ಡೆಹ್ರಾಡೂನ್: ರಾಜಕಾರಣಿಯ ಬಹು ದೊಡ್ಡ ಕರ್ತವ್ಯ ಜನ ಸೇವೆಯಾಗಿದೆ. ಆದರೆ ಇವತ್ತು ಸಿಎಂ ನಿಂದ ಪಿಎಂವರೆಗೆ ಬಿಜೆಪಿಯ ಪ್ರತಿಯೊಬ್ಬ ನಾಯಕನೂ ತಮ್ಮ ಅಭಿವೃದ್ಧಿಯನ್ನಷ್ಟೇ ನೋಡುತ್ತಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ಸರ್ಕಾರ ವಿರುದ್ಧ ವಾಗ್ಧಾಳಿ ಮಾಡಿದ್ದಾರೆ.
ಖಟೀಮಾದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿ, ಬೆಲೆಯೇರಿಕೆ, ನಿರುದ್ಯೋಗ ಸಮಸ್ಯೆಗಳ ಬಗ್ಗೆ ತಾವೇನು ಮಾಡುತ್ತೇವೆ ಎಂಬುದನ್ನು ಮುಖ್ಯಮಂತ್ರಿಗಳು ಜನರಿಗೆ ತಿಳಿಸಬೇಕು. ಮಹಿಳೆಯರಿಗೆ ಅವರು ಯಾವ ಯೋಜನೆಯನ್ನು ತರಲಿದ್ದಾರೆ ಉದ್ಯೋಗಕ್ಕಾಗಿ ಜನರು ರಾಜ್ಯದಿಂದೇಕೆ ಬೇರೆಡೆಗೆ ವಲಸೆ ಹೋಗುತ್ತಿದ್ದಾರೆ ಏಕೆಂದರೆ ಇಲ್ಲಿ ಉದ್ಯೋಗಗಳ ಸೃಷ್ಟಿಯಾಗುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದ ಕಂಡ ರಾಜ್ಯಗಳು – ಅಲ್ಲಿನ ಹೈಕೋರ್ಟ್ಗಳ ತೀರ್ಪುಗಳೇನು? ಇಲ್ಲಿದೆ ಮಾಹಿತಿ
ಸಮಾಜದ ಪ್ರತಿಯೊಂದು ವರ್ಗವೂ ಕಷ್ಟದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನರ ‘ಮನ್ ಕಿ ಬಾತ್’ ಕೇಳಲು ಸಿದ್ಧರಿಲ್ಲ. ಉತ್ತರಾಖಂಡದಲ್ಲಿ ಎಲ್ಲವೂ ಇದೆ. ಹಿಮಾಲಯ ಪರ್ವತಗಳು, ಪ್ರಕೃತಿ, ಪ್ರವಾಸೋದ್ಯಮ ಅವಕಾಶಗಳು ಇವೆ. ಆದರೆ ಉದ್ಯೋಗಗಳಿಲ್ಲ. ಜನರು ಇಲ್ಲಿಂದ ವಲಸೆ ಹೋಗುತ್ತಿದ್ದಾರೆ. ವಲಸೆ ಹೋಗುವವರ ಸಂಖ್ಯೆ ರಾಜ್ಯದಲ್ಲಿ ಅಧಿಕವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು. ರಾಜಕಾರಣಿಯ ಬಹು ದೊಡ್ಡ ಕರ್ತವ್ಯ ಜನ ಸೇವೆಯಾಗಿದೆ. ಜನರ ಅಭಿವೃದ್ಧಿಗೆ ಸಹಕರಿಸುವುದಾಗಿದೆ. ಆದರೆ ಇವತ್ತು ಸಿಎಂ ನಿಂದ ಪಿಎಂವರೆಗೆ ಬಿಜೆಪಿಯ ಪ್ರತಿಯೊಬ್ಬ ನಾಯಕನೂ ತಮ್ಮ ಅಭಿವೃದ್ಧಿಯನ್ನಷ್ಟೇ ನೋಡುತ್ತಾರೆ. ಯಾರೂ ಜನರ ಬಗ್ಗೆ ಯೋಚಿಸುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದರು. ಇದನ್ನೂ ಓದಿ: ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ಅಕ್ಷಯ್ ಕುಮಾರ್ ನೇಮಕ
ಪ್ರಧಾನಿಯ ಇಬ್ಬರು ಸ್ನೇಹಿತರ ಉದ್ಯಮಕ್ಕೆ ಸಹಾಯ ಮಾಡುವ ಯೋಜನೆಗಳನ್ನೇ ರಾಷ್ಟ್ರಾದ್ಯಂತ ಚಾಲ್ತಿಯಲ್ಲಿವೆ. ಬಜೆಟ್ ಬಂದರೆ ರಾಷ್ಟ್ರದ ಬೆನ್ನೆಲುಬಾದ ಬಡವರಿಗೆ, ರೈತರಿಗೆ, ಮಧ್ಯಮ ವರ್ಗದವರಿಗೆ, ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಯಾವ ಯೋಜನೆಗಯೂ ಇರುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರಾಖಂಡದ ಜನತೆ ಬಿಜೆಪಿ ಸರ್ಕಾರದಿಂದ ಬೇಸತ್ತಿದ್ದಾರೆ. ಕಾಂಗ್ರೆಸ್ ಖಂಡಿತವಾಗಿ ಅಧಿಕಾರಕ್ಕೆ ಬರುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ