ಉಡುಪಿ: ಕುಂದಾಪುರದಲ್ಲಿರುವ ಖಾಸಗಿ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನೆಲ್ಯಾಡಿ ಮೂಲದ ಆನಂದ ಗೌಡ ನೇಣಿಗೆ ಶರಣಾದ ಉಪನ್ಯಾಸಕ. ಕುಂದಾಪುರ ಅಂಕದಕಟ್ಟೆ ಬಾಡಿಗೆ ಮನೆಯಲ್ಲಿ ಇಂದು ಬೆಳಗ್ಗೆ ನೇಣಿಗೆ ಶರಣಾಗಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆಯಾಗಿದೆ.
ಎರಡು ತಿಂಗಳ ಹಿಂದೆ ಆನಂದ್ ಅವರ ಮದುವೆ ನಡೆದಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.