ಲಕ್ನೋ: ಕಾಂಗ್ರೆಸ್ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಮಹಿಳಾ ಪೊಲೀಸ್ ಕಾನ್ಸ್ಸ್ಟೇಬಲ್ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಉತ್ತರ ಪ್ರದೇಶದಿಂದ ಆಗ್ರಾಕ್ಕೆ ಹೋಗುವಾಗ ಲಕ್ನೋ ಹೊರವಲಯದಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಮಹಿಳಾ ಕಾನ್ಸ್ಸ್ಟೇಬಲ್ ಗುಂಪೊಂದು ಸೆಲ್ಫಿ ಕ್ಲಿಕ್ಕಿಸಿಕೊಂಡಿದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದಾಗ್ಯೂ ಈ ವಿಚಾರ ಕಾನ್ಸ್ಸ್ಟೇಬಲ್ಗಳಿಗೆ ಖುಷಿಯಾದ ವಿಚಾರವಾಗಿ ಪರಿಣಮಿಸದೇ ಸಮಸ್ಯೆಯಾಗಿ ಎದುರಾಗಿದೆ. ಇದನ್ನೂ ಓದಿ: ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ: ಬಸವರಾಜ ಬೊಮ್ಮಾಯಿ
ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ಫೋಟೋಗೆ ಪೋಸ್ ನೀಡಿದ ಮಹಿಳಾ ಕಾನ್ಸ್ಸ್ಟೇಬಲ್ಗಳು ಕ್ರಮ ಎದುರಿಸಬೇಕಾಗುತ್ತದೆ ಎಂದು ಲಕ್ನೋ ಪೊಲೀಸ್ ಆಯುಕ್ತ ಡಿ.ಕೆ. ಠಾಕೂರ್ ತಿಳಿಸಿದ್ದಾರೆ. ಇದನ್ನೂ ಓದಿ: ಪಠ್ಯಪುಸ್ತಕದಲ್ಲಿ ಪ್ರವಾದಿ, ಇಸ್ಲಾಂ ಅವಹೇಳನ – ಪ್ರೊ.ಬಿ.ಆರ್.ರಾಮಚಂದ್ರಯ್ಯರನ್ನು ಕೆಲಸದಿಂದ ವಜಾಗೊಳಿಸಿಲು ಆಗ್ರಹ
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ನನ್ನ ಜೊತೆ ಫೋಟೋ ತೆಗೆದುಕೊಳ್ಳುವುದು ಅಪರಾಧ ಆಗಿದ್ದರೆ, ನನಗೆ ಶಿಕ್ಷೆ ನೀಡಬೇಕು, ಆದರೆ ಮಹಿಳಾ ಕಾನ್ಸ್ಸ್ಟೇಬಲ್ಗಳನ್ನು ದೂಷಿಸುವುದು ಏಕೆ? ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ- ನಾಳೆ ತುಮಕೂರು ಬಂದ್
खबर आ रही है कि इस तस्वीर से योगी जी इतने व्यथित हो गए कि इन महिला पुलिसकर्मियों पर कार्यवाही करना चाहते हैं।
अगर मेरे साथ तस्वीर लेना गुनाह है तो इसकी सजा भी मुझे मिले, इन कर्मठ और निष्ठावान पुलिसकर्मियों का कैरियर ख़राब करना सरकार को शोभा नहीं देता। pic.twitter.com/6wiGunRFEe
— Priyanka Gandhi Vadra (@priyankagandhi) October 20, 2021
ಯೋಗಿ ಆದಿತ್ಯನಾಥ್ ಅವರಿಗೆ ಈ ಫೋಟೋ ವಿಚಾರವಾಗಿ ಅಸಮಾಧಾನವಿದ್ದು, ಅವರು ಈ ಮಹಿಳಾ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಇದ್ದಾರೆ ಎಂಬ ವಿಚಾರ ಹರಿದಾಡುತ್ತಿದೆ. ನನ್ನೊಂದಿಗೆ ಫೋಟೋ ತೆಗೆದುಕೊಂಡಿರುವುದು ಅಪರಾಧವಾಗಿದ್ದರೆ, ಅದಕ್ಕಾಗಿ ನನಗೆ ಶಿಕ್ಷೆ ನೀಡಬೇಕು. ಅದನ್ನು ಹೊರತುಪಡಿಸಿ ಈ ಶ್ರಮಜೀವಿ ಮತ್ತು ನಿಷ್ಠಾವಂತ ಪೊಲೀಸರ ವೃತ್ತಿಯನ್ನು ಹಾಳುಮಾಡುವುದು ಸರ್ಕಾರಕ್ಕೆ ಕ್ಷೋಭೆಯಲ್ಲ ಎಂದಿದ್ದಾರೆ.
25 ಲಕ್ಷ ಕಳ್ಳತನ ಮಾಡಿದ ಆರೋಪದಲ್ಲಿ ಅರುಣ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧನ ಮಾಡಿದ್ದರು. ಆದರೆ ಆ ವ್ಯಕ್ತಿಯು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಲು ಹೊರಟಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಾಕ್ಕೆ ತೆರಳುತ್ತಿದ್ದರು. ಆದರೆ ಈ ವೇಳೆ ಪ್ರಿಯಾಂಕಾ ಗಾಂಧಿ ಭೇಟಿಯಿಂದ ಅಲ್ಲಿನ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದ್ದಿದ್ದರಿಂದ ಪೊಲೀಸರು ಅವರನ್ನು ವಶಕ್ಕೆ ಪಡೆದಿದರು. ಆದರೆ ಸ್ವಲ್ಪ ಸಮಯದ ನಂತರ ಬಿಡುಗಡೆಗೊಳಿಸಿ ಕೇವಲ ನಾಲ್ಕು ಮಂದಿಗೆ ಮಾತ್ರ ಆಗ್ರಾಗೆ ಹೋಗಲು ಅನುಮತಿ ನೀಡಲಾಯಿತು.