ಹಾವೇರಿ: ಖಾಸಗಿ ಬಸ್ವೊಂದು ಪಲ್ಟಿಯಾಗಿದ್ದು, ಬಸ್ನಲ್ಲಿದ್ದ 15 ಜನರು ಗಾಯಗೊಂಡಿರುವ ಘಟನೆ ಜಲ್ಲೆಯ ಹಿರೇಕೆರೂರು ತಾಲೂಕಿನ ಹಿರೇಮೊರಬ ಗ್ರಾಮದ ಬಳಿ ನಡೆದಿದೆ.
ಶ್ರೀನಿವಾಸ್ ಎಂಬವರಿಗೆ ಸೇರಿದ ಬಸ್ ಪಲ್ಟಿಯಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯದಿಂದ ರಸ್ತೆ ಪಕ್ಕದ ಕಂದಕಕ್ಕೆ ಬಸ್ ಉರುಳಿದೆ ಎಂದು ಹೇಳಲಾಗಿದೆ. ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಬಸ್ ಉಕ್ಕಡಗಾತ್ರಿಯಿಂದ ಶಿವಮೊಗ್ಗ ಹೊರಟಿತ್ತು.
ಸ್ಥಳಕ್ಕೆ ಹಿರೇಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಗಾಯಾಳುಗಳನ್ನು ರಟ್ಟೀಹಳ್ಳಿ ಮತ್ತು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.