Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉನ್ನಾವೋ ಅತ್ಯಾಚಾರ ಪ್ರಕರಣ – ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ಪ್ರಿಯಾಂಕಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉನ್ನಾವೋ ಅತ್ಯಾಚಾರ ಪ್ರಕರಣ – ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ಪ್ರಿಯಾಂಕಾ

Latest

ಉನ್ನಾವೋ ಅತ್ಯಾಚಾರ ಪ್ರಕರಣ – ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ಪ್ರಿಯಾಂಕಾ

Public TV
Last updated: December 7, 2019 6:00 pm
Public TV
Share
3 Min Read
priyanka gandhi 1
SHARE

ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉನ್ನಾವೋ ಸಂತ್ರಸ್ತೆಯ ಕುಟುಂಬಕ್ಕೆ ಭೇಟಿ ನೀಡಿ, ಸಾಂತ್ವಾನ ಹೇಳಿದರು.

ಯುವತಿಯನ್ನು ಈ ಹಿಂದೆ ಅತ್ಯಾಚಾರ ಎಸಗಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿ ಕೋರ್ಟಿಗೆ ಸಾಕ್ಷಿ ಹೇಳಲು ಯುವತಿ ತೆರಳುತ್ತಿದ್ದಾಗ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಯುವತಿಯ ದೇಹ ಶೇ.90ರಷ್ಟು ಸುಟ್ಟಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ದಿನಗಳಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಯುವತಿ ಶುಕ್ರವಾರ ರಾತ್ರಿ 11.30ಕ್ಕೆ ಸಾವನ್ನಪ್ಪಿದ್ದಳು.  ಇದನ್ನೂ ಓದಿ: ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ

ಸುದ್ದಿ ತಿಳಿದ ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ಉನ್ನವೋದಲ್ಲಿನ ಸಂತ್ರಸ್ತೆಯ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಭೇಟಿ ನಂತರ ಟ್ವೀಟ್ ಮಾಡಿರುವ ಅವರು, ಈ ಹಿಂದೆ ಇಂತಹುದೇ ಪ್ರಕರಣ ನಡೆದಿದ್ದರೂ 23 ವರ್ಷದ ಮಹಿಳೆಗೆ ಯಾಕೆ ರಕ್ಷಣೆ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಈ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಮೇಲೆ ಆರೋಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಲಾರಿ ಹರಿಸಿ ಅಪಘಾತವಾಗಿದೆ ಎನ್ನುವ ರೀತಿಯಲ್ಲಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ಈ ಪ್ರಕರಣವನ್ನು ಸಹ ಪ್ರಿಯಾಂಕಾ ಗಾಂಧಿ ಅವರು ಉಲ್ಲೇಖಿಸಿದ್ದಾರೆ.

उन्नाव की दिवंगत पीड़िता का परिवार अपार दुःख और गुस्से में है। साल भर से इस परिवार पर अत्याचार हो रहा था। पीड़िता के पिता को घर में घुसकर पीटा। उनका खेत जला दिया। उनकी 9 साल की पोती को स्कूल में जान से मारने की धमकी दी। महीनों केस दर्ज करने से अधिकारी टरकाते रहे।

— Priyanka Gandhi Vadra (@priyankagandhi) December 7, 2019

ಇನ್ನೊಂದು ಟ್ವೀಟ್ ಮಾಡಿರುವ ಅವರು ಸಂತ್ರಸ್ತೆಯ ಕುಟುಂಬಕ್ಕೆ ಬೆಂಬಲ ನೀಡುವ ಸಲುವಾಗಿ ವ್ಯಾಪಕ ಪ್ರಚಾರ ನೀಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಎಫ್‍ಐಆರ್ ದಾಖಲಿಸಿಕೊಳ್ಳಲೂ ನಿರಾಕರಿಸಿದ ಪೊಲೀಸರು ಯಾವ ರೀತಿಯ ಕ್ರಮ ಕೈಗೊಂಡಿದ್ದಾರೆ? ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಿತ್ಯ ನಡೆಯುವ ಪ್ರಕರಣದ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

उन्नाव की पिछली घटना को ध्यान में रखते हुए सरकार को तत्काल पीड़िता को सुरक्षा क्यों नहीं दी गई? जिस अधिकारी ने उसका FIR दर्ज करने से मना किया उस पर क्या कार्रवाई हुई? उप्र में रोज रोज महिलाओं पर जो अत्याचार हो रहा है, उसको रोकने के लिए सरकार क्या कर रही है ?

— Priyanka Gandhi Vadra (@priyankagandhi) December 7, 2019

ಅಲ್ಲದೆ ಸಾಮಾಜಿಕವಾಗಿ ಪ್ರತಿಯೊಬ್ಬರ ಸಾಮೂಹಿಕ ವೈಫಲ್ಯದಿಂದಾಗಿ ಮಹಿಳೆಗೆ ನ್ಯಾಯ ಒದಗಿಸಲು ಸಾಧ್ಯವಾಗಲಿಲ್ಲ. ಸಾಮಾಜಿಕವಾಗಿ ನಾವೆಲ್ಲರೂ ತಪ್ಪಿತಸ್ಥರು. ಅದೇ ರೀತಿ ಯುಪಿಯಲ್ಲಿನ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಹರಿಹಾಯ್ದಿದ್ದಾರೆ.

ದುರುಳರ ಅಟ್ಟಹಾಸಕ್ಕೆ ಮತ್ತೊಂದು ಬಲಿಯಾಗಿದ್ದು, ದುಷ್ಟರು ಇಟ್ಟ ಬೆಂಕಿಯಲ್ಲಿ ಬೆಂದು ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾಳೆ. ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ 11.40ಕ್ಕೆ ಕೊನೆಯುಸಿರೆಳೆದಿದ್ದಾಳೆ.

ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

unnao Case

ಘಟನೆಯಲ್ಲಿ ಸಂತ್ರಸ್ತೆಯ ದೇಹ ಶೇ.90 ರಷ್ಟು ಹೋಗಿತ್ತು. ಇನ್ನು ಸಾಯುವ ಮುನ್ನ ಸಂತ್ರಸ್ತೆ “ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು” ಎಂದು ಹೇಳಿಕೊಂಡಿದ್ದರು. ಹೈದ್ರಾಬಾದ್ ಎನ್‍ಕೌಂಟರಿನಿಂದ ಕೊಂಚ ಮಟ್ಟಿಗೆ ನಿರಾಳರಾಗಿದ್ದ ಬೆನ್ನಲ್ಲೇ ಈ ಆಘಾತಕಾರಿ ಬೆಳವಣಿಗೆಯಾಗಿದೆ.

ಬೆಂಕಿ ಹಚ್ಚಿದ್ರು: ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೊಲೆಗೆ ಯತ್ನಿಸಿದ್ದೇವು. ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದರು.

TAGGED:policepriyanka gandhiPublic TVunnaoyoung womanಉನ್ನಾವೋಪಬ್ಲಿಕ್ ಟಿವಿಪೊಲೀಸರುಪ್ರಿಯಾಂಕಾ ಗಾಂಧಿಯುವತಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
7 minutes ago
Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
48 minutes ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
1 hour ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
1 hour ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
2 hours ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?