ತುಮಕೂರು: ಜಮೀನು ವಿವಾದದ ದ್ವೇಷಕ್ಕೆ 84 ತೆಂಗಿನ ಸಸಿಗಳ (Coconut Saplings) ಮಾರಣಹೋಮ ನಡೆದಿರುವ ಘಟನೆ ತುಮಕೂರು (Tumakuru) ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಅಣೆಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ.
ಎರೆಹಳ್ಳಿ ಸರ್ವೆ ನಂಬರ್ 21ರ ಸಾಗುವಳಿ ಜಮೀನಿನಲ್ಲಿದ್ದ 84 ತೆಂಗಿನ ಸಸಿಗಳನ್ನು ದುಷ್ಕರ್ಮಿಗಳು ನಾಶಪಡಿಸಿದ್ದಾರೆ. ಅಣೆಕಟ್ಟೆ ಗ್ರಾಮದ ವೃದ್ಧೆ ಶಿವಮ್ಮ ಅವರಿಗೆ ಸೇರಿದ ಜಮೀನಿನ ವಿವಾದ ಸದ್ಯ ಕೋರ್ಟ್ ಮೆಟ್ಟಿಲೇರಿತ್ತು.
ಈ ದ್ವೇಷಕ್ಕೆ ಜಮೀನಿನಲ್ಲಿದ್ದ ತೆಂಗಿನಸಸಿಗಳನ್ನ ನಾಶ ಮಾಡಿ ದುಶ್ಕೃತ್ಯ ಎಸಗಿದ್ದಾರೆ. ಘಟನೆ ಸಂಬಂಧ ವಿಶ್ವನಾಥ ಮತ್ತು ಕುಮಾರ್ ಎನ್.ಎಸ್ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಉತ್ಸವದಲ್ಲಿ ಮಂಗ್ಲಿ ಕಾರು ಒಡೆದ ಕಿಡಿಗೇಡಿಗಳು- ಮೇಕಪ್ ರೂಂಗೆ ನುಗ್ಗಿ ದಾಂಧಲೆ
ಕೃತ್ಯ ಮಾಡಿದ ಬಳಿಕ ಕಂಡವರ ಜಮೀನಿಗೆ ಹೋದರೆ ಹೀಗೆ ಮಾಡುತ್ತೇವೆ ಮುಂದೆಯೂ ಹೀಗೆ ಮಾಡುತ್ತೇವೆ ಎಂದು ಆರೋಪಿ ಕುಮಾರ್ ತನ್ನ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾನೆ. ಆರೋಪಿ ಕುಮಾರ್ ಸಚಿವ ಮಾಧುಸ್ವಾಮಿ ಬೆಂಬಲಿಗ ಎಂಬ ಆರೋಪ ಬಂದಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k