ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮೊದಲೇ ಹೇಳಿದ್ದರು. ಆಗ ಯಾರೂ ಎಚ್ಚೆತ್ತುಕೊಳ್ಳಲಿಲ್ಲ. ಈಗ ಬಿಜೆಪಿಯವರು ಪೆಟ್ರೋಲ್ ಕಡಿಮೆ ಬಳಸಿ ಎನ್ನುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟೀಕಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆ ಮೋದಿ ತೈಲ ಮಿತಬಳಕೆಗೆ ಕರೆ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದರು. ಇದನ್ನೂ ಓದಿ: ಮೋದಿ ‘ಗೋಲ್ಡ್’ ಮಾತು: ಒಂದು ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ಕಾನೂನು ಏನು ಹೇಳುತ್ತೆ?

ದೇಶವನ್ನು ಈ ಸ್ಥಿತಿಗೆ ತಂದವರು ಯಾರು? ಬಿಜೆಪಿಯವರು ನಾಲ್ಕು ಜನ ಎಸ್ಕಾರ್ಟ್ ಬಿಟ್ರೆ ದೇಶದ ಸಮಸ್ಯೆ ಪರಿಹಾರ ಆಗುತ್ತಾ? ಇಷ್ಟು ದಿನ ಎಲ್ಲವೂ ಸರಿಯಾಗಿದೆ ಎಂದು ಮೋದಿ ಹೇಳುತ್ತಿದ್ದರು. ಈಗ ಯಾಕೆ ದೇಶದ ಆರ್ಥಿಕ ಸ್ಥಿತಿ ಆಪತ್ತಿನಲ್ಲಿದೆ? ಪ್ರಧಾನಿಯವರು ನಾವು ಜಾಗತಿಕವಾಗಿ ಆರ್ಥಿಕ ಸಂಕಷ್ಟದಲ್ಲಿದ್ದೇವೆ ಎಂದು ಮುಂಚೆಯೇ ಸಂಸತ್ತಿನಲ್ಲಿ ಹೇಳಬೇಕಿತ್ತು ಎಂದು ಕಿಡಿಕಾರಿದ್ದಾರೆ.
ನಾವು ಮೋದಿಯವರು ಹೇಳುವುದಕ್ಕೂ ಮುಂಚೆಯೇ ವಾರದಲ್ಲಿ ಒಂದು ದಿನ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದೆವು. ಏನಾದರೂ ಒಳ್ಳೆ ಸುದ್ದಿ ಇದ್ದರೆ ಮಾತ್ರ ರಾತ್ರಿ ಎಂಟು ಗಂಟೆಗೆ ಟಿವಿ ಮುಂದೆ ಬಂದು ಹೇಳುತ್ತಾರೆ. ಇದನ್ನು ಮೊದಲೇ ಯಾಕೆ ಜನರ ಹತ್ತಿರ ಹೇಳಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ದರ ಏರಿಕೆಯ ಎಫೆಕ್ಟ್- ಅಕ್ರಮ ಸಂಗ್ರಹ ತಡೆಗೆ ತೈಲ ಕಂಪನಿಗಳು ಅಲರ್ಟ್

ಪ್ರಧಾನಿ ನರೇಂದ್ರ ಮೋದಿಯವರು ಸದ್ಯ ಐದು ದಿನಗಳ ವಿದೇಶ ಪ್ರವಾಸದಲ್ಲಿದ್ದಾರೆ. ಅವರು ಜಾಗತಿಕ ಮಟ್ಟದ ಬೆಳವಣಿಗೆಗಳ ಕುರಿತು ನೆದರ್ಲೆಂಡ್ನಲ್ಲಿ ಭಾಷಣ ಮಾಡುತ್ತಾ, ಈ ಮೊದಲು ಕೊರೊನಾ ಬಂದಿತ್ತು. ಬಳಿಕ ಯುದ್ಧ ಪ್ರಾರಂಭವಾತ್ತು. ಈಗ ಇಂಧನ ಬಿಕ್ಕಟ್ಟು ತೀವ್ರಗೊಂಡಿದೆ. ಒಟ್ಟಾರೆಯಾಗಿ ಈ ದಶಕ ಇಡೀ ವಿಶ್ವಕ್ಕೆ ವಿಪತ್ತುಗಳ ದಶಕವಾಗಿ ಬದಲಾಗುತ್ತಿದೆ. ಈ ಪರಿಸ್ಥಿತಿ ಬೇಗ ದೂರವಾಗದೇ ಇದ್ದರೆ ಕಳೆದ ಒಂದು ದಶಕದಿಂದ ಮಾಡಿದ ಯಾವುದೇ ಕೆಲಸಗಳಿಂದ ಪ್ರಯೋಜನವಿಲ್ಲ. ವಿಶ್ವದ ಬಹುಪಾಲು ಜನರು ಬಡತನಕ್ಕೆ ಸಿಲುಕಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದರು.
ಮೋದಿಯವರ ಈ ಹೇಳಿಕೆಗಳು ದೇಶದೆಲ್ಲೆಡೆ ಭಾರೀ ಸಂಚಲನ ಮಾಡಿಸುತ್ತಿದ್ದು, ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಹಾರ್ಮುಜ್ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್ LPG ಟ್ಯಾಂಕರ್

