ದಿಯಾ ಸಿನಿಮಾದ ಮೂಲಕ ಕನ್ನಡದ ಪ್ರೇಕ್ಷಕರಿಗೆ ಪರಿಚಯವಾದ ಪೃಥ್ವಿ ಅಂಬರ್ ಇದೀಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಸುಕೇಶ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನಿಮಾದಲ್ಲಿ ಪೃಥ್ವಿ ಹೊಸ ಬಗೆಯ ಪಾತ್ರ ನಿರ್ವಹಿಸಲಿದ್ದಾರೆ. ಇದನ್ನೂ ಓದಿ : ಸ್ಟಾರ್ ನಟನ ಮಗಳನ್ನೂ ಬಿಡಲಿಲ್ಲ ಕಾಸ್ಟಿಂಗ್ ಕೌಚ್ : ನೋವು ಹಂಚಿಕೊಂಡ ಮೋಹನ್ ಬಾಬು ಪುತ್ರಿ
ಈ ಚಿತ್ರಕ್ಕಾಗಿ 1986ರಲ್ಲಿ ನಡೆವ ಕಥಾವಸ್ತುವನ್ನು ಆಯ್ಕೆ ಮಾಡಿಕೊಂಡಿದ್ದಾರಂತೆ ನಿರ್ದೇಶಕರು. ಈ ಕಾಲದಲ್ಲಿ ನಡೆದ ಪ್ರಮುಖ ಘಟನೆಯೇ ಸಿನಿಮಾವಂತೆ. ಇದನ್ನೂ ಓದಿ : ಮದ್ವೆ ಸೀರೆ ವಾಪಸ್ಸು ಕೊಟ್ರಂತೆ ಸಮಂತಾ: ಮಳೆ ನಿಂತರು ಮಳೆ ಹನಿ ನಿಲ್ಲದು
ಪೃಥ್ವಿ ಅಂಬರ್ ಕಡಿಮೆ ಸಮಯದಲ್ಲೇ ಸಾಲು ಸಾಲು ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಪ್ರತಿ ಸಿನಿಮಾದಲ್ಲೂ ಬೇರೆ ಬೇರೆ ಬಗೆಯ ಪಾತ್ರಗಳನ್ನೇ ಅವರು ಮಾಡುತ್ತಿದ್ದಾರೆ. ದಿಯಾ ಸಿನಿಮಾದಿಂದ ಲಕ್ ತಿರುಗಿದೆ ಮೇಲೆ ಪೃಥ್ವಿ ಅದೃಷ್ಟ ಖುಲಾಯಿಸಿದೆ. ಇದನ್ನೂ ಓದಿ : ಡಾ.ರಾಜ್ ಹುಟ್ಟಿದ ಊರಲ್ಲಿ ಫಸ್ಟ್ ಟೈಮ್ ಸಿನಿಮಾ ಮುಹೂರ್ತ
ನಿರ್ದೇಶಕ ಸುಕೇಶ್ ಸಿನಿಮಾ ರಂಗಕ್ಕೆ ಹೊಸಬರೇನೂ ಅಲ್ಲ. ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಸ್ವತಂತ್ರವಾಗಿ ಕಿರುಚಿತ್ರವನ್ನು ನಿರ್ದೇಶನವನ್ನೂ ಮಾಡಿದೆ. ಇದೇ ಮೊದಲ ಬಾರಿಗೆ ನಿರ್ದೇಶನಕ್ಕೆ ಮುಂದಾಗಿದ್ದಾರೆ.