ಬೆಂಗಳೂರು: ಖಾಸಗಿ ಶಾಲೆಗಳ ದುಬಾರಿ ಶುಲ್ಕವನ್ನು ಖಂಡಿಸಿ ಕರವೇ ಯುವ ಸೇನೆಯಿಂದ ಇಂದು ಧರಣಿ ನಡೆಸಲಾಗಿದ್ದು, ಈ ವೇಳೆ ಕಾರ್ಯಕರ್ತರು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ನಿವಾಸದ ಮೇಲೆ ಮುತ್ತಿಗೆ ಹಾಕಿ ಮನೆಯಲ್ಲಿರುವ ಪಾಟ್ ಮತ್ತು ಕಿಟಕಿ ಗಾಜುಗಳನ್ನ ಒಡೆದಿದ್ದಾರೆ.
ಸಚಿವ ತನ್ವೀರ್ ಸೇಠ್ ಮನೆಯ ಮುಂದೆ ಕರವೇ ಪ್ರತಿಭಟನೆ ನಡೆಯುತ್ತಿದ್ದಾಗ ಹೈಗ್ರೌಂಡ್ಸ್ ಠಾಣೆ ಪೊಲೀಸರು ತಡವಾಗಿ ಆಗಮಿಸಿದ್ರು. ಬಳಿಕ ಮನೆ ಮುಂದೆ ಕುಳಿತುಕೊಳ್ಳಲು ಮುಂದಾದ ಕೆಲ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ್ರು.
ಪ್ರತಿಭಟನೆ ನಡೆಯುತ್ತಿದ್ದಂತೆಯೇ ಮನೆಯಿಂದ ಹೊರಬಂದ ಸಚಿವರು ಪ್ರತಿಭಟನಾಕಾರರ ಜೊತೆ ಮಾತನಾಡಿ, ಏಕಾಏಕಿ ಮನಗೆ ನುಗ್ಗೋದು ಪ್ರವೃತ್ತಿ ಅಲ್ಲ. ಬಂದಂತಹ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವುದು ನನ್ನ ಕರ್ತವ್ಯ. ನಾವು ಸಾರ್ವಜನಿಕರಿಂದ ಆಯ್ಕೆ ಅಗಿದ್ದೀವಿ. ನನಗೆ ರಕ್ಷಣೆ ಇದೆ. ಲಿಖಿತವಾಗಿ ದೂರು ಕೊಟ್ರೆ ನಾನು ಕ್ರಮ ಕೈಗೊಳ್ತೇನೆ. ಯಾವುದೇ ಸ್ಪಷ್ಟ ಸಮಸ್ಯೆ ಇಲ್ಲದೆ ಪ್ರತಿಭಟನೆ ಮಾಡಿದ್ರೆ ಅದು ವ್ಯರ್ಥ. ಲಿಖಿತವಾಗಿ ಸಮಸ್ಯೆಗಳನ್ನು ನನಗೆ ತಿಳಿಸಿ ನಾನು ಪ್ರಯತ್ನ ಮಾಡ್ತೆನೆ ಅಂತ ಭರವಸೆ ನೀಡಿದ್ರು.
ಇಲ್ಲಿಯವರೆಗೆ ಈ ಬಗ್ಗೆ ನನಗೆ ಯಾವುದೇ ದೂರುಗಳು ಬಂದಿಲ್ಲ. ಖಾಸಗಿ ಶಾಲೆಗಳ ದುಬಾರಿ ಶುಲ್ಕದ ವಿರುದ್ಧ ಕ್ರಮ ತೆಗೆದುಕೊಳ್ಳೋ ಭರವಸೆ ನೀಡಿದ್ದೀನಿ. ಇಲಾಖೆಯ ವರದಿಗಳನ್ನು ತರಿಸಿಕೊಂಡು ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಮತ್ತು ಡಿಸಿಗಳಿಗೆ ಈ ಬಗ್ಗೆ ಸೂಚನೆ ನೀಡಲಾಗುವುದು. ರಾಜ್ಯದ ಜೀವ ಭಾಷೆ, ನೆಲದ ಬಗ್ಗೆ ನಾವು ಬದ್ಧರಾಗಿದ್ದೇವೆ ಅಂತ ಹೇಳಿದ್ರು.