ಕೋಲಾರ: ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡಿದ ಪರಿಣಾಮ ಬೆಂಕಿ ಹೊತ್ತಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ಭೀಕರ ಘಟನೆ ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ ನಡೆದಿದೆ.
ಬಂಗಾರಪೇಟೆಯ ವಿವೇಕಾನಂದ ನಗರದ ಯುವಕ ನೀರಜ್(20) ಸ್ಥಳದಲ್ಲಿ ಸುಟ್ಟು ಕರಕಲಾದ ಬೈಕ್ ಸವಾರ. ಬೆಳ್ಳಂಬೆಳಗ್ಗೆ ನೀರಜ್ ಹಾಗೂ ಆತನ ಸ್ನೇಹಿತ ಬೈಕ್ನಲ್ಲಿ ತೆರೆಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಖಾಸಗಿ ಬಸ್ಗೆ ಬೈಕ್ ಡಿಕ್ಕಿ ಹೊಡಿದಿದೆ. ಈ ಭೀಕರ ಅಪಘಾತವಾದ ಪರಿಣಾಮ ಬೈಕ್ಗೆ ಬೆಂಕಿ ಹೊತ್ತಿಕೊಂಡು ನೀರಜ್ ಸ್ಥಳದಲ್ಲೇ ಸುಟ್ಟು ಕರಕಲಾಗಿ ಸಾವನ್ನಪ್ಪಿದ್ದಾನೆ.
ಬೈಕ್ನಲ್ಲಿದ್ದ ಇನ್ನೋರ್ವ ಯುವಕ ಮಾತ್ರ ಅಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸುಮಾರು ಎರಡುವರೆ ಲಕ್ಷ ಮೌಲ್ಯದ ಯಮಹ ಆರ್1 ಬೈಕ್ ಅಪಘಾತದಲ್ಲಿ ಸುಟ್ಟು ಕರಕಲಾಗಿದೆ. ಘಟನೆ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv