ತುಮಕುರು: ಖಾಸಗಿ ಬಸ್ ಪಲ್ಟಿಯಾಗಿ 8 ಮಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಪಳವಳ್ಳಿ ಕಟ್ಟೆ ಮೇಲೆ ನಡೆದಿದೆ.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಮೇಲೆ ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
- Advertisement 2
- Advertisement 3
ಎಸ್.ವಿ.ಟಿ. ಎಂಬ ಖಾಸಗಿ ಬಸ್ನಲ್ಲಿ ಒಟ್ಟು 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement 4
ಸ್ಥಳಕ್ಕೆ ಪಾವಗಡ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯರು ಆಸ್ಪತ್ರೆಗೆ ರವಾನಿಸುತ್ತಿದ್ದಾರೆ. ಗಾಯಾಳುಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮುಂದಿನ ಮೂರು ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ