ಕೇಂದ್ರ ಸರ್ಕಾರದ ಬಜೆಟ್ ದೊಡ್ಡ ದೊಡ್ಡ ಘೋಷಣೆಗಳಿಗಷ್ಟೇ ಸೀಮಿತ: ಪ್ರಿಯಾಂಕ್‌ ಖರ್ಗೆ

Public TV
1 Min Read
PRIYANK KHARGE

ಕಲಬುರಗಿ: ಕೇಂದ್ರ ಸರ್ಕಾರದ (Union Government) ಇಂತಹ 10 ಬಜೆಟ್ ನೋಡಿದ್ದೇವೆ. ಎಲ್ಲ ಬಜೆಟ್‌ನಲ್ಲಿಯೂ ಘೋಷಣೆಗಳು ಮಾತ್ರವೇ ಇರುತ್ತವೆಯೇ ಹೊರತು, ಅದರಲ್ಲಿ ಜನರಿಗೆ ಗಣನೀಯವಾಗಿ ಅನುಕೂಲ ಆಗುವಂತಹದ್ದು ಇಲ್ಲ. ಕಾರ್ಮಿಕರು, ಮಹಿಳೆಯರು, ಯುವಕರಿಗೆ, ಆದಾಯ ತೆರಿಗೆ ಪಾವತಿದಾರರು, ಎಸ್‌ಎಂಇ, ಎಂಎಸ್‌ಎಂಇ, ನವೋದ್ಯಮಿಗಳಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ವಾಗ್ದಾಳಿ ನಡೆಸಿದ್ದಾರೆ.

income tax slab 2

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಾಯ ತೆರಿಗೆ ಸ್ಲ್ಯಾಬ್ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಜಿಎಸ್‌ಟಿ (GST) ಬಗ್ಗೆ, ಆದಾಯ ತೆರಿಗೆ ಬಗ್ಗೆಯೂ ಹೀಗೆ ಮಾತನಾಡಿದ್ದರು. ಈವರೆಗೂ ಅವರು ಟ್ಯಾಕ್ಸೇಷನ್ ಪದ್ದತಿಯನ್ನು ಸರಿಯಾಗಿ ಅಳವಡಿಸಿಕೊಂಡಿಲ್ಲ ಎಂದಿದ್ದಾರೆ. ಇದನ್ನೂ ಓದಿ: ರಕ್ತಾಭಿಷೇಕ ನಡೆದಿದ್ದು ಬಲಪಡಿಸೋದಕ್ಕಲ್ಲ, ನನ್ನ ವಶೀಕರಣಕ್ಕೆ – ಸ್ನೇಹಮಯಿ ಕೃಷ್ಣ ದೂರು

03

ಕೇಂದ್ರದ ಯಾವ ಯೋಜನೆ ಸಂಪೂರ್ಣವಾಗಿ ಯಶಸ್ವಿಯಾಗಿದೆ? ಸ್ಟಾರ್ಟ್‌ಅಪ್ ಇಂಡಿಯಾ ಯೋಜನೆಯಲ್ಲಿ 9 ವರ್ಷದ ಹಿಂದೆ ನೆರವು ಘೋಷಣೆ ಮಾಡಿದ್ದರು. ಈವರೆಗೂ ಕೊಟ್ಟಿದ್ದು 454 ಕೋಟಿ ರೂ. ಅಷ್ಟೆ. ಅವರು ಅಲಂಕಾರಿಕ ಪದಗಳನ್ನ ಬಳಸಿ ಘೋಷಣೆಗಳನ್ನು ಮಾಡುವುದರಲ್ಲಿ ಮುಂದಿದ್ದಾರೆ. ಆದರೆ ತಳಮಟ್ಟದಿಂದ ಅನುಷ್ಠಾನ ಶೂನ್ಯ ಎಂದು ಅಸಮಾಧಾನ ಹೊರಹಾಕಿದ್ರು. ಇದನ್ನೂ ಓದಿ: ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಆರ್‌.ಅಶೋಕ್

85f311d3 0293 42a3 a96f eedb6ae96284

ಕೇಂದ್ರದ ಬಳಿ ಬಳಿ ದುಡ್ಡಿಲ್ಲ. ಕರ್ನಾಟಕದಲ್ಲಿ ಜಲಜೀವನ್ ಮಿಷನ್‌ಗೆ 3,500 ಕೋಟಿ ರೂ. ಕೊಡಬೇಕು. ಆದ್ರೆ ಕೊಟ್ಟಿರೋದು 500 ಕೋಟಿ ರೂ. ಮಾತ್ರ. ನಾವು ಕೇಳಿದಾಗ, ನಮ್ಮ ಬಳಿ ದುಡ್ಡಿಲ್ಲ ಎನ್ನುತ್ತಾರೆ. ಕೆಲಸ ನಿಲ್ಲಬಾರದು ಎಂಬ ಕಾರಣಕ್ಕಾಗಿ ಕೇಂದ್ರ ಸರ್ಕಾರದ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ನಿಭಾಯಿಸುತ್ತಿದೆ. ಉಳಿದ 3,000 ಕೋಟಿ ಮೊತ್ತವನ್ನು ನಾವೇ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರದ ಬಜೆಟ್ ದೊಡ್ಡ ದೊಡ್ಡ ಘೋಷಣೆಗಳಿಗೆ ಸೀಮಿತವಾಗಿದೆ. ಆದರೆ ಅವುಗಳ ಪರಿಪೂರ್ಣ ಅನುಷ್ಠಾನ ಎಂದಿಗೂ ನಡೆದಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

Share This Article