Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ – ತಂದೆಯ ಬಳಿ ಕ್ಷಮೆ ಕೇಳಿದ ಗಾಯಕಿ ಪೃಥ್ವಿ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ – ತಂದೆಯ ಬಳಿ ಕ್ಷಮೆ ಕೇಳಿದ ಗಾಯಕಿ ಪೃಥ್ವಿ ಭಟ್

Cinema

ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ – ತಂದೆಯ ಬಳಿ ಕ್ಷಮೆ ಕೇಳಿದ ಗಾಯಕಿ ಪೃಥ್ವಿ ಭಟ್

Public TV
Last updated: April 22, 2025 5:40 pm
Public TV
Share
3 Min Read
Prithwi Bhat 3
SHARE

ಗಾಯಕಿ ಪೃಥ್ವಿ ಭಟ್ (Prithwi Bhat) ಅವರ ಪ್ರೇಮವಿವಾಹ ಇದೀಗ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಪೋಷಕರನ್ನು ಧಿಕ್ಕರಿಸಿ ಮದುವೆಯಾದ ಬಗ್ಗೆ ತಂದೆ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಇದೀಗ ತಂದೆ (Father) ಆರೋಪಕ್ಕೆಲ್ಲಾ ಪೃಥ್ವಿ ಭಟ್ ಸ್ಪಷ್ಟನೆ ನೀಡಿದ್ದಾರೆ. ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ ಕ್ಷಮಿಸಿ ಎಂದಿದ್ದಾರೆ. ಇದನ್ನೂ ಓದಿ:ಆ್ಯನಿವರ್ಸರಿ ದಿನವೇ ಹೆಣ್ಣು ಮಗುವನ್ನು ಬರಮಾಡಿಕೊಂಡ ನಟ ವಿಷ್ಣು ವಿಶಾಲ್‌, ಜ್ವಾಲಾ ಗುಟ್ಟಾ ದಂಪತಿ

Prithwi Bhat

ಕಳೆದ ಎರಡು ದಿನದಿಂದ ಹವ್ಯಕ ಸಮುದಾಯದ ವಾಟ್ಸಪ್ ಗ್ರೂಪಿನಲ್ಲಿ ಮತ್ತೆ ಬೇರೆ ಬೇರೆ ಗ್ರೂಪ್‌ನಲ್ಲಿ ಮಗಳ ಮದುವೆ ಹಾಗೂ ನರಹರಿ ದೀಕ್ಷಿತ್ ಬಗ್ಗೆ ಆರೋಪಿಸಿ ಪೃಥ್ವಿ ತಂದೆ ಆಡಿಯೋವೊಂದನ್ನು ಹಂಚಿಕೊಂಡಿಕೊಂಡಿದ್ದರು. ಇದಕ್ಕೆ ಗಾಯಕಿ ಪ್ರತಿಕ್ರಿಯಿಸಿ, ನನ್ನ ಮದುವೆ ವಿಚಾರದಲ್ಲಿ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಅವರ ಯಾವುದೇ ಕೈವಾಡವಿಲ್ಲ. ಮದುವೆ ಆಗುವ ದಿನ ನರಹರಿ ದೀಕ್ಷಿತ್ ಅವರಿಗೆ ವಿಷಯ ತಿಳಿಸಿ, ಅವರಿಂದ ಆಶೀರ್ವಾದ ಪಡೆದೆವು. ಇದರಲ್ಲಿ ಅವರ ತಪ್ಪೇನು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ ಕ್ಷಮಿಸಿ ಅಂತ ಆಡಿಯೋ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗಾಯಕಿ ಪೃಥ್ವಿ ಭಟ್ ಪ್ರೇಮವಿವಾಹ: ‘ಸರಿಗಮಪ’ ಜ್ಯೂರಿ ಮೇಲೆ ಆರೋಪ

Prithwi Bhat 2

ಮಾರ್ಚ್ 7ರಂದು ಅಭಿಷೇಕ್‌ನನ್ನು ಪ್ರೀತಿಸುತ್ತಿರುವ ವಿಚಾರವನ್ನು ಪಾಲಕರಿಗೆ ತಿಳಿಸಿದ್ದೆ. ಅಂದು ತಂದೆ ತಾಯಿಯ ಭಯಕ್ಕೆ ಸುಮ್ಮನಾದೆ ಎಂದಿದ್ದಾರೆ. ಪ್ರೀತಿ ವಿಚಾರ ತಿಳಿಸಿದ ನಂತರ ನನಗೆ ಕಡಿವಾಣ ಹಾಕುವ ಪ್ರಯತ್ನ ಮಾಡಿದರು. ಯಾವುದೇ ಕಾರ್ಯಕ್ರಮ, ಶೋಗಳಿಗೂ ಕಳುಹಿಸಿ ಕೊಡಲು ನಿರಾಕರಿಸಿದರು. ನನ್ನನ್ನು ಕಟ್ಟಿ ಹಾಕುವ ಪ್ರಯತ್ನ ಮಾಡಿದ್ದರಿಂದ ಅನಿವಾರ್ಯವಾಗಿ ಮನೆಯಿಂದ ಆಚೆ ಹೋಗಿ ಮದುವೆ ಆಗಿರೋದಾಗಿ ಆಡಿಯೋ ಮೂಲಕ ಉತ್ತರಿಸಿದ್ದಾರೆ ಪೃಥ್ವಿ ಭಟ್ ಹೇಳಿಕೊಂಡಿದ್ದಾರೆ.

ಪೃಥ್ವಿ ಭಟ್ ತಂದೆ ಹೇಳಿದ್ದೇನು?
ಜೀ ವಾಹಿನಿಯಲ್ಲೇ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಕೆಲಸ ಮಾಡುತ್ತಿರುವ ಅಭಿಷೇಕ್ (Abhishek) ಜೊತೆ ಮಗಳು ಪೃಥ್ವಿ ಮದುವೆಯಾಗಿದ್ದಕ್ಕೆ (Wedding) ಶಿವಪ್ರಸಾದ್ ಅಸಮಾಧಾನ ವ್ತಕ್ತಪಡಿಸಿದ್ದರು. ತಮ್ಮ ಮಗಳಿಗೆ ಹವ್ಯಕ ಹುಡುಗನನ್ನೇ ಹುಡುಕಿ ಮದುವೆ ಮಾಡುವ ಕನಸು ಹೊತ್ತಿದ್ದೆ. ಈ ವಿಷಯವನ್ನು ಜೀ ಕನ್ನಡವಾಹಿನಿಯ ಸರಿಗಮಪ ಶೋನಲ್ಲಿ ಜ್ಯೂರಿಯಾಗಿರೋ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಎನ್ನುವವರಿಗೆ ತಿಳಿಸಿದ್ದೆ. ಅವರು ಪೃಥ್ವಿ ಭಟ್ ಪ್ರೇಮಿಸುತ್ತಿರುವ ಹುಡುಗನ ಬಗ್ಗೆ ತಿಳಿಸಿದ್ದರು. ನಾನು ನನ್ನ ಮಗಳನ್ನು ಕೇಳಿದಾಗ, ನೀವು ತೋರಿಸಿದ ಹುಡುಗನ ಜೊತೆಯೇ ಮದುವೆ ಆಗುತ್ತೇನೆ ಅಂತ ದೇವರ ಮೇಲೆ ಪ್ರಮಾಣ ಮಾಡಿದ್ದಳು. ಆದರೆ, ಇದೀಗ ನನ್ನ ಮಗಳನ್ನು ಆ ನರಹರಿ ದೀಕ್ಷಿತ್ ಧಾರೆ ಎರೆದು ಕೊಟ್ಟಿದ್ದಾರೆ. ಮದುವೆಯ ವಿಷಯವನ್ನು ನನ್ನಿಂದ ಮುಚ್ಚಿಟ್ಟಿದ್ದಾರೆ ಅಂತ ಪೃಥ್ವಿ ಭಟ್ ತಂದೆ ಆಡಿಯೋ ಮೂಲಕ ಹೊರಹಾಕಿದ್ದರು.

Prithwi Bhat 1

ಮಗಳನ್ನು ಕೂರಿಸಿಕೊಂಡು ಮಾತಾಡಿದಾಗ, ಹುಡುಗನೊಬ್ಬ ನನ್ನ ಹಿಂದೆ ಬಿದ್ದಿರೋದು ನಿಜ. ಆದರೆ, ನೀವು ಇಷ್ಟಪಟ್ಟರೆ ಮಾತ್ರ ಮುಂದುವರೆಯುವೆ. ಇಲ್ಲದಿದ್ದರೆ, ನೀವು ತೋರಿಸಿದ ಹುಡುಗನ ಜೊತೆಯೇ ಹೊಸ ಜೀವನಕ್ಕೆ ಕಾಲಿಡುತ್ತೇನೆ ಅಂತ ಪೃಥ್ವಿ ಭಟ್ ತಂದೆ ತಾಯಿಯ ಮೇಲೆ ಪ್ರಮಾಣ ಮಾಡಿದ್ದರಂತೆ. ಆ ಪ್ರಮಾಣ ಮುರಿದುಕೊಂಡು ಮದುವೆ ಆಗಿದ್ದಾರೆ. ಹಾಗಾಗಿ ಆಕೆ ನನ್ನ ಮನೆಗೆ ಬರೋದು ಬೇಡ ಅಂತ ತಿಳಿಸಿದ್ದಾಗಿ ಪೃಥ್ವಿ ಅವರ ತಂದೆ ಹೇಳಿದ್ದಾರೆ.


ಹವ್ಯಕ ಸಮಾಜವು ನರಹರಿ ದೀಕ್ಷಿತ್ ಅಂಥವರಿಗೆ ಪ್ರೋತ್ಸಾಹ ಮಾಡಬಾರದು ಅಂತ ಪೃಥ್ವಿ ತಂದೆ ಮನವಿ ಮಾಡಿಕೊಂಡಿದ್ದರು. ಇದ್ದೊಬ್ಬ ಮಗಳ ಧಾರೆಯರೆಯದಂತೆ ನರಹರಿ ಮಾಡಿದ್ದಾರೆ. ನಾನು ನೋವಿನಿಂದಲೇ ಈ ಸಂಗತಿಯನ್ನು ಹಂಚಿಕೊಳ್ಳುತ್ತಿರುವೆ ಅಂತ ಆಡಿಯೋವೊಂದನ್ನು ಮಾಡಿ, ಹವ್ಯಕ ಗ್ರೂಪ್‌ನಲ್ಲಿ ಪೋಸ್ಟ್ ಮಾಡಿದ್ದರು ಪೃಥ್ವಿ ತಂದೆ. ಆ ಆಡಿಯೋ ಈಗ ವೈರಲ್ ಆಗಿದೆ.

TAGGED:abhishekPrithwi Bhatsandalwoodweddingಅಭಿಷೇಕ್ಪೃಥ್ವಿ ಭಟ್‌
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
6 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
12 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
20 minutes ago
West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
42 minutes ago
Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?