Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕಾಗುವ ಅನ್ಯಾಯದ ಬಗ್ಗೆ ಕೇಂದ್ರದ ಗಮನ ಸೆಳೆಯಲು ಪ್ರತಿಭಟನೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜ್ಯಕ್ಕಾಗುವ ಅನ್ಯಾಯದ ಬಗ್ಗೆ ಕೇಂದ್ರದ ಗಮನ ಸೆಳೆಯಲು ಪ್ರತಿಭಟನೆ: ಡಿಕೆಶಿ

Latest

ರಾಜ್ಯಕ್ಕಾಗುವ ಅನ್ಯಾಯದ ಬಗ್ಗೆ ಕೇಂದ್ರದ ಗಮನ ಸೆಳೆಯಲು ಪ್ರತಿಭಟನೆ: ಡಿಕೆಶಿ

Public TV
Last updated: February 5, 2024 11:38 pm
Public TV
Share
3 Min Read
DK Shivakumar
SHARE

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ (Budget) ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರದ ಗಮನ ಸೆಳೆಯಲು, ನಮ್ಮ ಪಾಲಿನ ಅನುದಾನದ ಬಗ್ಗೆ ಜನರಿಗೆ ಮನದಟ್ಟು ಮಾಡಲು ರಾಜ್ಯ ಸರ್ಕಾರ ದೆಹಲಿಯಲ್ಲಿ (New Delhi) ಹೋರಾಟ ನಡೆಸುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ತಿಳಿಸಿದರು.

ಫೆ.7ರಂದು ರಾಜ್ಯ ಸರ್ಕಾರದ ವತಿಯಿಂದ ನಡೆಯಲಿರುವ ಪ್ರತಿಭಟನೆಯ ಸ್ಥಳ ಜಂತರ್ ಮಂತರ್‌ನಲ್ಲಿ ಪರಿಶೀಲನೆ ನಡೆಸಿ, ಸೋಮವಾರ ರಾತ್ರಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಇಂದು ರಾಜ್ಯ ಸರ್ಕಾರ ನಡೆಸಲಿರುವ ಪ್ರತಿಭಟನಾ ಸ್ಥಳ ಪರಿಶೀಲಿಸಿದ್ದೇನೆ. ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ರಾಜ್ಯ ಸರ್ಕಾರ ನಡೆಸುತ್ತಿರುವ ಹೋರಾಟ ಇದಾಗಿದ್ದು, ಇದು ಪಕ್ಷದ ಹೋರಾಟವಲ್ಲ. ನಮ್ಮ ತೆರಿಗೆ ನಮ್ಮ ಹಕ್ಕು. ನಮ್ಮ ಅನುದಾನ ನಮ್ಮ ಹಕ್ಕು. ನಮ್ಮ ಅಭಿವೃದ್ಧಿ ನಮ್ಮ ಜವಾಬ್ದಾರಿ. ಈ ವಿಚಾರವಾಗಿ ಜನರಿಗೆ ಮನದಟ್ಟು ಮಾಡಬೇಕು. ನಮ್ಮ ಪಾಲಿನ ಅನುದಾನ ಕೊಡಿಸುವುದು ನಮ್ಮ ಜವಾಬ್ದಾರಿ. ಜನ ನಮಗೆ ಮತ ಹಾಕಿ ಅಧಿಕಾರಕ್ಕೆ ತಂದಿದ್ದಾರೆ. ನಾವು ಸಮಾಜದ ಋಣ ತೀರಿಸಬೇಕು. ಬಿಜೆಪಿ ಡಬಲ್ ಎಂಜಿನ್ ಸರ್ಕಾರ ನಮಗೆ ನ್ಯಾಯ ಒದಗಿಸಲಿದೆ ಎಂದು ಭಾವಿಸಿದ್ದೆವು ಎಂದರು. ಇದನ್ನೂ ಓದಿ: ಕೇಂದ್ರದ ವಿರುದ್ಧ ಪ್ರತಿಭಟನೆ ಕಾಂಗ್ರೆಸ್‌ನ ರಾಜಕೀಯ ಸ್ಟಂಟ್: ಬೊಮ್ಮಾಯಿ ಆರೋಪ

ಯಡಿಯೂರಪ್ಪ (BS Yediyurappa) ಅವರು ಸಿಎಂ ಆಗಿದ್ದಾಗ ಒಮ್ಮೆ ತುಮಕೂರಿನ ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಮಂತ್ರಿಗಳ ಮುಂದೆ ಮನವಿ ಮಾಡಿದ್ದು ಬಿಟ್ಟರೆ ಒಂದು ದಿನ ಕೇಂದ್ರ ಸರ್ಕಾರದ ಜೊತೆ ರಾಜ್ಯದ ಹಿತದ ಬಗ್ಗೆ ಚರ್ಚೆ ಮಾಡಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ 27 ಸಂಸದರು ಒಂದು ದಿನ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಸಮಸ್ಯೆ ಬಗ್ಗೆ ಚರ್ಚೆ ಮಾಡಲಿಲ್ಲ. ರಾಜ್ಯ ಬರಕ್ಕೆ ತುತ್ತಾಗಿದ್ದರೂ ಪರಿಹಾರ ಕೊಡಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 400 ಸ್ಥಾನಗಳ ಗಡಿ ದಾಟುತ್ತೆ.. ಬಿಜೆಪಿಗೆ 370 ಸೀಟು ಬರುತ್ತೆ: ಮೋದಿ ಭವಿಷ್ಯ

ನಮ್ಮ ಎಲ್ಲಾ ಶಾಸಕರು, ಪರಿಷತ್ ಸದಸ್ಯರು, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಮೂರ್ನಾಲ್ಕು ಜನ ಮಾತ್ರ ಆರೋಗ್ಯದ ಕಾರಣದಿಂದಾಗಿ ಮನವಿ ಮಾಡಿ ಗೈರಾಗಬಹುದು. ಉಳಿದಂತೆ ಸರ್ಕಾರದ ಜೊತೆಗೆ ಇರುವ ಪಕ್ಷೇತರ ಶಾಸಕರು ಸೇರಿದಂತೆ ಎಲ್ಲಾ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನಮ್ಮ 3ನೇ ಅವಧಿಯಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕತೆಯ ದೇಶವಾಗಲಿದೆ: ಮೋದಿ ಭರವಸೆ

ಅನ್ಯಾಯದ ಬಗ್ಗೆ ಪ್ರಶ್ನಿಸಲು ಬೊಮ್ಮಾಯಿ ಅವರಿಗೆ ಬಾಯಿ ಇಲ್ಲ:
ಈ ಪ್ರತಿಭಟನೆ ರಾಜಕೀಯ ಸ್ಟಂಟ್ ಎಂಬ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ (Basavaraj Bommai) ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ನಮ್ಮಲ್ಲಿ ಯಾರೂ ಸಿನಿಮಾ ನಿರ್ದೇಶಕರು ಹಾಗೂ ನಿರ್ಮಾಪಕರು ಇಲ್ಲ. ನಾನು ಬೊಮ್ಮಾಯಿ ಅವರಿಗೆ ಒಂದು ಸರಳ ಪ್ರಶ್ನೆ ಕೇಳುತ್ತೇನೆ. ಅವರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಘೋಷಣೆ ಮಾಡಿದರು. ಅವರು ಯಾಕೆ ಘೋಷಣೆ ಮಾಡಿದರು? ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 5300 ಕೋಟಿ ಘೋಷಣೆ ಮಾಡಿದ್ದಕ್ಕೆ ಇವರು ತಮ್ಮ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಅಂದಮೇಲೆ ಹಣ ಕೊಡಿಸುವುದು ಅವರ ಜವಾಬ್ದಾರಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 10 ವರ್ಷಗಳಲ್ಲಿ ಬಿಜೆಪಿಯಿಂದಾದ ಅಭಿವೃದ್ಧಿ ಕೆಲಸ ಮಾಡಲು ಕಾಂಗ್ರೆಸ್‌ಗೆ 100 ವರ್ಷ ಬೇಕಾಗುತ್ತೆ: ಮೋದಿ ವ್ಯಂಗ್ಯ

ರಾಜ್ಯಕ್ಕೆ ಬರಬೇಕಾದ ಹಣ ಕೇಳುವುದು ರಾಜಕೀಯ ಸ್ಟಂಟ್ ಆಗುತ್ತದೆಯೇ? ರಾಜ್ಯದ ಪಾಲನ್ನು ಕೇಳಲು ನಿಮಗೆ ಬಾಯಿ ಇಲ್ಲವಾದರೆ ನಮಗೂ ಇರುವುದಿಲ್ಲವೇ? ಇನ್ನು ಬರದ ವಿಚಾರವಾಗಿ ಕಂದಾಯ ಸಚಿವರು ಹಾಗೂ ಕೃಷಿ ಸಚಿವರು ಕೇಂದ್ರಕ್ಕೆ ಮನವಿ ಮಾಡಿಲ್ಲವೇ? ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿಲ್ಲವೇ? ಸಭೆ ಮಾಡಿ ಪರಿಹಾರ ನೀಡುತ್ತೇವೆ ಎಂದರು. ಆದರೂ ನೀಡಲಿಲ್ಲ. ನಾವು ಅವರ ಪರಿಹಾರ ಮೊತ್ತ ಕಾಯದೆ 35 ಲಕ್ಷ ರೈತರಿಗೆ 2 ಸಾವಿರ ಪರಿಹಾರ ನೀಡಿದ್ದೇವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ.. ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ?- ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

TAGGED:Basavaraj BommaibjpbudgetcongressDK ShivakumarNew Delhiಕಾಂಗ್ರೆಸ್ಡಿಕೆ ಶಿವಕುಮಾರ್ನವದೆಹಲಿಬಜೆಟ್ಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
7 minutes ago
Mojtaba Khamenei
Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
By Public TV
24 minutes ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
25 minutes ago
Bihar Stampede
Latest

ಬಿಹಾರದ ದೇವಾಲಯದಲ್ಲಿ ಕಾಲ್ತುಳಿತ – 8 ಮಂದಿ ಸಾವು; ಹಲವರಿಗೆ ಗಾಯ

Public TV
By Public TV
41 minutes ago
Bengaluru Techie Couple Suicide Kothanur
Bengaluru City

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

Public TV
By Public TV
55 minutes ago
DK Shivakumar 1 1
Bengaluru City

ಹಳ್ಳಿಗಳಿಗೂ ಗ್ಯಾಸ್‌ ತಂದ್ರು, ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು: ಕೇಂದ್ರಕ್ಕೆ ಡಿಕೆಶಿ ಪ್ರಶ್ನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?