Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಅನ್ ಲಾಕ್ ರಾಘವನ ಬಗ್ಗೆ ನಿರ್ಮಾಪಕ ಮಂಜುನಾಥ್ ಹೇಳಿದ್ದಿಷ್ಟು!

Public TV
Last updated: February 5, 2025 3:04 pm
Public TV
Share
3 Min Read
MANJUNATH DASEGOWDA 1
SHARE

ಮಿಲಿಂದ್ ಗೌತಮ್ (Milind Gautham) ನಾಯಕನಾಗಿ ನಟಿಸಿರುವ ‘ಅನ್ ಲಾಕ್ ರಾಘವ’ ಚಿತ್ರ ಫೆಬ್ರವರಿ 7ರಂದು ಅದ್ದೂರಿಯಾಗಿ ರಿಲೀಸ್‌ ಆಗಲಿದೆ. ಕಾಮಿಡಿ ಕಮ್ ಆಕ್ಷನ್ ಬಗೆಯ ಈ ಸಿನಿಮಾ ಈಗಾಗಲೇ ಟ್ರೈಲರ್ ಸೇರಿದಂತೆ ಒಂದಷ್ಟು ವಿಚಾರಗಳಿಂದಾಗಿ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಇದರೊಂದಿಗೆ ವರ್ಷಾರಂಭದ ಬಹುನಿರೀಕ್ಷಿತ ಚಿತ್ರಗಳ ಸಾಲಿನಲ್ಲಿಯೂ ಸ್ಥಾನ ಪಡೆದುಕೊಂಡಿದೆ. ಹೊಸತನದೊಂದಿಗೆ ಪ್ರೇಕ್ಷಕರಲ್ಲೊಂದು ಬೆರಗು ಮೂಡಿಸಬೇಕೆಂಬ ತುಡಿತ ಹೊಂದಿರೋ ಅಪ್ಪಟ ಸಿನಿಮಾ ಮೋಹಿಗಳ ತಂಡ ಅನ್ ಲಾಕ್ ರಾಘವನ ಹಿಂದಿದೆ. ಅದೆಲ್ಲದರ ಪ್ರೇರಕ ಶಕ್ತಿಯಂತಿರುವವರು ಈ ಸಿನಿಮಾದ ನಿರ್ಮಾಪಕ ಮಂಜುನಾಥ್ ದಾಸೇಗೌಡ.

Milind Gautham 4

ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ ಮಂಜುನಾಥ್ ದಾಸೇಗೌಡ (Manjunath Dasegowda) ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಐಪ್ಲೆಕ್ಸ್ ಬ್ಯಾನರ್ ಮೂಲಕ ಗಿರೀಶ್ ಕುಮಾರ್ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಸಾಮಾನ್ಯವಾಗಿ ಯಾವುದೇ ಸಿನಿಮಾ ದೃಶ್ಯರೂಪ ಪಡೆಯೋ ಮುಂಚಿನ ವಿದ್ಯಮಾನಗಳು ಆಸಕ್ತಿಕರವಾಗಿರುತ್ತವೆ. ಆ ಹಾದಿಯಲ್ಲಿ ತೀವ್ರವಾದ ಕನಸು, ಹುಮ್ಮಸ್ಸುಗಳ ಒಡ್ಡೋಲಗವೂ ಇರುತ್ತದೆ. ಅದಾಗಲೇ ಮೂರು ಸಿನಿಮಾಗಳನ್ನು ನಿರ್ಮಾಣ ಮಾಡಿ, ಮತ್ತೊಂದು ಸಿನಿಮಾದತ್ತ ಹೊರಳಿಕೊಂಡಿದ್ದ ಮಂಜುನಾಥ್ ಅವರ ಪಾಲಿನ ನಾಲಕ್ಕನೇ ಚಿತ್ರ ಅನ್ ಲಾಕ್ ರಾಘವ. ಮಂಜುನಾಥ್ ನಿರ್ದೇಶಕ ಸತ್ಯಪ್ರಕಾಶ್ ಸಿದ್ಧಪಡಿಸಿದ್ದ ಕಥೆ ಕೇಳಿ ಆರಂಭಿಕವಾಗಿಯೇ ಫಿದಾ ಆಗಿದ್ದರು. ಆರಂಭದಲ್ಲಿ ಈ ಕಥೆ ಸ್ಟಾರ್ ನಟರೊಬ್ಬರಿಗೆಂದೇ ರೆಡಿಯಾಗಿತ್ತು.

Unlock Raghava 4

ಆದರೆ, ಆ ಸ್ಟಾರ್ ನಟರ ಕಾಲ್ ಶೀಟ್ ಎರಡು ವರ್ಷದೊಳಗೆ ಸಿಗಲಾರದೆಂಬ ವಿಚಾರ ಮಂಜುನಾಥ್ ದಾಸೇಗೌಡ ಹಾಗೂ ನಿರ್ದೇಶಕ ದೀಪಕ್ ಪಾಲಿಗೆ ಕೊಂಚ ನಿರಾಸೆ ಮೂಡಿಸಿದ್ದದ್ದು ನಿಜ. ಆದರೆ, ಅಷ್ಟು ದೀರ್ಘಾವಧಿಯ ಕಾಲ ಕಾದು ಫ್ರೆಶ್ ಆದ ಕಥೆಯನ್ನು ಮುಗ್ಗಲು ಹಿಡಿಸಲು ಅವರು ತಯಾರಿರಲಿಲ್ಲ. ಆದರೆ, ತಕ್ಷಣವೇ ಸಿನಿಮಾ ಶುರುವಾಗಬೇಕೆಂಬ ನಿರ್ಧಾರಕ್ಕೆ ಬಂದಾಗ ಹೀರೋ ಯಾರೆಂಬ ಪ್ರಶ್ನೆ ಕಾಡಿತ್ತು. ಆಗ ಎಲ್ಲ ರೀತಿಯಿಂದಲೂ ತಯಾರಾಗಿ ನಿಂತಿದ್ದ ಹುಡುಗ ಮಿಲಿಂದ್ ಗೌತಮ್ ಸೂಕ್ತ ಎಂಬ ನಿರ್ಧಾರಕ್ಕೆ ನಿರ್ಮಾಪಕರು ಮತ್ತು ನಿರ್ದೇಶಕರು ಬಂದಿದ್ದರು. ಅದಾದ ಕೂಡಲೇ ‘ಅನ್ ಲಾಕ್ ರಾಘವ’ನಿಗೆ ವಿದ್ಯುಕ್ತ ಚಾಲನೆ ಸಿಕ್ಕಿತ್ತು. ಇದನ್ನೂ ಓದಿ:ಸುದೀಪ್ ಅಳಿಯ ಸಂಚಿತ್ ಚೊಚ್ಚಲ ಚಿತ್ರದ ಟೈಟಲ್ ರಿವೀಲ್

Unlock Raghava 2

ಶಿವಮೊಗ್ಗ ಮೂಲದವರಾದ ಮಂಜುನಾಥ್ ದಾಸೇಗೌಡ ಬೆಂಗಳೂರಿನಲ್ಲಿ ಬ್ಯುಸಿನೆಸ್ ನಡೆಸುತ್ತಿರುವವರು. ವ್ಯವಹಾರದ ನಡುವಲ್ಲಿಯೇ ಸಿನಿಮಾ ವ್ಯಾಮೋಹ ಹೊಂದಿದ್ದ ಅವರಿಗೆ ಒಂದಷ್ಟು ಸಿನಿಮಾ ಜಗತ್ತಿನ ಮಂದಿಯ ಪರಿಚಯವಿತ್ತು. ಈ ನಡುವೆ ಹಿರಿಯ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಉದ್ಘರ್ಷ ಎಂಬ ಕಥೆ ರೆಡಿ ಮಾಡಿಕೊಂಡಿದ್ದರು. ಅದನ್ನು ನಿರ್ಮಾಣ ಮಾಡುವಂತೆ ಮಂಜುನಾಥ್‌ರನ್ನು ಉತ್ತೇಜಿಸಿದ್ದರು. ಅವರ ಒತ್ತಾಸೆಯಿಂದಾಗಿ ಉದ್ಘರ್ಷ ಚಿತ್ರವನ್ನು ನಿರ್ಮಾಣ ಮಾಡಿದ್ದ ಮಂಜುನಾಥ್ ಅವರ ಪಾಲಿಗೆ ಅಗಾಧ ಅನುಉಭವ ದಕ್ಕಿತ್ತು. ಅದಾದ ಬಳಿಕ ವೀಕೆಂಡ್, ಮ್ಯಾನ್‌ ಆಫ್‌ ದ ಮ್ಯಾಚ್ ಎಂಬೆರಡು ಸಿನಿಮಾಗಳನ್ನೂ ನಿರ್ಮಾಣ ಮಾಡಿದ್ದರು.

MANJUNATH DASEGOWDA

4ನೇ ಚಿತ್ರವನ್ನು ಸ್ಟಾರ್ ನಟನನ್ನು ಹಾಕಿಕೊಂಡು ಮಾಡಬೇಕೆಂಬ ಇರಾದೆ ಮಂಜುನಾಥ್, ಗಿರೀಶ್ ಮತ್ತು ನಿರ್ದೇಶಕರ ದೀಪಕ್ ಅವರಿಗಿತ್ತಂತೆ. ಅದು ಸಾಧ್ಯವಾಗದಿದ್ದರೂ ನಿರಾಸೆಗೊಳ್ಳದೆ ಅದೇ ಸ್ಕ್ರಿಪ್ಟ್ ಅನ್ನಿಟ್ಟುಕೊಂಡು, ಹೊಸಾ ಹುಡುಗ ಮಿಲಿಂದ್ ಗೌತಮ್‌ರನ್ನು ಹೀರೋ ಆಗಿಸಿದ್ದಾರೆ. ನಟನೆ ಸೇರಿದಂತೆ ಎಲ್ಲದ್ರಲ್ಲಿಯೂ ಪಳಗಿಕೊಂಡಿದ್ದ ಮಿಲಿಂದ್ ಆ ಪಾತ್ರವನ್ನು ಚೆಂದಗೆ ನಿಭಾಯಿಸಿದ್ದಾರೆ. ನಿರ್ದೇಶಕರು ಊಹೆಯನ್ನೂ ಮೀರಿ ಈ ಚಿತ್ರವನ್ನು ರೂಪಿಸಿದ್ದಾರೆಂಬ ತುಂಬು ಮೆಚ್ಚುಗೆ ಮಂಜುನಾಥ್ ದಾಸೇಗೌಡರಲ್ಲಿದೆ.

Unlock Raghava 1

ಈಗಾಗಲೇ ಟ್ರೈಲರ್ ನೋಡಿದ ಮಂದಿ ಥ್ರಿಲ್ ಆಗಿದ್ದಾರೆ. ಅದರ ಬೆನ್ನಲ್ಲಿಯೇ ಸೆನ್ಸಾರ್ ಅಧಿಕಾರಿಗಳು ಆಡಿರುವ ಮೆಚ್ಚುಗೆಯ ಮಾತುಗಳು ಅವರೊಳಗಿನ ಭರವಸೆಯನ್ನು ಮತ್ತಷ್ಟು ಗಟ್ಟಿಗೊಳಿಸಿವೆ. ಕಾಮಿಡಿ, ಆಕ್ಷನ್, ಲವ್ ಜೊತೆಗೆ ಕಮರ್ಶಿಯಲ್ ಅಂಶಗಳೊಂದಿಗೆ ಮೂಡಿ ಬಂದಿರೋ ಅನ್ ಲಾಕ್ ರಾಘವ ವಿಭಿನ್ನ ಕಥೆಯನ್ನೊಳಗೊಂಡಿದೆ. ಅದು ಖಂಡಿತಾ ಎಲ್ಲ ವರ್ಗದ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬ ತುಂಬು ನಂಬಿಕೆ ಮಂಜುನಾಥ್ ದಾಸೇಗೌಡರಲ್ಲಿದೆ. ಸತ್ಯಪ್ರಕಾಶ್ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ. ಶೋಭರಾಜ್, ಸಾಧು ಕೋಕಿಲಾ, ಕಡೂರು ಧರ್ಮಣ್ಣ, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಸುಂದರ್, ವೀಣಾ ಸುಂದರ್ ರಮೇಶ್ ಭಟ್ ಮುಂತಾದವರು ನಟಿಸಿದ್ದಾರೆ. ರೆಚೆಲ್ ನಾಯಕಿಯಾಗಿ ಮಿಲಿಂದ್ ಅವರಿಗೆ ಸಾಥ್ ಕೊಟ್ಟಿದ್ದಾರೆ. ಲವಿತ್ ಛಾಯಾಗ್ರಹಣ, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ನಿರ್ದೇಶನ, ಅನೂಪ್ ಸಿಳೀನ್ ಸಂಗೀತ, ಅಜಯ್ ಮತ್ತು ಮಧು ತುಂಬಕೆರೆ ಸಂಕಲನ ಈ ಚಿತ್ರಕ್ಕಿದೆ.

TAGGED:sandalwoodunlock raghava filmಅನ್‌ ಲಾಕ್‌ ರಾಘವ ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ – ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ ಕೋರ್ಟ್‌
13 hours ago
Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
1 day ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
1 day ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
2 days ago

You Might Also Like

Farmers stage a day night protest in front of Jamkhandi Sugars Factory demanding payment of sugarcane bill 1
Bagalkot

ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಜಮಖಂಡಿ ಶುಗರ್ಸ್ ಫ್ಯಾಕ್ಟರಿ ಮುಂದೆ ರೈತರ ಅಹೋರಾತ್ರಿ ಧರಣಿ

Public TV
By Public TV
4 hours ago
ED Conducts Raids At Residence Of DCCB Chief Manjunath Gowda In Multicrore Loan Fraud Shivamogga bengaluru
Bengaluru City

ಕೈ ನಾಯಕ ಮಂಜುನಾಥ ಗೌಡಗೆ ಇಡಿ ಶಾಕ್‌ – 13.91 ಕೋಟಿ ಆಸ್ತಿ ಮುಟ್ಟುಗೋಲು

Public TV
By Public TV
5 hours ago
KP Agrahara Sucide 1
Bengaluru City

ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ

Public TV
By Public TV
5 hours ago
Manjunath Bhandari
Dakshina Kannada

ಸುಹಾಸ್ ಶೆಟ್ಟಿ ಹತ್ಯೆಯಂತೆಯೇ ಅಶ್ರಫ್, ರಹಿಮಾನ್ ಹತ್ಯೆಯನ್ನೂ ಎನ್‌ಐಎಗೆ ವಹಿಸಿ: ಮಂಜುನಾಥ ಭಂಡಾರಿ

Public TV
By Public TV
5 hours ago
Axiom 4 Mission carrying Indian Astronaut Shubhanshu Shukla delayed again postponed to June 11 1
Latest

Axiom-4 Mission | ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಮುಂದೂಡಿಕೆ

Public TV
By Public TV
5 hours ago
Kodagu Home
Districts

`ಪಬ್ಲಿಕ್ ಟಿವಿ’ ಮನವಿಗೆ ಮಿಡಿದ ಹೃದಯ – ರುಂಡ ಕತ್ತರಿಸಿದ ಬಾಲಕಿ ಕುಟುಂಬಕ್ಕೆ ಹೊಸ ಮನೆ ಹಸ್ತಾಂತರಿಸಿದ ಮಂತರ್ ಗೌಡ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?