ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಅಪಘಾತಕ್ಕೀಡಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ತಿರುವಿನಲ್ಲಿ ನಡೆದಿದೆ.
ಈ ಘಟನೆ ಇಂದು ನಸುಕಿನ ಜಾವ 2.30ರ ಸುಮಾರಿಗೆ ನಡೆದಿದೆ. ಬಳ್ಳಾರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಹೊತ್ತ ಖಾಸಗಿ ಬಸ್ ಮಡಿಕೇರಿ ಪ್ರವಾಸಕ್ಕೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ.
- Advertisement 2
ಅಪಘಾತದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿ ಬಸವರಾಜು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನು ಮಡಿಕೇರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸ್ಸಿನ ಚಾಲಕ ಹಾಗೂ ಅಡುಗೆ ಸಿಬ್ಬಂದಿಯನ್ನು ಮಂಗಳೂರಿಗೆ ರವಾನೆ ಮಾಡಲಾಗಿದೆ.
- Advertisement 3
- Advertisement 4
ಅಪಾಯದಿಂದ ಪಾರಾದ ವಿದ್ಯಾರ್ಥಿಗಳಿಗೆ ಸುಂಟಿಕೊಪ್ಪ ರಾಮ ಮಂದಿರದಲ್ಲಿ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸ್ಥಳಕ್ಕೆ ಕೊಡಗು ಎಸ್ ಪಿ ಸುಮಾನ್ ಪನ್ನೇಕರ್ ಡಿವೈಎಸ್ಪಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೇಗೆ ಅಪಘಾತಕ್ಕೀಡಾಯ್ತು? ಅಪಘಾತಕ್ಕೆ ಕಾರಣವೇನು ಎಂಬುದಾಗಿ ತಿಳೀದುಬಂದಿಲ್ಲ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv