ಮಡಿಕೇರಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಕೊಡಗು ಜಿಲ್ಲೆಯ ವಿರಾಜಪೇಟೆ ಸಂವಿಧಾನ ರಕ್ಷಣಾ ಹೋರಾಟ ಸಮಿತಿ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ಇತ್ತೀಚೆಗೆ ಅಂಗೀಕೃತವಾದ ಪೌರತ್ವ ತಿದ್ದುಪಡಿ ಮಸೂದೆ ನಮ್ಮ ದೇಶದ ನೈತಿಕ. ಸಾಂವಿಧಾನಿಕ ಸ್ಫೂರ್ತಿ ಮತ್ತು ಜಾತ್ಯಾತೀತ ಪರಂಪರೆಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.
ಪ್ರಗತಿಪರ ಚಿಂತಕರು ಮತ್ತು ವಿಚಾರವಾದಿಗಳಾದ ವಿ.ಪಿ ಶಶಿಧರ್ ಮಾತನಾಡಿ, ಧರ್ಮದ ಆಧಾರದಲ್ಲಿ ಪೌರತ್ವನ್ನು ನೀಡುವುದು ಸಂವಿಧಾನ ಬಾಹಿರ ಅಲ್ಲದೆ ಈ ಮಸೂದೆಯಿಂದ ಮುಸ್ಲಿಮರನ್ನು ಹೊರಗೆ ಇಡಲಾಗಿದೆ. ಮುಸ್ಲಿಮರನ್ನು ಭಾರತದಿಂದ ಹೊರದೂಡುವ ಸಲುವಾಗಿಯೇ ಈ ಮಸೂದೆ ತರಲಾಗಿದೆ. ಹಿಂದೂ ರಾಷ್ಟ್ರದ ಪರಿಕಲ್ಪನೆಯಲ್ಲಿ ಹೊರ ಬರುತ್ತಿರುವ ಅಲ್ಪಸಂಖ್ಯಾತರ ವಿರೋಧಿ ಕಾಯ್ದೆಯನ್ನು ಜಾರಿಗೊಳಿಸಬಾರದು. ನಾವು ಈ ಮಸೂದೆಯನ್ನು ಬಲವಾಗಿ ವಿರೋಧಿಸುವುದರ ಮೂಲಕ ಕೋಮು ಸೌಹಾರ್ದದ ವಾತಾವರಣ ವಿಶ್ವಾಸ ನ್ಯಾಯ ಮತ್ತು ಕಾನೂನಿನ ಆಡಳಿತವನ್ನು ಪ್ರೋತ್ಸಾಹಿಸಿ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯಲು ಸಹಕರಿಸಿ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಪ್ರಧಾ ನರೇಂದ್ರ ಮೋದಿಯ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.