ತಮಿಳು ಚಿತ್ರರಂಗದಲ್ಲಿ ನಟಿ, ನಿರೂಪಕಿಯಾಗಿ ಗಮನ ಸೆಳೆದಿದ್ದ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಇಬ್ಬರೂ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ತಿರುಪತಿ ಸನ್ನಿಧಿಯಲ್ಲಿ ಇಬ್ಬರ ವಿವಾಹ ಮಹೋತ್ಸವ ಜರುಗಿದ್ದು, ಮದುವೆ ಚಿತ್ರಗಳು ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡ್ತಿವೆ. ಆದರೆ ಇವರಿಬ್ಬರಿಗೂ ಇದು 2ನೇ ಮದುವೆ ಎಂಬುದು ವಿಶೇಷ. ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿ: ಆರ್ಯವರ್ಧನ್ ಅಲ್ಲ, ಅವನ ಸಹೋದರನ ಪಾತ್ರದಲ್ಲಿ ಹರೀಶ್ ರಾಜ್
ನಿರೂಪಕಿಯಾಗಿ ಮಾತ್ರವಲ್ಲದೆ, ನಟಿಯಾಗಿಯೂ ಗಮನ ಸೆಳೆದಿದ್ದ ಮಹಾಲಕ್ಷ್ಮೀ, ರವೀಂದರ್ ಚಂದ್ರಶೇಖರ್ ನಿರ್ಮಿಸಿದ್ದ ‘ವಿಡಿಯುಮ್ ವಾರೈ ಕಾಥಿರು’ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾದಲ್ಲಿ ವಿದಾರ್ಥ್ ಮತ್ತು ವಿಕ್ರಾಂತ್ ಮುಖ್ಯಭೂಮಿಕೆಯಲ್ಲಿದ್ದರು. ಧಾರಾವಾಹಿ ಕ್ಷೇತ್ರದಲ್ಲೂ ಮಹಾಲಕ್ಷ್ಮೀ ಹೆಸರು ಮಾಡಿದ್ದಾರೆ. ವಾಣಿ ರಾಣಿ, ಆಫೀಸ್, ಚೆಲ್ಲಮೇ, ಉಥಿರಿಪೂಕ್ಕಳ್, ಒರು ಕೈ ಒಸೈ ಸೇರಿದಂತೆ ಸಾಕಷ್ಟು ಧಾರಾವಾಹಿಗಳಲ್ಲಿ ಮಹಾಲಕ್ಷ್ಮೀ ನಟಿಸಿದ್ದಾರೆ. ಪ್ರಸ್ತುತ ಅವರು ನಟಿಸಿರುವ ಮಹಾರಸಿ ಎಂಬ ಧಾರಾವಾಹಿ ಪ್ರಸಾರವಾಗುತ್ತಿದೆ. ಇದನ್ನೂ ಓದಿ: ‘ಲೈಗರ್’ ಸಿನಿಮಾದಲ್ಲಿ ನಟಿಸಲು 25 ಕೋಟಿ ಸಂಭಾವನೆ ಪಡೆದರೂ, ಸಿನಿಮಾನೇ ಮರೆತಿದ್ದರಾ ಮೈಕ್ ಟೈಸನ್
ರವೀಂದರ್ ಚಂದ್ರಶೇಖರನ್ ಅವರು ಕೂಡ `ನಟ್ಪುನ ಎನ್ನಡು ಥೆರಿಯುಮ’, ‘ಮುರುಂಗೈಕೈ ಚಿಪ್ಸ್’, ‘ವಿಡಿಯುಮ್ ವಾರೈ ಕಾಥಿರು’ ಮುಂತಾದ ಸಿನಿಮಾಗಳನ್ನು ತಮ್ಮ ಲಿಬ್ರಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.
ಇಬ್ಬರೂ ಸಹ ತಮ್ಮ ವಿವಾಹಮಹೋತ್ಸವದ ಫೋಟೋಗಳನ್ನ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಮಹಾಲಕ್ಷ್ಮೀ ಅವರು, ‘ನಿಮ್ಮನ್ನು ನನ್ನ ಬದುಕಿನಲ್ಲಿ ಪಡೆಯಲು ನಾನು ತುಂಬ ಅದೃಷ್ಟ ಮಾಡಿದ್ದೇನೆ. ಬೆಚ್ಚನೆಯ ಪ್ರೀತಿಯಿಂದ ನೀವು ನನ್ನ ಬದುಕನ್ನು ಪರಿಪೂರ್ಣಗೊಳಿಸಿದ್ದೀರಿ. ಲವ್ ಯೂ ಅಮ್ಮು..’ ಎಂದು ಬರೆದುಕೊಂಡಿದ್ದಾರೆ.