ಕನ್ನಡದ ಚಿತ್ರನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ (Soundarya Jagadeesh) ಇಂದು (ಏ.14) ಮಹಾಲಕ್ಷ್ಮಿ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಈಗಾಗಲೇ ಪೊಲೀಸರು ಮನೆಗೆ ಭೇಟಿ ಪರಿಶೀಲನೆ ಕೂಡ ನಡೆಸಿದ್ದಾರೆ. ಜಗದೀಶ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಡಿಸಿಪಿ ಸೈಯದ್ ವುಲ್ಲಾ ಅದಾವತ್ ಪ್ರತಿಕ್ರಿಯೆ ನೀಡಿದ್ದಾರೆ.
ನಿರ್ಮಾಪಕ ಜಗದೀಶ್ ಮನೆಯಲ್ಲಿ ಉತ್ತರ ವಿಭಾಗದ ಡಿಸಿಪಿ ಸೈಯದ್ ವುಲ್ಲಾ ಅದಾವತ್ ಪರಿಶೀಲನೆ ನಡೆಸಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಬೆಳಗ್ಗೆ 9.45ಕ್ಕೆ ಘಟನೆ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಅವರ ಪತ್ನಿ ಈಗಾಗಲೇ ದೂರು ಕೊಟ್ಟಿದ್ದಾರೆ. ಪತ್ನಿ ಕೂಡ ಇದು ಸೂಸೈಡ್ ಎಂದು ಕ್ಲೀಯರ್ ಕಟ್ ಆಗಿ ಹೇಳಿದ್ದಾರೆ ಎಂದು ಡಿಸಿಪಿ ಮಾತನಾಡಿದ್ದರು.
ಇತ್ತೀಚಿಗೆ ಸೌಂದರ್ಯ ಜಗದೀಶ್ ಮಾನಸಿಕವಾಗಿ ತುಂಬಾ ನೊಂದಿದ್ದರು. ಕೆಲ ದಿನಗಳ ಹಿಂದಷ್ಟೇ ಸೌಂದರ್ಯ ಜಗದೀಶ್ ಅತ್ತೆಯ ಮೃತಪಟ್ಟಿದ್ದರು. ಅತ್ತೆಯ ಜೊತೆ ತುಂಬಾ ಉತ್ತಮ ಒಡನಾಟ ಹೊಂದಿದ್ದ ಜಗದೀಶ್, ಅತ್ತೆಯ ಸಾವಿನ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ. ಕೇಸ್ ದಾಖಲಿಸಿಕೊಂಡು ತನಿಖೆ ಮಾಡ್ತಾ ಇದ್ದೀವಿ ಎಂದು ಡಿಸಿಪಿ ಮಾತನಾಡಿದ್ದಾರೆ. ಇದನ್ನೂ ಓದಿ:ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ
ಅಂದಹಾಗೆ, ಏ.15ರಂದು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಸೌಂದರ್ಯ ಜಗದೀಶ್ ಅಂತ್ಯಕ್ರಿಯೆ ನಡೆಯಲಿದೆ. ಇಂದು (ಏ.14) ಜಗದೀಶ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.