಕೆ ಮಾಡಲು ಕೈಗಾರಿಕೆಗಳಿಗೆ ಪ್ರೋತ್ಸಾಹಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೂಡಿಕೆ, ಉದ್ಯೋಗ ಮತ್ತು ಆವಿಷ್ಕಾರಕ್ಕೆ ನಮ್ಮ ಸರ್ಕಾರ ಒತ್ತು ನೀಡಲಿದೆ ಎಂದರು. ಇದನ್ನೂ ಓದಿ: ನೀರಜ್ ಚೋಪ್ರಾಗೆ ಕರ್ನಾಟಕ ಸರ್ಕಾರದಿಂದ ಸನ್ಮಾನ

BASAVARJ BOMMAI

ಯುವ ಶಕ್ತಿ ಬಗ್ಗೆ ನನಗೆ ಅಪಾರ ನಂಬಿಕೆ ಇದೆ. ಉದ್ಯಮ ಸ್ಥಾಪಿಸಿ ಸಹಸ್ರಾರು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಸುವ ತಾಕತ್ತು ಇವರಲ್ಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿರುವ ವಿದ್ಯಾರ್ಥಿಗಳೇ ಮುಂದೆ ಉದ್ಯಮಿಗಳಾಗಿ ಇಂಥ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನಲ್ಲಿ ಕೂರುವರು. ಸಣ್ಣ ಮಟ್ಟದಲ್ಲಿ ಉದ್ಯಮ ಸ್ಥಾಪಿಸಿ ಅದನ್ನೇ ದೊಡ್ಡ ಮಟ್ಟಕ್ಕೆ ಕೊಂಡೊಯ್ದಿರುವ ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಣ್ಣ ಉದ್ಯಮಿಗಳ ಸಚಿವ ಎಂಟಿಬಿ ನಾಗಾರಾಜ ಅವರೇ ನಮ್ಮೆಲ್ಲರಿಗೂ ಉತ್ತಮ ಉದಹಾರಣೆ. ಅವರು ನಡೆದು ಬಂದ ಹಾದಿಯೇ ಯುವ ಜನರಿಗೆ ಪಾಠ. ಸಣ್ಣ ಹೆಜ್ಜೆ ಇಡುವ ಮೂಲಕ ದೊಡ್ಡದನ್ನು ಸಾಧಿಸಬಹುದು. ಈ ನಿಟ್ಟಿನಲ್ಲಿ ಸಣ್ಣ ಹೆಜ್ಜೆ ಇಡಲು ಇದು ಆರಂಭದ ಪ್ರಯತ್ನವಾಗಲಿದೆ. ಎಲ್ಲರೂ ಇದರ ಸದುಪಯೋಗಪಡಿಸಿಕೊಂಡರೆ ಸಾರ್ಥಕ ಎಂದು ಅಭಿಪ್ರಾಯಪಟ್ಟರು.

BASAVARJ BOMMAI 1

ಯುವಜನರಿಗೆ ನೆರವಾಗುವ ಉದ್ದೇಶದಿಂದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮ ಮತ್ತು ಕೈಗಾರಿಕೆಗಳ ಸಮಸ್ಯೆ ಇತ್ಯರ್ಥಗೊಳಿಸಲು ಕೈಗಾರಿಕಾ ಅದಾಲತ್ ಹಮ್ಮಿಕೊಂಡಿರುವುದು ಶ್ಲಾಘನೀಯ. ಇಂಥ ಕಾರ್ಯಕ್ರಮಗಳಿಂದಾಗಿಯೇ ರಾಜ್ಯ ಇಂದು ದೇಶದಲ್ಲೇ ನಂಬರ್ 1 ಕೈಗಾರಿಕಾ ಸ್ನೇಹಿ ರಾಜ್ಯ ಎನಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಕ್ಷದ ವರಿಷ್ಠರು ಒಪ್ಪಿದರೆ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುತ್ತೇನೆ: ಬಿ.ವೈ ರಾಘವೇಂದ್ರ

"ಇಡೀ ದೇಶದಲ್ಲೇ ಅತಿಹೆಚ್ಚು ನವೋದ್ಯಮಗಳಿರುವುದು ಕರ್ನಾಟಕದಲ್ಲಿ! ದೇಶದಲ್ಲೇ ಮೊದಲ ಬಾರಿಗೆ ಆರ್ & ಡಿ ನೀತಿ, ಉದ್ಯೋಗ ನೀತಿಗಳನ್ನು ಕರ್ನಾಟಕ ಸರ್ಕಾರ ರೂಪಿಸುತ್ತಿದೆ. ಯುವಜನತೆಗೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕರ್ನಾಟಕ ಅತ್ಯುತ್ತಮ ರಾಜ್ಯ" : ಮುಖ್ಯಮಂತ್ರಿ @BSBommai. pic.twitter.com/ljERYBsbqQ

— CM of Karnataka (@CMofKarnataka) October 11, 2021

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಯುವಜನರು ಶಿಕ್ಷಣ ಪೂರೈಸಿದ ನಂತರ ಕೆಲಸ ಹುಡುಕುವ ಬದಲು ಅವರೇ ಉದ್ಯಮ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮಾಹಿತಿ ಒದಗಿಸಲು ನಮ್ಮ ಇಲಾಖೆ ಒಂದು ದಿನದ ಕಾರ್ಯಾಗಾರ ಆಯೋಜಿಸಿದೆ. ಬೆಂಗಳೂರಿನ ನಂತರ, ಕಲಬುರಗಿ, ಮೈಸೂರು, ಬೆಳಗಾವಿ, ಕರಾವಳಿ ಭಾಗದ ಮಂಗಳೂರು ಹಾಗೂ ತುಮಕೂರಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಆ ಭಾಗದ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿ ಆರಂಭಿಸಬಹುದಾದ ಉದ್ಯಮಗಳ ಮಾಹಿತಿ ನೀಡಲಾಗುತ್ತದೆ. ಮುಖ್ಯವಾಗಿ ಸ್ಥಳೀಯ ಯಶಸ್ವಿ ಉದ್ಯಮಿಗಳ ಮಾರ್ಗದರ್ಶನ ಒದಗಿಸಲಾಗುವುದು ಎಂದರು.

ನಮ್ಮ ವಿದ್ಯಾರ್ಥಿಗಳಿಗೆ ನಮ್ಮವರೇ ಆದ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿಯವರು ದೊಡ್ಡ ಪ್ರೇರಣೆ ಆಗಬೇಕು. ಎಂಜನಿಯರ್ ಪದವಿ ಪಡೆದು ಟಾಟಾ ಕಂಪನಿಯಲ್ಲಿ ಉದ್ಯೋಗ ಮಾಡಿ, ನಂತರದ ದಿನಗಳಲ್ಲಿ ಸ್ವಂತ ಐಟಿ ಕಂಪನಿ ಸ್ಥಾಪಿಸಿ ಜಗದ್ವಿಖಾತರಾದರು. ಮತ್ತೊಂದು ಉದಾಹರಣೆ ಅಂದರೆ ವಿಜಯ ಸಂಕೇಶ್ವರ್ ಅವರು. ಒಂದು ಲಾರಿಯಿಂದ ಆರಂಭವಾದ ಅವರ ಲಾಜಿಸ್ಟಿಕ್ ಉದ್ಯಮ ಇಂದು ದೇಶದಲ್ಲಿ ಅತಿ ಎತ್ತರಕ್ಕೆ ಬೆಳೆದಿದೆ. ಸಾಧಿಸುವ ಛಲ ಇದ್ದಾಗ ಮಾತ್ರ ಗುರಿ ಸಾಧ್ಯ. ಉದ್ಯಮ ಸ್ಥಾಪಿಸಿ ಮಾಲೀಕರಾಗಬೇಕೇ ಅಥವಾ ಉದ್ಯೋಗಕ್ಕೆ ಮತ್ತೊಬ್ಬರ ಕೈ ಕೆಳಗೆ ದುಡಿಯೇಬೇಕೇ ಎಂಬುದನ್ನು ವಿದ್ಯಾರ್ಥಿಗಳು ನಿರ್ಧರಿಸಬೇಕು. ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಿಂದೆ ನಡೆದಿದ್ದ ಎರಡು ಜಾಗತಿಕ ಹೂಡಿಕೆದಾರರ ಸಮಾವೇಶ ಅಭೂತಪೂರ್ವ ಯಶಸ್ಸು ಕಂಡಿದ್ದು, ಮುಂದಿನ ವರ್ಷ ನವೆಂಬರ್‍ನಲ್ಲಿ ನಡೆಯಲಿರುವ ವಿಶ್ವ ಜಾಗತಿಕ ಹೂಡಿಕೆದಾರರ ಸಮಾವೇಶವೂ ನಿಮ್ಮೆಲ್ಲರ ಸಹಕಾರದೊಂದಿಗೆ ಅತ್ಯಂತ ಯಶಸ್ವಿ ಆಗುವ ವಿಶ್ವಾಸ ನನಗಿದೆ ಎಂದು ನುಡಿದರು. ಇದನ್ನೂ ಓದಿ: ನನ್ನ ಅಭಿಮಾನಿಗಳಿಂದಲೇ ನಾನು ಇಲ್ಲಿ ಇರೋದು: ಕಿಚ್ಚ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ಇದೀಗ ಯುವ ಉದ್ಯಮಿಗಳನ್ನು ಸೃಷ್ಟಿಸಲು ಮತ್ತು ಕೈಗಾರಿಕಾ ವಿವಾದಗಳನ್ನು ಬಗೆಹರಿಸಲು ಆದ್ಯತೆ ನೀಡುವ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಕರ್ನಾಟಕವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

ಉನ್ನತ ಶಿಕ್ಷಣ, ಐಟಿ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಾಣ್ ಮಾತನಾಡಿ, ಕೌಶಲ್ಯ ಅಭಿವೃದ್ಧಿ ಮತ್ತು ಪ್ರಗತಿಪರ ನೀತಿಗಳ ಮೂಲಕ ಎಲ್ಲರಿಗೂ ಶಿಕ್ಷಣ ದೊರೆಯುವಂತಾದರೆ ಕೈಗಾರಿಕೀಕರಣ ಮತ್ತು ಉದ್ಯಮಶೀಲತೆಯಲ್ಲಿ ಅತಿ ದೊಡ್ಡ ಬದಲಾವಣೆ ಕಾಣಬಹುದು ಎಂದು ಅಭಿಪ್ರಾಯಪಟ್ಟರು.

ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ಯಮಗಳ ಸಚಿವ ಎನ್. ನಾಗರಾಜು ಮಾತನಾಡಿ, ಉತ್ಸಾಹಿ ಯುವ ಮಿತ್ರರು ಉದ್ಯಮಿಗಳಾಗಿ ರೂಪುಗೊಳ್ಳಲು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲು ಬದ್ಧ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಡಾ.ಸಿ.ಎ.ಎನ್.ಅಶ್ವಥ್ ನಾರಾಯಣ, ಎಂಟಿಬಿ ನಾಗರಾಜು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಇವಿ ರಣಮಣರೆಡ್ಡಿ, ಎಂಎಸ್‍ಎಂಇ ನಿರ್ದೇಶಕರಾದ ಆರ್. ವಿನೋತ್ ಪ್ರಿಯಾ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ, ಕೆಐಎಡಿಬಿ ಸಿಇಓ ಡಾ.ಎನ್ ಶಿವಶಂಕರ್ ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಉಪಸ್ಥಿತರಿದ್ದರು.

TAGGED:Ashwath NarayanBasavaraj BommaibjpBS Yediyurappamtb nagarajMurugesh niraniPublic TVಅಶ್ವಥ್ ನಾರಾಯಣ್ಎಂಟಿಬಿ ನಾಗರಾಜುಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬಿಎಸ್ ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood

You Might Also Like

Priyank Kharge 1
Latest

ಪ್ರಿಯಾಂಕ್ ಖರ್ಗೆ V/s ಆರ್‌.ಅಶೋಕ್‌ ಮಧ್ಯೆ ಟ್ವೀಟ್ ವಾರ್‌ – ವೈಯಕ್ತಿಕ ಮಟ್ಟಕ್ಕೆ ತಿರುಗಿದ ಫೈಟ್‌

Public TV
By Public TV
3 hours ago
01 3
Big Bulletin

ಬಿಗ್‌ ಬುಲೆಟಿನ್‌ 10 August 2025 ಭಾಗ-1

Public TV
By Public TV
4 hours ago
02 1
Big Bulletin

ಬಿಗ್‌ ಬುಲೆಟಿನ್‌ 10 August 2025 ಭಾಗ-2

Public TV
By Public TV
4 hours ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

Public TV
By Public TV
4 hours ago
Public TV VidyaMandira
Bengaluru City

ವ್ಹೀಲ್‌ಚೇರ್‌ನಲ್ಲಿ ಪಬ್ಲಿಕ್‌ ಟಿವಿ ʻವಿದ್ಯಾಮಂದಿರʼಕ್ಕೆ ಬಂದು ಮಾಹಿತಿ ಪಡೆದ ವಿದ್ಯಾರ್ಥಿ

Public TV
By Public TV
5 hours ago
Kalaburagi 1
Bagalkot

ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?