ಚಿಕ್ಕಮಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರಂತೆ (Indira Gandhi) ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಸಹ ಶೃಂಗೇರಿ ಮಠಕ್ಕೆ (Sringeri Sharadamba Temple) ಬುಧವಾರ ಭೇಟಿ ನೀಡಿದ್ದಾರೆ.
- Advertisement 2
ಮಠಕ್ಕೆ ಭೇಟಿ ನೀಡಿ ಶಾರದಾಂಬೆ ಹಾಗೂ ಗುರುಗಳ ದರ್ಶನ ಪಡೆದಿರುವ ಅವರು ನರಸಿಂಹವನದಲ್ಲಿರುವ ಕಿರಿಯಶ್ರೀ ವಿಧುಶೇಖರ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಶ್ರೀಗಳು ಪ್ರಿಯಾಂಕಾ ಅವರಿಗೆ ಶಾರದಾಂಬೆಯ ಮೂರ್ತಿ ನೀಡಿ ಹಾರೈಸಿದ್ದಾರೆ. ಬಳಿಕ ದೇವಾಲಯದ ಎರಡೂ ಆನೆಗಳಿಗೂ ಹಣ್ಣು ನೀಡಿದ ಪ್ರಿಯಾಂಕಾ ಗಾಂಧಿ ಪ್ರೀತಿಯಿಂದ ಆನೆಗಳ ಹಣೆ ಸವರಿದ್ದಾರೆ. ಇದನ್ನೂ ಓದಿ: ದೊಡ್ಡಗೌಡರ ಆಶೀರ್ವಾದ ಪಡೆದ ಎಂಪಿ ಕುಮಾರಸ್ವಾಮಿ
- Advertisement 3
- Advertisement 4
ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೆ ಭೇಟಿ ನೀಡಲಿರುವ ಪ್ರಿಯಾಂಕಾ ಅವರು, ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಪರ ಮತಯಾಚನೆ ಮಾಡಲಿದ್ದಾರೆ.
1978ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಇಂದಿರಾಗಾಂಧಿಯವರು ಶೃಂಗೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. 2018ರಲ್ಲಿ ರಾಹುಲ್ ಗಾಂಧಿಯವರು (Rahul Gandhi) ಶೃಂಗೇರಿಗೆ ಭೇಟಿ ನೀಡಿದ್ದರು. ಇದನ್ನೂ ಓದಿ: ರಕ್ತದಲ್ಲಿ ಬರೆದು ಕೊಡ್ತೀನಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ – ಡಿಕೆಶಿ