ಬೆಂಗಳೂರು: ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಮುಕ್ತ ಅವಕಾಶ ನೀಡಬೇಕೆಂದು ವಿಶ್ವ ಹಿಂದು ಪರಿಷದ್ ಆಗ್ರಹಿಸಿದೆ.
ಹಿಂದುಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ಶ್ರೀ ಗಣೇಶೋತ್ಸವವನ್ನು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಾರ್ವಜನಿಕ ಪೆಂಡಾಲುಗಳಲ್ಲಿ ಗಣೇಶೋತ್ಸವ ನಡೆಸಲು ಕಳೆದ ವರ್ಷ ಅವಕಾಶ ನೀಡಲಾಗಿತ್ತು.
ಈ ವರ್ಷವೂ ಸಹ ಭಕ್ತರ ಭಾವನೆಗಳಿಗೆ ಧಕ್ಕೆ ಯಾಗದಂತೆ ವಿಘ್ನ ವಿನಾಶಕನಾದ ಶ್ರೀ ಗಣೇಶನ ಪರಂಪರಾಗತ ಉತ್ಸವವನ್ನು (ಕರೋನಾ ನಿಯಮಗಳನ್ನು ಪಾಲಿಸಿ ಕೊಂಡು) ಸಾರ್ವಜನಿಕವಾಗಿ ಪೆಂಡಾಲುಗಳಲ್ಲಿ ಆಚರಿಸಲು ಮುಕ್ತ ಅವಕಾಶ ನೀಡಬೇಕೆಂದು ವಿ.ಹಿಂ.ಪ ಆಗ್ರಹ ಪೂರ್ವಕವಾಗಿ ರಾಜ್ಯ ಸರ್ಕಾರಕ್ಕೆ ವಿನಂತಿ ಮಾಡುತ್ತದೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಹೇಳಿದ್ದಾರೆ. ಇದನ್ನೂ ಓದಿ: ತಾಲಿಬಾನಿಗಳನ್ನ RSS, ಬಜರಂಗದಳಕ್ಕೆ ಹೋಲಿಸಿದ ಕವಿ ಮುನ್ವರ್ ರಾಣಾ