Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭದ್ರತಾ ಲೋಪ ಆರೋಪ – ಪ್ರಿಯಾಂಕಾ ಜೊತೆ ಸೆಲ್ಫಿ ಕೇಳಿದ್ದು ಕಾಂಗ್ರೆಸ್ ಕಾರ್ಯಕರ್ತರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭದ್ರತಾ ಲೋಪ ಆರೋಪ – ಪ್ರಿಯಾಂಕಾ ಜೊತೆ ಸೆಲ್ಫಿ ಕೇಳಿದ್ದು ಕಾಂಗ್ರೆಸ್ ಕಾರ್ಯಕರ್ತರು

Latest

ಭದ್ರತಾ ಲೋಪ ಆರೋಪ – ಪ್ರಿಯಾಂಕಾ ಜೊತೆ ಸೆಲ್ಫಿ ಕೇಳಿದ್ದು ಕಾಂಗ್ರೆಸ್ ಕಾರ್ಯಕರ್ತರು

Public TV
Last updated: December 3, 2019 4:36 pm
Public TV
Share
3 Min Read
Priyanka Gandhi 1
SHARE

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಮನೆಯ ಬಳಿ ಕೆಲವು ಅಪರಿಚಿತರು ಸೆಲ್ಫಿ ಕ್ಲಿಕ್ಕಿಸಿದ ಬಳಿಕ ಭದ್ರತಾ ಲೋಪ ಆರೋಪ ಕೇಳಿಬಂದಿತ್ತು. ಆದರೆ ಈಗ ಸೆಲ್ಫಿ ಕ್ಲಿಕ್ಕಿಸಿದ ವ್ಯಕ್ತಿಗಳು ಕಾಂಗ್ರೆಸ್ ಕಾರ್ಯಕರ್ತರು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಈ ಬಗ್ಗೆ ಮಾಧ್ಯಮ ವರದಿ ಮಾಡಿದ್ದು ಸೆಲ್ಫಿ ಕ್ಲಿಕ್ಕಿಸಲು ಬಂದವರು ಸೋನಿಯಾ ಗಾಂಧಿಗೆ ಪರಿಚಯಸ್ಥರು. ಅಲ್ಲದೆ ಇದರಲ್ಲಿ ಕುಟುಂಬದವರ ಕೈವಾಡವಿದೆ ಎಂಬುದನ್ನು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ ಎಂದು ಹೇಳಿದೆ.

ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಲು ತೆರಳಿದ್ದ ಶಾರದಾ ತ್ಯಾಗಿಯವರು ಈ ಕುರಿತು ಪ್ರತಿಕ್ರಿಯಿಸಿದ್ದು, ನಾವು ತೆರಳಿದಾಗ ಯಾವುದೇ ಭದ್ರತಾ ಪರಿಶೀಲನೆ ಇರಲಿಲ್ಲ. ಈ ಕುರಿತು ನನಗೆ ಆಶ್ಚರ್ಯವಾಯಿತು. ಇದು ಹೊಸ ನಿಯಮವಿರಬೇಕು ಎಂದು ನಾನು ಭಾವಿಸಿದೆ. ಈ ಹಿಂದೆ ನಾನು ಅವರನ್ನು ಯಾವತ್ತೂ ಭೇಟಿಯಾಗಿರಲಿಲ್ಲ. ಬಹಳ ವರ್ಷಗಳಿಂದ ಚುನಾವಣೆಗಾಗಿ ಪ್ರಚಾರ ನಡೆಸುತ್ತಿದ್ದೆವು. ಪಕ್ಷದಲ್ಲಿ ಎಲ್ಲರಿಗೂ ನಾನು ಗೊತ್ತು. ಮಾತ್ರವಲ್ಲದೆ ಸೋನಿಯಾ ಗಾಂಧಿಯವರಿಗೂ ನನ್ನ ಹೆಸರು ತಿಳಿದಿದೆ ಎಂದು ವಿವರಿಸಿದ್ದಾರೆ.

#Exclusive | Big twist in @PriyankaGandhi security threat saga. TIMES NOW investigates the ‘breach.’ SUV that ‘trespassed’ tracked to @INCindia workers/loyalists. Sharda Tyagi tells TIMES NOW’s Nikesh Singh that @PriyankaGandhi knew that we were coming. | #PriyankaFakeBreach pic.twitter.com/28PMxafuQ3

— TIMES NOW (@TimesNow) December 3, 2019

ನಾವು ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಲು ಅಪಾಯಿಂಟ್‍ಮೆಂಟ್ ಪಡೆಯಲು ತೆರಳಿದ್ದೆವು. ಎರಡು ದಿನಗಳ ಹಿಂದೆ ಅವರ ಪಿಎಗೆ ನಾನು ಕರೆ ಮಾಡಿದ್ದೆ. ಅವರು ಡ್ರೈವ್ ಮಾಡುತ್ತಿದ್ದೇನೆ ಆಮೇಲೆ ಕರೆ ಮಾಡಿ ಎಂದು ಹೇಳಿದರು. ನಾವು ಏಮ್ಸ್ ಆಸ್ಪತ್ರೆಯಿಂದ ಬರುತ್ತಿದ್ದೇವೆ ಎಂದು ಹೇಳಿ ಅಪಾಯಿಂಟ್‍ಮೆಂಟ್ ಪಡೆಯಲು ಯತ್ನಿಸಿದೆವು ಎಂದು ತಿಳಿಸಿದ್ದಾರೆ.

ಶಾರದಾ ತ್ಯಾಗಿಯವರ ಮಗ ಮಾತನಾಡಿ, ಗಾಂಧಿಯವರ ಮನೆಗೆ ತೆರಳಿದಾಗ ನಮ್ಮ ಕುಟುಂಬದವರನ್ನು ಭದ್ರತಾ ಸಿಬ್ಬಂದಿ ನಿಲ್ಲಿಸಿ ತಪಾಸಣೆ ನಡೆಸಲಿಲ್ಲ. ನನ್ನ ತಾಯಿ ಅವರನ್ನು ಭೇಟಿಯಾಗಲು ಹತ್ತಿರ ತೆರಳಿದರೂ ಆಗಲೂ ಇವರು ತಡೆದು ಪರಿಶೀಲಿಸಲಿಲ್ಲ. ಅಲ್ಲದೆ ಯಾವುದೇ ಪ್ರಶ್ನೆಗಳನ್ನು ಕೇಳಲಿಲ್ಲ. ನಾನೂ ಸಹ ವಾಹನ ನಿಲ್ಲಿಸಿ ಗೇಟ್ ತೆರೆದು ಮನೆಯ ಒಳಗೆ ತೆರಳಿದೆ. ಪ್ರಿಯಾಂಕಾ ಗಾಂಧಿಯವರು ಗಾರ್ಡನ್‍ನಲ್ಲಿಯೇ ಇದ್ದರು. ನಮ್ಮ ತಾಯಿ ಅವರನ್ನು ನೋಡಿ ಕಾರಿನಿಂದ ಇಳಿದು, ಅವರ ಬಳಿ ಮಾತನಾಡಿದರು. ಪ್ರಿಯಾಂಕಾ ಗಾಂಧಿ ಎಲ್ಲಿಗೋ ಹೊರಟಿದ್ದರು. ನನ್ನ ಮಗ ಹಾಗೂ ಸಹೋದರಿ ಸಹ ಜೊತೆಗಿದ್ದರು. ಮಕ್ಕಳು ಪ್ರಿಯಾಂಕಾ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಾರಂಭಿಸಿದರು. ನಾವೆಲ್ಲರೂ ಫೋಟೋ ತೆಗೆದುಕೊಳ್ಳಲು ಪ್ರಾರಂಭಿಸಿದೆವು ಎಂದು ಅವರ ಮಗ ಹೇಳಿದ್ದಾರೆ.

ನವೆಂಬರ್ 26ರಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಲೋಧಿ ಎಸ್ಟೇಟ್ ನ ಮನೆಯ ಬಳಿ ಭದ್ರತೆಯ ಉಲ್ಲಂಘನೆಯಾಗಿತ್ತು. ಅಪರಿಚಿತ ವ್ಯಕ್ತಿಗಳು ಆಗಮಿಸಿ ಪ್ರಿಯಾಂಕಾ ಗಾಂಧಿ ಅವರ ಮನೆಯ ಬಳಿ ಆಗಮಿಸಿ ಸೆಲ್ಫಿ ಕೇಳಲು ಮುಂದಾಗಿದ್ದರು. ಈ ವೇಳೆ ಭದ್ರತಾ ಲೋಪ ಉಂಟಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು.

priyanka gandhi

ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿ ಸೆಲ್ಫಿ ತೆಗದುಕೊಳ್ಳಲು ಎಸ್‍ಯುವಿ(ಸ್ಫೋಟ್ಸ್ ಯುಟಿಲಿಟಿ ವೆಹಿಕಲ್) ಕಾರಿನಲ್ಲಿ ಬಂದಿದ್ದರು. ಈ ಕಾರು ಟಾಟಾ ಕಂಪನಿಯದ್ದಾಗಿತ್ತು.

ಈ ಕುರಿತು ಸೋಮವಾರ ಅವರ ಕಚೇರಿಯ ಅಧಿಕಾರಿಗಳು ಪ್ರತಿಕ್ರಿಯಿಸಿ, ಪ್ರಿಯಾಂಕಾ ಗಾಂಧಿಯವರ ಭದ್ರತೆಯನ್ನು ಸೆಂಟ್ರಲ್ ರಿಸರ್ವ್ ಪೊಲೀಸ್(ಸಿಆರ್ ಪಿಎಫ್) ಹೊತ್ತಿದೆ. ಈ ಕುರಿತು ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದರು.

ನವೆಂಬರ್ 26ರಂದು ಮಧ್ಯಾಹ್ನ 2ಗಂಟೆ ಸುಮಾರಿಗೆ ಕಾರು ಅವರ ಮನೆ ಬಳಿ ಬಂದಿತ್ತು. ಮೂವರು ಪುರುಷರು, ಮೂವರು ಮಹಿಳೆಯರು ಹಾಗೂ ಮಕ್ಕಳು ವಾಹನದಲ್ಲಿ ಇದ್ದರು. ಈ ಘಟನೆ ನಡೆದಾಗ ಪ್ರಿಯಾಂಕಾ ಗಾಂಧಿ ಸಭೆಯಲ್ಲಿದ್ದರು. ನಾವು ಅವರ ಅಭಿಮನಿಗಳು, ಅವರನ್ನು ಭೇಟಿಯಾಗಲು ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕರಿಗೆ ಅಪರಿಚಿತರು ತಿಳಿಸಿದ್ದರು ಎಂದು ಮೂಲಗಳು ತಿಳಿಸಿದ್ದವು.

Congress flag 2 e1573529275338

ನವೆಂಬರ್ ನಲ್ಲಿ ಕೇಂದ್ರ ಸರ್ಕಾರ ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್‍ಪಿಜಿಯ ಝಡ್ ಪ್ಲಸ್ ಭದ್ರತೆಯನ್ನು ಹಿಂಪಡೆದು ಸಿಆರ್‍ಪಿಎಫ್‍ಗೆ ವಹಿಸಿತ್ತು. ಈ ಹಿಂದೆ ಗಾಂಧಿ ಕುಟುಂಬದ ಸದಸ್ಯರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗುತ್ತಿತ್ತು, ಇದೀಗ ಕೇವಲ ಸಿಆರ್ ಪಿಎಫ್ ಭದ್ರತೆಯನ್ನು ಒದಗಿಸಲಾಗಿದೆ.

TAGGED:CRPFpriyanka gandhiPublic TVsecurityZ Plusಝಡ್ ಪ್ಲಸ್ಪಬ್ಲಿಕ್ ಟಿವಿಪ್ರಿಯಾಂಕಾ ಗಾಂಧಿಭದ್ರತೆಸಿಆರ್‍ಪಿಎಫ್
Share This Article
Facebook Whatsapp Whatsapp Telegram

Cinema news

Romanchaka song release from the movie Landlord Ritanya Vijay
ಲ್ಯಾಂಡ್‌ಲಾರ್ಡ್ ಸಿನಿಮಾದ ರೋಮಾಂಚಕ ಸಾಂಗ್ ರಿಲೀಸ್
Cinema Latest Sandalwood
Mallamma Bigg Boss Kannada 12
ಬಿಗ್‌ಬಾಸ್ ಮನೆಗೆ ಮತ್ತೆ ಮರಳಿದ ಮಲ್ಲಮ್ಮ – ಧ್ರುವಂತ್‌ಗೆ ಶಾಕ್
Latest Top Stories TV Shows
Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories

You Might Also Like

Bheemanna Khandre Eshwar Khandre
Bidar

ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ: ಈಶ್ವರ್ ಖಂಡ್ರೆ

Public TV
By Public TV
33 minutes ago
Yatnal
Districts

ಸಿಎಂ ಎದುರೇ ಜನ ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ – ಯತ್ನಾಳ್

Public TV
By Public TV
52 minutes ago
GBA
Bengaluru City

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌

Public TV
By Public TV
59 minutes ago
pavithra gowda
Bengaluru City

ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ

Public TV
By Public TV
1 hour ago
Skill Sonics Company Non Kannadiga HR
Bengaluru City

PUBLiC TV Impact | ನಮ್ಮಿಂದ ತಪ್ಪಾಗಿದೆ ಕ್ಷಮಿಸಿ – ಕನ್ನಡಿಗರ ಕ್ಷಮೆಯಾಚಿಸಿದ ಖಾಸಗಿ ಕಂಪನಿ

Public TV
By Public TV
1 hour ago
goraguntepalya nayandahalli Ring Road flyover is becoming an accident zone 1
Bengaluru City

ಆಕ್ಸಿಡೆಂಟ್ ವಲಯವಾಗುತ್ತಿದೆ ಬೆಂಗಳೂರಿನ ರಿಂಗ್‌ ರೋಡ್‌ ಫ್ಲೈಓವರ್!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?