ಕಲಬುರಗಿ/ಬೆಂಗಳೂರು: ಕಲಬುರಗಿ ನಗರವನ್ನು ನಾಗರಿಕ ಸ್ನೇಹಿಯಾಗಿಸಲು, ಸ್ಮಾರ್ಟ್ ಸಿಟಿಯಾಗಿ ರೂಪಿಸುವ ಉದ್ದೇಶದಿಂದ ಶಾಸಕರು, ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಚರ್ಚೆ ನಡೆಸಿದರು.ಇದನ್ನೂ ಓದಿ:ಕೃಷ್ಣಾ, ಭೀಮಾ ನದಿಗೆ ನೀರು ಬಿಡುವಂತೆ ಮನವಿ: ಫಡ್ನವೀಸ್ಗೆ ಸಿಎಂ ಪತ್ರ
ಬೆಂಗಳೂರಿನಲ್ಲಿ ತಮ್ಮ ಕಚೇರಿಗೆ ಆಗಮಿಸಿದ್ದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರೊಂದಿಗೆ ಸಭೆ ನಡೆಸಿದ ಅವರು, ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವಂತೆ ಕಾರ್ಯಕ್ರಮಗಳನ್ನು ರೂಪಿಸುವ ನಿಟ್ಟಿನಲ್ಲಿ ಹಲವಾರು ಸಲಹೆ, ಸೂಚನೆಗಳನ್ನು ನೀಡಿದರು. ವಿಡಿಯೋ ಸಂವಾದದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಹಾಗೂ ಕನಿಝಾ ಫಾತಿಮಾ ಹಾಗೂ ಕಲಬುರಗಿ ನಗರ ಪಾಲಿಕೆಯ ಆಯುಕ್ತರು, ನಗರ ಯೋಜನಾ ಸಂಸ್ಥೆಯಾದ ಐಐಹೆಚ್ಎಸ್ ಪ್ರತಿನಿಧಿಗಳು ಭಾಗವಹಿಸಿದ್ದರು.
ನಗರಕ್ಕೆ ಸುಸ್ಥಿರ ನೀರು ಸರಬರಾಜು, ಉತ್ತಮ ರಸ್ತೆ, ಉದ್ಯಾನವನ, ತ್ಯಾಜ್ಯ ಮರುಬಳಕೆ, ತ್ಯಾಜ್ಯ ವಿಲೇವಾರಿ, ಸುಗಮ ವಾಹನ ಸಂಚಾರ, ಆಕರ್ಷಕ ಹಾಗೂ ಅನುಕೂಲಕರ ಬಸ್ ತಂಗುದಾಣಗಳ ನಿರ್ಮಾಣ ಮುಂತಾದ ಮೂಲಭೂತ ಸೌಲಭ್ಯಗಳನ್ನು ಉತ್ತಮ ಪಡಿಸಿ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿ ಪರಿವರ್ತನೆ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ನಗರ ಯೋಜನೆಯನ್ನು ರೂಪಿಸುವಲ್ಲಿ ಪರಿಣಿತ ಸಲಹಾ ಸಂಸ್ಥೆಯಾದ ಇಂಡಿಯನ್ ಇನ್ಸಿಟ್ಯೂಟ್ ಆಫ್ ಹ್ಯೂಮನ್ ಸೆಟಲ್ಮೆಂಟ್ ಸಂಸ್ಥೆಯು ಸ್ಥಳೀಯ ಶಾಸಕರು ಹಾಗೂ ನಗರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಕಲಬುರಗಿ ನಗರದ ಉತನ್ನತೀಕರಣಕ್ಕೆ ಸಂಬಂಧಿಸಿದಂತೆ ಉತ್ತಮ ಅಭ್ಯಾಸಗಳನ್ನು ಒಳಗೊಂಡ ವರದಿಯನ್ನು ಐದು ದಿನಗಳ ಒಳಗೆ ಸಲ್ಲಿಸಲು ಸೂಚಿಸಿದರು.ಇದನ್ನೂ ಓದಿ:ಪೆಟ್ರೋಲ್ ಹಾಕಿ ದುಡ್ಡು ಕೇಳಿದ್ದಕ್ಕೆ ಪಂಪ್ ಸಿಬ್ಬಂದಿ ಮೇಲೆ ಮೂವರಿಂದ ಹಲ್ಲೆ