Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

PSI ನೇಮಕಾತಿಯಲ್ಲಿ ಅಕ್ರಮː ಪ್ರಮುಖ ಆರೋಪಿ ದಿವ್ಯಾ ಹಾಗರಗಿ – ಡಿಕೆಶಿ ಜೊತೆಗಿರುವ ಫೋಟೋ ವೈರಲ್

Public TV
Last updated: April 26, 2022 6:16 pm
Public TV
Share
2 Min Read
DKS SHIVAKUMAR
SHARE

ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಯುತ್ತಿದ್ದು, ದಿನಕ್ಕೊಂದು ಸ್ಪೋಟಕ ಮಾಹಿತಿಗಳು ಹೊರಬೀಳುತ್ತಿವೆ.

ಈ ಬೆನ್ನಲ್ಲೇ ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾತನಾಡುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಮುಂದೆ ಹಲವು ಪ್ರಶ್ನೆಗಳನ್ನು ಇಟ್ಟಿದೆ. ಇದನ್ನೂ ಓದಿ: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ, ಸಿಎಂ ಬದಲಾವಣೆ ಸಾಧ್ಯವೇ ಇಲ್ಲ: ಜಗದೀಶ್ ಶೆಟ್ಟರ್

ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ.

ಆದರೆ ಇಲ್ಲಿ‌‌ ನೋಡಿ..!!! ಈ ಚಿತ್ರ ಏನು ಹೇಳುತ್ತದೆ?

ಎಷ್ಟೊಂದು ತನ್ಮಯತೆಯಿಂದ ಮಾತನಾಡುತ್ತಿದ್ದಾರೆ!

ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ?#CONgressPSIToolkit pic.twitter.com/qnEPtdjRa6

— BJP Karnataka (@BJP4Karnataka) April 26, 2022

ಪ್ರಿಯಾಂಕ್ ಖರ್ಗೆಯವರೇ ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಜೊತೆ ಇದೆ ಎಂದು ಆಪಾದಿಸಿದೀರಿ. ಆದರೆ ಇಲ್ಲಿ ನೋಡಿ… ಈ ಚಿತ್ರ ಏನು ಹೇಳುತ್ತದೆ? ಎಂದು ಬಿಜೆಪಿ ಪ್ರಶ್ನಿಸಿದೆ. ಎಷ್ಟೊಂದು ತನ್ಮಯತೆಯಿಂದ ಮಾತಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ದಿವ್ಯಾ ಹಾಗರಗಿ ಜೊತೆಗಿರುವ ಚಿತ್ರವನ್ನು ತಮ್ಮ ಬಿಜೆಪಿ ಕರ್ನಾಟಕ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದೆ.

ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ -ಬಾದಾಮಿ ತಿಂದಿರಬಹುದು ಎಂಬುದನ್ನು ವಿವರಿಸಬಹುದೇ? ಎಂದೂ ಬಿಜೆಪಿ ಲೇವಡಿ ಮಾಡಿ, ನೀವೆಷ್ಟೇ ರಹಸ್ಯ ಕಾರ್ಯಾಚರಣೆ ನಡೆಸಿದರೂ ಸತ್ಯ ಒಂದಿಲ್ಲೊಂದು ದಿನ ಬಯಲಾಗಲೇಬೇಕಲ್ಲವೇ? ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರೀ ದಂಡ – ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?

ಸಿದ್ದರಾಮಯ್ಯ ಅವರೇ, ಗೋವಿಂದರಾಜ್ ಡೈರಿಯಲ್ಲಿ ನಿಮ್ಮ ಪರ್ಸಂಟೇಜ್ ವ್ಯವಹಾರದ ಲೆಕ್ಕವಿತ್ತೇ?

ಅಡಿಯಿಂದ ಮುಡಿಯವರೆಗೂ ಭ್ರಷ್ಟಾಚಾರವನ್ನು ಹೊದ್ದು ಮಲಗಿದ ಸರ್ಕಾರ ನಿಮ್ಮದಾಗಿತ್ತು ಎಂಬುದು ಡೈರಿಯೇ ಹೇಳುತ್ತಿತ್ತು.

ತಾನು ಕಳ್ಳ ಪರರ ನಂಬ ಎಂಬ ಮಾತು @siddaramaiah ಅವರಿಗೆ ಹೇಳಿ ಮಾಡಿಸಿದ ಹಾಗಿದೆ.#CONgressPSIToolkit pic.twitter.com/eazf8XLuKG

— BJP Karnataka (@BJP4Karnataka) April 26, 2022

ಪಿಎಸ್‌ಐ ನೇಮಕ ಹಗರಣ ಕಾಂಗ್ರೆಸ್ ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್ ಎಂದು ಸಾರಿ ಸಾರಿ ಹೇಳುವುದಕ್ಕೆ ಸಾಕ್ಷ್ಯ ಇಲ್ಲಿದೆ. ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರಕ್ಕೆ ಕೆಪಿಸಿಸಿ ಅಧ್ಯಕ್ಷರ ಸದಾಶಿವನಗರದ ಬಂಗಲೆಯೇ ಪ್ರಮುಖ ಅಡ್ಡಾವಾಗಿದೆ. ಅಧಿಕಾರ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ ಎಂದೂ ಹೇಳಿದೆ. ಇದನ್ನೂ ಓದಿ: ತಾಳಿ ಭಾಗ್ಯ, ಅನ್ನ ಭಾಗ್ಯದಂತಹ ದರಿದ್ರ ಭಾಗ್ಯಗಳು ಬೇಡ: ಸಿಎಂ ಮುಂದೆ ಯತ್ನಾಳ್ ಕಿಡಿ

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ನಡೆಸುತ್ತಿರುವ ಪ್ರತಿಯೊಂದು ಷಡ್ಯಂತ್ರಕ್ಕೂ ಈಗ ದಾಖಲೆ ಲಭಿಸುತ್ತಿದೆ. ಸಿಡಿ ವಿವಾದ, ಹಿಜಾಬ್ ಸಂಘರ್ಷ, 40 ಪರ್ಸೆಂಟ್ ಕಮಿಷನ್, ಹರ್ಷನ ಕೊಲೆ, ಹುಬ್ಬಳ್ಳಿ ಗಲಭೆ, ಪಿಎಸ್‌ಐ ನೇಮಕ ಹಗರಣ ಎಲ್ಲದಕ್ಕೂ ಸೂತ್ರಧಾರ ಒಬ್ಬರೇ, ಅದು ಡಿ.ಕೆ.ಶಿವಕುಮಾರ್ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಪಿಎಸ್‌ಐ ನೇಮಕಾತಿ ಪರೀಕ್ಷೆಗೆ ಬ್ಲೂಟೂತ್ ಮೂಲಕ ಉತ್ತರ ರವಾನಿಸಿದ್ದ ಕಾಂಗ್ರೆಸ್ ಮುಖಂಡನ ಬಂಧನ ಎನ್ನುವ ಪತ್ರಕಾ ವರದಿಯನ್ನೂ ಟ್ವೀಟ್ ಮಾಡಿದೆ.

d k shivakumar

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಟ್ವೀಟ್ ವಾರ್ ನಡೆಸಿರುವ ಬಿಜೆಪಿ, ಸಿದ್ದರಾಮಯ್ಯ ಅವರೇ, ಗೋವಿಂದರಾಜ್ ಡೈರಿಯಲ್ಲಿ ನಿಮ್ಮ ಪರ್ಸಂಟೇಜ್ ವ್ಯವಹಾರದ ಲೆಕ್ಕವಿತ್ತೇ? ಅಡಿಯಿಂದ ಮುಡಿಯವರೆಗೂ ಭ್ರಷ್ಟಾಚಾರ ಹೊದ್ದು ಮಲಗಿದ ಸರ್ಕಾರ ನಿಮ್ಮದಾಗಿತ್ತು ಎಂಬುದು ಡೈರಿಯೇ ಹೇಳುತ್ತಿತ್ತು. ತಾನೇ ಕಳ್ಳ ಪರರನ್ನು ನಂಬಬೇಡ ಎನ್ನುವ ಮಾತು ಸಿದ್ದರಾಮಯ್ಯ ಅವರಿಗೆ ಹೇಳಿಮಾಡಿಸಿದಂತಿದೆ ಎಂದು ಸರಣಿ ಟ್ವೀಟ್‌ಗಳನ್ನು ಮಾಡಿದೆ.

TAGGED:bjpBS YediyurappacongressDivya hagaragiDK ShivakumarPSI Recruitmentsiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ದಿವ್ಯಾ ಹಾಗರಗಿಪಿಎಸ್‍ಐ ನೇಮಕಾತಿಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
11 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
13 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
14 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
14 hours ago

You Might Also Like

Hemavati Reservior
Districts

ಹಾಸನದಲ್ಲಿ ಮುಂದುವರಿದ ಮಳೆ – ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವು

Public TV
By Public TV
32 minutes ago
Mangaluru 3
Dakshina Kannada

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

Public TV
By Public TV
34 minutes ago
Kodagu 1
Crime

ಕೊಡಗು | ಪೊನ್ನಂಪೇಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
1 hour ago
Covid Positive
Bengaluru City

ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೋವಿಡ್ ಆಕ್ಟೀವ್ ಕೇಸ್

Public TV
By Public TV
1 hour ago
rohit sharma 2
Cricket

ರೋ’ಹಿಟ್‌’ ಆಟಕ್ಕೆ ಗಿಲ್‌ ಪಡೆ ಡಲ್‌; ಮುಂಬೈಗೆ 20 ರನ್‌ಗಳ ಜಯ – ಫೈನಲ್‌ ಸ್ಥಾನಕ್ಕೆ ಪಂಜಾಬ್‌ ವಿರುದ್ಧ ಫೈಟ್‌

Public TV
By Public TV
8 hours ago
KARAVE NARAYAN GOWDA
Bengaluru City

ಕಮಲ್ ಹಾಸನ್ ಚಿತ್ರ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ತೀವಿ: ನಾರಾಯಣಗೌಡ ಎಚ್ಚರಿಕೆ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?