ನಿರ್ಮಾಪಕ ಎನ್.ಕುಮಾರ್ (N. Kumar) ವಿರುದ್ಧ ಮಾನನಷ್ಟ ನೋಟಿಸ್ ಕಳುಹಿಸಿದ್ದ ಕಿಚ್ಚ ಸುದೀಪ್ (Kiccha Sudeep) ಅವರಿಗೆ ಕುಮಾರ್ ಅವರಿಂದ ಯಾವುದೇ ಉತ್ತರ ಬಾರದೇ ಇರುವ ಕಾರಣಕ್ಕಾಗಿ ಇಂದು ಸುದೀಪ್ ಕೋರ್ಟಿಗೆ (Court) ಹಾಜರಾಗಲಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ.
ಮಧ್ಯಾಹ್ನ ಸುದೀಪ್ ಬೆಂಗಳೂರಿನ ಕಾರ್ಪೊರೇಷನ್ ಹತ್ತಿರದ ಎಸಿಎಂಎಂ ನ್ಯಾಯಾಲಯಕ್ಕೆ ಕಿಚ್ಚ ಸುದೀಪ್ ಹಾಜರಾಗಿದ್ದು, ಕುಮಾರ್ ವಿರುದ್ಧ ಕ್ರಿಮಿನಲ್ ಡಿಪಾಮೇಷನ್ (Defamation) ಕೇಸ್ ಹೂಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೋರ್ಟ್ ಹಾಲ್ 21ರಲ್ಲಿ ಸುದೀಪ್ ಹಾಜರಾಗಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ.
ಈ ಹಿಂದೆ ಕುಮಾರ್ ಅವರಿಗೆ ಸುದೀಪ್ ಲೀಗಲ್ ನೋಟಿಸ್ ನೀಡಿದ್ದರು. ಹತ್ತು ದಿನಗಳ ಗಡುವು ಕೂಡ ನೀಡಿದ್ದರು. ಕುಮಾರ್ ಬಹಿರಂಗ ಕ್ಷಮೆ ಕೇಳದೇ ಇದ್ದರೆ, ಕ್ರಿಮಿನಲ್ ಡಿಪಾಮೇಷನ್ ಹಾಕುವುದಾಗಿಯೂ ನೋಟಿಸ್ ನಲ್ಲಿ ತಿಳಿಸಿದ್ದರು. ಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೇ ಇರುವ ಕಾರಣಕ್ಕಾಗಿ ಕಾನೂನು ಹೋರಾಟ ನಡೆಸಲು ಸುದೀಪ್ ಮುಂದಾಗಿದ್ದಾರೆ.
ಸುದೀಪ್ ಅವರು ತಮ್ಮಿಂದ ಹಣ ಪಡೆದು, ವಂಚಿಸಿದ್ದಾರೆ ಎಂದು ಕುಮಾರ್ ಈ ಹಿಂದೆ ಆರೋಪ ಮಾಡಿದ್ದರು. ಕಾಲ್ ಶೀಟ್ ಕೊಡದೇ ತಮಗೆ ಸತಾಯಿಸುತ್ತಿದ್ದಾರೆ ಎಂದು ಅವರು ಸುದೀಪ್ ಮೇಲೆ ಆರೋಪ ಮಾಡಿದ್ದರು. ಅದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಮಾತಿನ ಹಿನ್ನೆಲೆಯಾಗಿ ಸುದೀಪ್ ಕಾನೂನು ಮೊರೆ ಹೋಗಿದ್ದಾರೆ.
Web Stories