ಬೆಂಗಳೂರು: ಮೊದಲೆಲ್ಲಾ ಸಿಕ್ಕ ಸಿಕ್ಕ ಕಡೆ ಪ್ರತಿಭಟನೆ (Protest) ಮಾಡುತ್ತಿದ್ದರು. ಆದರೆ ಈಗ ಬೆಂಗಳೂರಿನಲ್ಲಿ (Bengaluru) ಸಿಕ್ಕಸಿಕ್ಕ ಕಡೆ ಪ್ರತಿಭಟನೆ ಮಾಡುವಂತಿಲ್ಲ. ಕೋರ್ಟ್ ಆದೇಶದಂತೆ ಫ್ರೀಡಂಪಾರ್ಕ್ (Freedom Park) ಹೊರತುಪಡಿಸಿ ಬೇರಡೆ ಪ್ರತಿಭಟನೆಗೆ ಅವಕಾಶ ಇಲ್ಲ. ಆದರೆ ಸರ್ಕಾರ ಈಗ ಈ ನಿರ್ಧಾರವನ್ನು ಬದಲಾಯಿಸಲು ಕಾನೂನಾತ್ಮಕ ಹೆಜ್ಜೆ ಇಡಲು ಸಜ್ಜಾಗಿದೆ.
ಬೆಂಗಳೂರಿನಲ್ಲಿ ಪ್ರತಿಭಟನೆಗೆ ಫ್ರೀಡಂಪಾರ್ಕ್ ಫಿಕ್ಸ್ ಆಗಿರುವ ಸ್ಥಳ. ಅದನ್ನು ಹೊರತುಪಡಿಸಿ ಬೇರೆ ಕಡೆ ಪ್ರತಿಭಟನೆ ಮಾಡುವಂತಿಲ್ಲ. ಇದು ಹೈಕೋರ್ಟ್ ಆದೇಶ. ಈ ಹಿಂದೆ ಬೆಂಗಳೂರಿನ ಟೌನ್ ಹಾಲ್ ಸೇರಿದಂತೆ ಅನೇಕ ಸ್ಥಳ ಪ್ರತಿಭಟನಾ ಹಾಟ್ಸ್ಪಾಟ್ ಆಗಿತ್ತು. ಆದರೆ ಈಗ ಫ್ರೀಡಂಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆಯ ಬಗ್ಗೆ ಕಟ್ಟುನಿಟ್ಟಿನ ಆದೇಶವಿದೆ. ಹೀಗಾಗಿ ಬೇರೆ ಕಡೆಯೂ ಪ್ರತಿಭಟನೆಗೆ ಅವಕಾಶ ಕೊಡಬೇಕು ಅನ್ನೋದು ಸರ್ಕಾರದ ಮೇಲೆ ಒತ್ತಡ ಇತ್ತು. ಹೋರಾಟಗಾರರ ನಿರಂತರ ಒತ್ತಡದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗುಡ್ನ್ಯೂಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ: ಮಧು ಬಂಗಾರಪ್ಪ
ಇನ್ನುಮುಂದೆ ಫ್ರೀಡಂಪಾರ್ಕ್ನಲ್ಲಿ ಹೊರತುಪಡಿಸಿ, ಟೌನ್ಹಾಲ್ನಲ್ಲಿಯೂ ಪ್ರತಿಭಟನೆಗೆ ಅವಕಾಶ ಕೊಡಲು ಸರ್ಕಾರ ಹೆಜ್ಜೆ ಇಟ್ಟಿದೆ. ಈ ಬಗ್ಗೆ ಖುದ್ದು ಸಿಎಂ ಹೋರಾಟಗಾರರಿಗೆ ಭರವಸೆ ನೀಡಿದ್ದಾರೆ. ಅಡ್ವೋಕೇಟ್ ಜನರಲ್ ಜೊತೆ ಮಾತನಾಡಿ ಟೌನ್ಹಾಲ್ ಮುಂಭಾಗ ಚಳುವಳಿಗೆ ಅವಕಾಶ ಮಾಡಿಕೊಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಈ ಸಂದರ್ಭದಲ್ಲಿ ನಾವು ಮೌನವಾಗಿರುತ್ತೇವೆ; ಭಕ್ತರಿಗೆ ಮೌನವೇ ದೊಡ್ಡ ಸಂದೇಶ: ಜೈಲಿಂದ ಬಂದ ಮುರುಘಾ ಶ್ರೀ
ಬೆಂಗಳೂರಿಲ್ಲಿ ಟ್ರಾಫಿಕ್ ಕಾವು ಕಡಿಮೆ ಮಾಡಲು, ಕೋರ್ಟ್ ಈ ಆದೇಶ ನೀಡಿತ್ತು. ಆದರೆ ಈಗ ಸರ್ಕಾರ ಕಾನೂನಾತ್ಮಕವಾಗಿ ಹೆಜ್ಜೆ ಇಟ್ಟು ಮತ್ತೆ ಟೌನ್ ಹಾಲ್ ಮುಂಭಾಗ ಪ್ರತಿಭಟನೆಗೆ ಅವಕಾಶ ಕೊಡಲು ಮನಸ್ಸು ಮಾಡಿದೆ. ಇದನ್ನೂ ಓದಿ: ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಬೀರಿದೆ – BJP ವ್ಯವಸ್ಥೆ ಹದಗೆಟ್ಟಿದೆ: ಜಗದೀಶ್ ಶೆಟ್ಟರ್