ಯಾದಗಿರಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಕ್ರಮ ಆಸ್ತಿ ಹೊಂದಿದ್ದಾರೆಂಬ ಬಿಜೆಪಿ ನಾಯಕರ ಆರೋಪಕ್ಕೆ ಖರ್ಗೆ ಪುತ್ರ ಸಚಿವ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್ ಹಾಕಿದ್ದಾರೆ.
ಯಾದಗಿರಿಯ ಹತ್ತಿಕುಣಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕುಟುಂಬದ ಆಸ್ತಿ 50 ಸಾವಿರ ಕೋಟಿ ಇದ್ದರೆ ಬಿಜೆಪಿಯವರು ಅವರು ಅದನ್ನು ಸಾಬೀತು ಪಡಿಸಲಿ. ಆಸ್ತಿ ಹೊಂದಿದ್ದು ನಿಜವಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇದು ಸುಳ್ಳಾದರೆ ಅವರು ರಾಜಕೀಯ ನಿವೃತ್ತಿ ಹೊಂದುತ್ತಾರಾ? ಅಂತ ಓಪನ್ ಚಾಲೆಂಜ್ ಹಾಕಿದ್ದಾರೆ.
ಸಂಸದ ರವಿಕುಮಾರ್ ಗೆ ನನ್ನ ಬಗ್ಗೆ ಮಾತನಾಡಲು ಏನು ಅರ್ಹತೆ ಇದೆ, ಅವರು ನಾಮ ನಿರ್ದೇಶನದಿಂದ ಬಂದವರು. ನಾನು ಜನರಿಂದ ಆಯ್ಕೆಯಾದವನು. ಪುತ್ರ ವ್ಯಾಮೋಹದ ಬಗ್ಗೆ ಮಾತನಾಡುವ ಮಾಜಿ ಸಚಿವ ಮಾಲೀಕಯ್ಯ ಗುತ್ತೆದಾರ ತಮ್ಮ ಕುಟುಂಬದ ಸದಸ್ಯರ ಪದವಿಗಳ ಬಗ್ಗೆ ತುಟಿ ಬಿಚ್ಚಲಿ ಎಂದು ಖಡಕ್ ತಿರುಗೇಟು ನೀಡಿದರು.