ವಂಚನೆ ಪ್ರಕರಣದಲ್ಲಿ ಗಂಡ ಜೈಲು ಪಾಲಾಗಿದ್ರೆ, ಮಹಾಲಕ್ಷ್ಮಿ ಮಸ್ತ್ ಫೋಟೋಶೂಟ್

Public TV
1 Min Read
mahalakshmi

ಸೋಶಿಯಲ್ ಮೀಡಿಯಾದಲ್ಲಿ ಅತೀ ಹೆಚ್ಚು ಟ್ರೋಲ್ ಆಗಿರುವ ತಮಿಳಿನ ಖ್ಯಾತ ನಿರ್ಮಾಪಕ ರವೀಂದ್ರ (Ravindar Chandrasekaran), ಮಹಾಲಕ್ಷ್ಮಿ (Mahalakshmi) ಜೋಡಿ ಇತ್ತೀಚೆಗೆ ಮೊದಲ ಮದುವೆ ವಾರ್ಷಿಕೋತ್ಸವ ಪೂರೈಸಿದ್ದರು. ಈ ಬೆನ್ನಲ್ಲೇ ವಂಚನೆ ಪ್ರಕರಣವೊಂದರಲ್ಲಿ ರವೀಂದ್ರ ಜೈಲು ಪಾಲಾದ್ರು. ಗಂಡ ಜೈಲು ಸೇರಿದ್ರೆ, ಹೆಂಡತಿ ಮಹಾಲಕ್ಷ್ಮಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ನಡೆಗೆ ನೆಟ್ಟಿಗರು ಕಾಲೆಳೆದಿದ್ದಾರೆ.

ravindra mahalakshmi 2

ಲೈಟ್ ಬಣ್ಣ ಸೀರೆಯಲ್ಲಿ ಮತ್ತೊಂದು ಹಳದಿ ಬಣ್ಣದ ಸೀರೆಯಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿ ಮಿಂಚಿದ್ದಾರೆ. ಬಗೆ ಬಗೆಯ ಭಂಗಿಯಲ್ಲಿ ನಟಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಗಂಡ ಜೈಲಿನಲ್ಲಿದ್ರೆ ನೀವು ಫೋಟೋ ತೆಗೆಸಿ ಮೋಜು ಮಾಡ್ತೀರಾ ಅಂತಾ ಬಗೆ ಬಗೆಯ ಕಾಮೆಂಟ್ಸ್ ಸೋಶಿಯಲ್ ಮೀಡಿಯಾದಲ್ಲಿ ಹರಿದು ಬರುತ್ತಿದೆ. ಇದನ್ನೂ ಓದಿ:ಕಣ್ಮುಂದೆಯೇ ರಶ್ಮಿಕಾ ಇದ್ದರೂ ಮುಖ ತಿರುಗಿಸಿಕೊಂಡು ಹೋದ ಶ್ರದ್ಧಾ ಕಪೂರ್

mahalakshmi 1

ರವೀಂದ್ರ ಚಂದ್ರಶೇಖರ್ ಅವರನ್ನು ವಂಚನೆ ಆರೋಪದ ಮೇಲೆ ತಮಿಳುನಾಡು ಪೊಲೀಸರು ಸೆ.8ರಂದು ಬಂಧಿಸಿದ್ದರು. 16 ಕೋಟಿ ರೂ. ವಂಚಿಸಿದ ಆರೋಪದಲ್ಲಿ ನಿರ್ಮಾಪಕ ರವೀಂದ್ರ ಅವರನ್ನು ಅರೆಸ್ಟ್ ಮಾಡಿದ್ದರು.

mahalakshmi 2ಮಾಧವ ಮೀಡಿಯಾ ಪ್ರೈ. ಲಿಮಿಟೆಡ್‌ನ ಬಾಲಾಜಿ ಕಾಪಾ ಎಂಬ ಉದ್ಯಮಿಗೆ ನಿರ್ಮಾಪಕ ರವೀಂದ್ರ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ತಮ್ಮ ಲಿಬ್ರಾ ಪ್ರೋಡಕ್ಷನ್ಸ್ ಅಡಿ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಹಣ ಹೂಡಿಕೆ ಮಾಡುವಂತೆ ಉದ್ಯಮಿ ಬಾಲಾಜಿ ಅವರನ್ನು ಕೇಳಿದ್ದರು. ಅದರಂತೆ ಉದ್ಯಮಿ ಬಾಲಾಜಿ ಅವರು ರವೀಂದ್ರಗೆ 2020ರ ಸೆಪ್ಟೆಂಬರ್‌ನಲ್ಲಿ 16 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದರು. ಉದ್ಯಮಿ ಬಳಿ ಹಣ ಪಡೆದು ಯೋಜನೆಗೆ ಚಾಲನೆ ನೀಡಿಲ್ಲ. ಪಡೆದ ಹಣವನ್ನು ಹಿಂತಿರುಗಿಸಿಲ್ಲ ಎಂದು ತಮಿಳುನಾಡು ಪೊಲೀಸರಿಗೆ ಉದ್ಯಮಿ ದೂರು ನೀಡಿದ್ದರು.

ಉದ್ಯಮಿ ಬಾಲಾಜಿ ಅವರ ದೂರಿನ ಮೇರೆಗೆ ನಿರ್ಮಾಪಕ ರವೀಂದ್ರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article