Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ಚಿಂತನೆ ಮಾಡಲಾಗುತ್ತಿದೆ: ಅರಗ ಜ್ಞಾನೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ಚಿಂತನೆ ಮಾಡಲಾಗುತ್ತಿದೆ: ಅರಗ ಜ್ಞಾನೇಂದ್ರ

Bengaluru City

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ಚಿಂತನೆ ಮಾಡಲಾಗುತ್ತಿದೆ: ಅರಗ ಜ್ಞಾನೇಂದ್ರ

Public TV
Last updated: September 21, 2021 8:27 pm
Public TV
Share
2 Min Read
SESSION 1 2
SHARE

ಬೆಂಗಳೂರು: ರಾಜ್ಯದಲ್ಲಿ ಬಲವಂತದ ಹಾಗೂ ಆಮಿಷವೊಡ್ಡಿ ಮತಾಂತರ ನಡೆಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ‘ಮತಾಂತರ ನಿಷೇಧ’ ಕಾಯಿದೆಯೊಂದನ್ನು ತರುವ ಚಿಂತನೆ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

GULIHATTI SHEKAR 1

ವಿಧಾನ ಸಭೆಯಲ್ಲಿ ಶೂನ್ಯ ವೇಳೆ ಬಿಜೆಪಿ ಸದಸ್ಯ ಗೂಳಿಹಟ್ಟಿ ಶೇಖರ್ ಅವರು, ತಮ್ಮ ಜಿಲ್ಲೆ ಹಾಗೂ ಮತಕ್ಷೇತ್ರದಲ್ಲಿ ಕೆಲವು ಕ್ರಿಶ್ಚಿಯನ್ ಮಿಷನರೀಸ್ ಹಾಗೂ ಸಂಘಟನೆಗಳು ವ್ಯಾಪಕವಾಗಿ ಬಲವಂತದ ಹಾಗೂ ಆಮಿಷಗಳನ್ನೊಡ್ಡಿ ಮುಗ್ಧ ಜನರನ್ನು ಮತಾಂತರಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆ ಕೆಲವು ಕುಟುಂಬಗಳೇ ಮುರಿದು ಬಿದ್ದಿವೆ. ಇದನ್ನು ತಡೆಯಲು ಸರ್ಕಾರವು ತಕ್ಷಣ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ:  ಯುವತಿಯಿಂದ ಕಾರು ಚಾಲನೆ- ಆಟೋ ಸಂಪೂರ್ಣ ನಜ್ಜುಗುಜ್ಜು

ಶಾಸಕರು ಸ್ವತಃ ತಮ್ಮದೇ ಅನುಭವವನ್ನು ಸದನದಲ್ಲಿ ಹಂಚಿಕೊಂಡಿದ್ದು, ನನ್ನ ತಾಯಿಯನ್ನೇ ಅವರು ಮತಾಂತರಗೊಳಿಸಿದ್ದಾರೆ. ಈ ಪರಿಣಾಮ ಕುಟುಂಬದ ಸದಸ್ಯರಲ್ಲಿ ಕಳವಳವುಂಟಾಗಿದೆ ಎಂದು ಹೇಳಿದರು.

SESSION 3

ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು ಹದಿನೈದರಿಂದ ಇಪ್ಪತ್ತು ಸಾವಿರ ಜನರನ್ನು ಮತಾಂತರಗೊಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ದಲಿತ, ಹಿಂದುಳಿದ ಹಾಗೂ ಮುಸ್ಲಿಂ ಸಮುದಾಯದ ಜನರೂ ಮತಾಂತರಗೊಂಡಿದ್ದಾರೆ. ಮತಾಂತರ ಪ್ರಕ್ರಿಯೆಯನ್ನು ವಿರೋಧಿಸುವವರಿಗೆ ಬೆದರಿಕೆ ಹಾಕಲಾಗುತ್ತಿದ್ದು, ಪೊಲೀಸರನ್ನು ಉಪಯೋಗಿಸಿ ಸುಳ್ಳು ಕೇಸುಗಳನ್ನು ಹಾಕಲಾಗುತ್ತಿದೆ ಎಂದೂ ಸದಸ್ಯರು ತಿಳಿಸಿದರು. ಇದನ್ನೂ ಓದಿ:  ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಕ್ರಮವಹಿಸಬೇಕು: ಕಾರಜೋಳ

tmk araga jnanendra

ಸದಸ್ಯರು ಪ್ರಸ್ತಾಪಿಸಿದ ವಿಷಯಕ್ಕೆ ಅರಗ ಜ್ಞಾನೇಂದ್ರ ಅವರು ಉತ್ತರ ನೀಡಿದ್ದು, ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ. ಆಮಿಷವೊಡ್ಡಿ ಮತಾಂತರ ಮಾಡುವುದು ಕಾನೂನಿಗೆ ವಿರುದ್ಧವಾಗಿದೆ. ಪೊಲೀಸರಿಗೆ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದರು.

ಸೂಕ್ತ ಕಾನೂನನ್ನು ಜಾರಿಗೆ ತರಲು ಚಿಂತನೆ!

ಜನತೆಯ ಮುಗ್ಧತೆ ಅಥವಾ ಇನ್ನಿತರ ಸನ್ನಿವೇಶಗಳನ್ನು ಉಪಯೋಗಿಸಿಕೊಂಡು ಯಾವುದೇ ಸಂಘಟನೆ ಅಥವಾ ಸಂಸ್ಥೆಗಳು ಮತಾಂತರ ಮಾಡುವುದರಿಂದ, ಸಮಾಜದಲ್ಲಿ, ಶಾಂತಿ ಕದಡುವ ಸಂಭವವೂ ಇದೆ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಕಾನೂನನ್ನು ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ಸದನಕ್ಕೆ ತಿಳಿಸಿದರು. ಇದನ್ನೂ ಓದಿ:  ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಕ್ಕೆ ಜೀವಗಳು ಬಲಿ

ಆಮಿಷ ನೀಡಿ ಜನರನ್ನು ಮತಾಂತರ ಗೊಳಿಸುವ ಪ್ರಕ್ರಿಯೆಯಲ್ಲಿ ಒಂದು ವ್ಯವಸ್ಥಿತ ಜಾಲವೇ ಇದೆ. ಅದನ್ನು ಯಾವ ರೀತಿ ತಡೆಗಟ್ಟಲು ಸಾಧ್ಯ ಎಂಬುದರ ಬಗ್ಗೆ ಚರ್ಚೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಸೂಕ್ತ ಕಾನೂನನ್ನು ತರಲಾಗುವುದು. ಶಾಂತಿ ಭಂಗಕ್ಕೆ ಕಾರಣವಾಗುವ ಯಾವುದೇ ಸಂಘಟನೆಗಳ ಅಥವಾ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸದನಕ್ಕೆ ತಿಳಿಸಿದರು.

kj george

ಕಾಂಗ್ರೆಸ್ ಸದಸ್ಯ ಕೆ.ಜೆ.ಜಾರ್ಜ್ ಮಧ್ಯ ಪ್ರವೇಶಿಸಿ ಈ ಕುರಿತು ಮಾತನಾಡಿದ್ದು, ಬಲವಂತವಾಗಿ ಮತಾಂತರಿಸುವ ಯಾವುದೇ ಪ್ರಯತ್ನಕ್ಕೆ ನಮ್ಮ ವಿರೋಧವಿದೆ. ಆದರೆ ಯಾವೊದೋ ಒಂದು ಸಂಘಟನೆ ತಪ್ಪು ಮಾಡಿದರೆ ಅದನ್ನು ಸಾರ್ವತ್ರಿಕವಾಗಿ ದೂಷಿಸುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಹೆಚ್‍ಡಿಕೆ 

Devanand Chavan

ಈ ವೇಳೆ ಜೆಡಿಎಸ್ ಶಾಸಕ ದೇವಾನಂದ್ ಮಾತನಾಡಿ, ತಮ್ಮ ವಿಜಯಪುರ ಜಿಲ್ಲೆಯಲ್ಲಿಯೂ ಮತಾಂತರ ಹಾವಳಿ ಅವ್ಯಾಹತವಾಗಿದೆ. ಬಂಜಾರ ಸಮುದಾಯವನ್ನು ಗುರಿ ಮಾಡಿಕೊಂಡಿರುವ ಕೆಲವು ಸಂಘಟನೆಗಳು ಈ ಕೃತ್ಯ ಮಾಡುತ್ತಿದೆ. ಈ ಸಂಬಂಧ ಶಾಂತಿ ಹಾಗೂ ಕುಟುಂಬದ ಸದಸ್ಯರ ನಡುವೆಯೇ ಸಮನ್ವಯ ಕದಡಿ ಹೋಗಿದೆ. ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಹೇಳಿದರು.

TAGGED:Araga JnanendraBullihatti ShekharConversationJDS MLA DevanandKJ GeorgepoliticsPublic TVಅರಗ ಜ್ಞಾನೇಂದ್ರಕೆ ಜೆ ಜಾರ್ಜ್ಗೂಳಿಹಟ್ಟಿ ಶೇಖರ್ಜೆಡಿಎಸ್ ಶಾಸಕ ದೇವಾನಂದ್ಪಬ್ಲಿಕ್ ಟಿವಿಮತಾಂತರರಾಜಕೀಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

IndiGo Flight
Latest

ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

Public TV
By Public TV
1 hour ago
WhatsApp Image 2026 03 13 at 9.50.51 PM
Districts

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

Public TV
By Public TV
1 hour ago
Auto LPG
Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
By Public TV
2 hours ago
01 7
Big Bulletin

ಬಿಗ್‌ ಬುಲೆಟಿನ್‌ 13 March 2026 ಭಾಗ-1

Public TV
By Public TV
2 hours ago
02 7
Big Bulletin

ಬಿಗ್‌ ಬುಲೆಟಿನ್‌ 13 March 2026 ಭಾಗ-2

Public TV
By Public TV
2 hours ago
03 7
Big Bulletin

ಬಿಗ್‌ ಬುಲೆಟಿನ್‌ 13 March 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?