ಮುಂಬೈ: ಥಾಣೆಯ (Thane) ಡೊಂಬಿವ್ಲಿ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರು ಮತ್ತು ಇತರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಶಿವಸೇನಾ (Shiv Sena) ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ಅವರನ್ನು ನೇರವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಸೋಮವಾರ ತನ್ನ ಸಹಾಯಕರೊಂದಿಗೆ ಸೇರಿ ಮ್ಹಾತ್ರೆ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಬುಧವಾರ (ಜು.8) ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರ ಆರೋಗ್ಯ ಹದಗೆಟ್ಟಿದೆ ಎಂದು ಥಾಣೆಯ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದನ್ನೂ ಓದಿ: ವೈದ್ಯರ ಮೇಲೆ ಹಲ್ಲೆ – ಶಿವಸೇನೆ ಕಾರ್ಪೊರೇಟರ್ ಸೇರಿ ಆರು ಮಂದಿ ವಿರುದ್ಧ FIR, ಮೂವರ ಬಂಧನ
ಅನಾರೋಗ್ಯದ ಕಾರಣದಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಅವಕಾಶ ನೀಡುವಂತೆ ಕೋರಿ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕಲ್ಯಾಣ್ನ ನ್ಯಾಯಾಲಯ ವಜಾಗೊಳಿಸಿದೆ. ಅಲ್ಲದೇ ಅವರನ್ನು ನೇರವಾಗಿ ಹಾಜರುಪಡಿಸುವಂತೆ ಕೋರ್ಟ್ ಆದೇಶಿಸಿದೆ.
ಮ್ಹಾತ್ರೆ ಅವರಿಗೆ ಥಾಣೆ ಸಿವಿಲ್ ಆಸ್ಪತ್ರೆಯ ಐಸಿಯುನಲ್ಲಿ ತಜ್ಞರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಪೊರೇಟರ್ಗೆ ಕೇವಲ ಒಂದು ಮೂತ್ರಪಿಂಡವಿದೆ, ಅವರ ರಕ್ತದೊತ್ತಡ (ಬಿಪಿ) ಹೆಚ್ಚಾಗಿದೆ ಮತ್ತು ಅವರು ಆಗಾಗ ವಾಂತಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಗುರುವಾರ (ಜು.9), ಪೊಲೀಸರು ಕಲ್ಯಾಣ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ಮ್ಹಾತ್ರೆ ಅವರ ಆರೋಗ್ಯ ಸ್ಥಿತಿಯನ್ನು ಉಲ್ಲೇಖಿಸಿ, ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲು ಅವಕಾಶ ನೀಡುವಂತೆ ಕೋರಿದ್ದರು. ಆರೋಪಿ ಪರ ವಕೀಲರು ಇದೇ ಮನವಿ ಮಾಡಿದ್ದರು. ಆದರೆ ನ್ಯಾಯಾಲಯ ಈ ಮನವಿಯನ್ನು ತಿರಸ್ಕರಿಸಿದೆ. ಇದನ್ನೂ ಓದಿ: ಹನಿಮೂನ್ ಹತ್ಯೆ ಕೇಸಲ್ಲಿ ಸೋನಮ್ ಎಡವಿದ್ದೆಲ್ಲಿ? – ಇಂಚಿಂಚು ಮಾಹಿತಿ ಕಲೆ ಹಾಕಿದ್ದ ಸಿಯಾ!
