ಬೆಳಗಾವಿ ಮಹಾನಗರ ಪಾಲಿಕೆ ಮುಂದೆ MES ಸದಸ್ಯರ ನಾಡದ್ರೋಹಿ ಘೋಷಣೆ

Public TV
1 Min Read
police jeep

ಬೆಳಗಾವಿ: ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆ ಹಿನ್ನೆಲೆಯಲ್ಲಿ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಗೆ ಎಂಇಎಸ್ ಬೆಂಬಲಿತ ಸದಸ್ಯರು ನಾಡದ್ರೋಹಿ ಘೋಷಣೆ ಕೂಗಿರುವ ಘಟನೆ ನಡೆದಿದೆ.

ನಗರದ ಮಹಾನಗರ ಪಾಲಿಕೆ ಕಚೇರಿಗೆ ಆಗಮಿಸಿದ ಎಂಇಎಸ್ (MES) ಬೆಂಬಲಿತ ಸದಸ್ಯರು ಆವರಣದಲ್ಲಿ ಬೀದರ್‌ (Bidar), ಬಾಲ್ಕಿ, ಕಾರವಾರ, ನಿಪ್ಪಾಣಿ, ಸಂಯುಕ್ತ ಮಹಾರಾಷ್ಟ್ರ ಎಂದು‌ ಘೋಷಣೆ ಕೂಗಿದ್ದಾರೆ. ಎಂಇಎಸ್ ಬೆಂಬಲಿತ ಮೂರು ಜನ ಪಾಲಿಕೆ ಸದಸ್ಯರಿಂದ‌ ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

ರವಿ ಸಾಳುಂಕೆ, ರವಿ ಮಂಡೋಳ್ಕರ್ ಹಾಗೂ ವೈಷಾಲಿ ಭಾತಕಾಂಡೆ ಅವರಿಂದ ನಾಡದ್ರೋಹಿ ಘೋಷಣೆ ಕೂಗಲಾಗಿದ್ದು, ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ಬಿಗೆ ಮೀಸಲು ಹಿನ್ನೆಲೆ ಎಂಇಎಸ್ ಬೆಂಬಲಿತ ಅಭ್ಯರ್ಥಿಯಾಗಿ ವೈಷಾಲಿ ಭಾತಕಾಂಡೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪದೇ ಪದೇ ಭಾಷೆ ಗಡಿ ವಿಚಾರವನ್ನು ‌ಮುಂದಿಟ್ಟುಕೊಂಡ ಎಂಇಎಸ್ ನಾಯಕರು ಕನ್ನಡಿಗರನ್ನು ಕೆಣಕುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *