ಲಖಿಂಪುರ್ ಸಂತ್ರಸ್ತ ಕುಟುಂಬಗಳಿಗೆ ಹಣ ಬೇಕಿಲ್ಲ, ನ್ಯಾಯ ಬೇಕು: ಪ್ರಿಯಾಂಕಾ ಗಾಂಧಿ

Public TV
2 Min Read
Priyanka Gandhi Vadra

ಲಕ್ನೋ: ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಸಂಘರ್ಷದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರದ ಹಣ ಬೇಕಿಲ್ಲ. ಆದರೆ ಅವರಿಗೆ ನ್ಯಾಯ ಬೇಕಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಹೇಳಿದ್ದಾರೆ.

 

ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ಆ ಕುಟುಂಬಗಳಿಗೆ ಭೇಟಿ ನೀಡಿದಾಗ ಅವರು ಸರ್ಕಾರದಿಂದ 45 ಲಕ್ಷ ರೂಪಾಯಿ ಪರಿಹಾರ ನೀಡಿರುವುದಾಗಿ ತಿಳಿಸಿದರು. ಆದರೆ ಅವರಿಗೆ ಬೇಕಾಗಿರುವುದು ಹಣವಲ್ಲ ನ್ಯಾಯ ಎಂದು ನುಡಿದಿದ್ದಾರೆ.

Hathras Priyanka Gandhi Rahul Gandhi 1

ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ, ಆರೋಪಿ ಆಶಿಶ್ ಮಿಶ್ರಾ ಅವರ ತಂದೆ ಕ್ಯಾಬಿನೆಟ್‍ನಲ್ಲಿ ತಮ್ಮ ಸ್ಥಾನದಲ್ಲಿರುವವರೆಗೂ ನ್ಯಾಯಯುತವಾಗಿ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಈ ಘಟನೆ ಕುರಿತಂತೆ ಉಚ್ಛ ನ್ಯಾಯಾಲಯದ ಹಾಲಿ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದು, ಗೃಹ ಸಚಿವರು ಕೂಡ ಅಲ್ಲಿಯೇ ಇರುವುದರಿಂದ ನ್ಯಾಯಯುತವಾಗಿ ತನಿಖೆ ನಡೆಸಲಾಗುತ್ತದೆ ಎಂಬುವುದನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ- ಯುಪಿ ಸರ್ಕಾರದಿಂದ 45 ಲಕ್ಷ ರೂ.ಪರಿಹಾರ ಘೋಷಣೆ

lakhimpur

 

ಇದೇ ವೇಳೆ ಆಶಿಶ್ ಮಿಶ್ರಾ ಬಂಧನ ವಿಳಂಬ ಕುರಿತಂತೆ ಮಾತನಾಡಿದ ಅವರು, ಪೊಲೀಸರು ಎರಡು ಬಾರಿ ಆತನಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ. ಕೊಲೆಗಾರನನ್ನು ಬಂಧಿಸುವ ಮೊದಲು ಆತನು ಚೇತರಿಸಿಕೊಳ್ಳಲು ಸಮಯ ನೀಡಲಾಗಿದೆಯೇ? ಪೊಲೀಸರು ಯಾಕೆ ಆತನನ್ನು ಇನ್ನೂ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿಯವರು, ಮಗನ ವಿರುದ್ಧ ಕೊಲೆ ಆರೋಪ ಇರುವುದರಿಂದ ಅಜಯ್ ಮಿಶ್ರಾ ತೆನಿ ಅವರನ್ನು ಕೆಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ

AJAY MISHRA

ಇತ್ತೀಚೆಗಷ್ಟೇ ಮೋದಿಯವರು 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಕ್ನೋಗೆ ಭೇಟಿ ನೀಡಿ 3 ದಿನಗಳ ಕಾಲ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ದೇಶದ ಜನರಿಗೆ ನೀವು ಏನು ಸಂದೇಶ ನೀಡಿದ್ದೀರಾ ಎಂದು ಕೇಳಲು ಬಯಸುತ್ತೇನೆ. ನೀವು ಇಲ್ಲಿಗೆ ಬಂದಿದ್ದರೂ ಒಂದು ಮಾತು ಕೂಡ ಆಡಲಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

narendra modi 5

ನೀವು ಸಾಮಾನ್ಯ ವ್ಯಕ್ತಿಯಾಗಿದ್ದರೆ, ದಲಿತ, ಬಡ ಮಹಿಳೆಯರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ನೀವು ದೇಶಕ್ಕೆ ಸಂದೇಶ ಸಾರಲು ಬಯಸಿದರೆ, ನೀವು ಅಧಿಕಾದಲ್ಲಿದ್ದರೆ, ನೀವು ಹೃದಯ ಶ್ರೀಮಂತ ವ್ಯಕ್ತಿಯಾಗಿದ್ದರೆ ಅಥವಾ ನೀವು ಬಿಜೆಪಿ ನಾಯಕರೇ ಆಗಿದ್ದರೆ, ನಿಮಗೆ ನ್ಯಾಯ ದಕ್ಕಿಸಿಕೊಡಬಹುದಾದ ಶಕ್ತಿ ಇದೆ. ಒಂದು ವೇಳೆ ನೀವು ನ್ಯಾಯ ಒದಗಿಸಿ ಕೊಟ್ಟರೆ ದೇಶದ ಪ್ರಧಾನಿ ಯಾರಿಗೂ ಹೆದರುವುದಿಲ್ಲ ಎಂಬ ಸಂದೇಶ ನೀಡಿದಂತೆ ಆಗುತ್ತದೆ. ಸಚಿವರಿಗೆ ಯಾವುದೇ ರೀತಿಯ ಕಾನೂನು ಅನ್ವಯವಾಗುವುದಿಲ್ಲ ಮತ್ತು ತೊಂದರೆಯಾಗುವುದಿಲ್ಲ. ತನಿಖೆ ಮಾಡುವ ಅವಶ್ಯಕತೆ ಕೂಡ ಇರುವುದಿಲ್ಲ. ಆದರೆ ನ್ಯಾಯ ಒದಗಿಸದೇ ಇದ್ದಲ್ಲಿ ಇದು ಸಾರ್ವಜನಿಕರಿಗೆ ತಪ್ಪಾದ ಸಂದೇಶ ಸಾರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *