ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅನಿರುದ್ಧ್ ಶ್ರವಣ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅನಿರುದ್ಧ್ ಶ್ರವಣ್ ಅವರು, ಜಿಲ್ಲೆಯ ಸಮಸ್ತ ಅಭಿವೃದ್ಧಿ, ಹಾಗೂ ಪಾರದರ್ಶಕ ಆಡಳಿತ ನಡೆಸಲು ಎಲ್ಲಾ ಕಾನೂನಾತ್ಮಕ ಕ್ರಮಗಳನ್ನ ಕೈಗೊಳ್ಳುವುದಾಗಿ ಭರವಸೆ ನೀಡಿದರು.
- Advertisement 2
ಇದೇ ವೇಳೆ ಜಿಲ್ಲೆಯ ಯಾವುದೇ ಅಭಿವೃದ್ಧಿ ಕಾರ್ಯಗಳ ಕುರಿತು ಸಾರ್ವಜನಿಕರು ನೇರ ಮಾಹಿತಿ ಪಡೆಯಬಹುದು. ಈ ವಿಚಾರದಲ್ಲಿ ಮಾಧ್ಯಮಗಳಿಗೂ ಹೆಚ್ಚಿನ ಜವಾಬ್ದಾರಿ ಇದೆ. ತಮ್ಮ ಕಾರ್ಯಕ್ಕೆ ಮಾಧ್ಯಮಗಳು ಸಹ ಸಹಕಾರ ನೀಡಬೇಕು. ಸರ್ಕಾರ ಕೈಗೊಳ್ಳುವ ಎಲ್ಲಾ ಯೋಜನೆಗಳು ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ. ಜಿಲ್ಲೆಯಲ್ಲಿ 2 ವರ್ಷ ಸೇವೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಪ್ರಮುಖ ಸಮಸ್ಯೆಗಳ ಪರಿಹಾರ ಕೈಗೊಳ್ಳುವ ಕಾರ್ಯ ಮಾಡಲಾಗುವುದು ಎಂದರು. ಇದೇ ವೇಳೆ ಜಿಲ್ಲೆಯ ಗಂಭೀರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
- Advertisement 3
ಈ ಹಿಂದೆ ಕಲಬುರಗಿ ಜಿಲ್ಲಾಪಂಚಾಯತ್ ಸಿಇಓ ಆಗಿ 2 ವರ್ಷ ಕಾರ್ಯನಿರ್ವಹಿದ್ದ ಅನಿರುದ್ಧ್ ಶ್ರವಣ್ ಅವರು ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದರು. ಅಲ್ಲದೇ ಪಬ್ಲಿಕ್ ಟಿವಿಯ ಪಬ್ಲಿಕ್ ಹೀರೋ ಖ್ಯಾತಿಗೆ ಭಾಜನರಾಗಿದ್ದರು. ಬಳಿಕ ಅವರಿಗೆ ಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಲಾಗಿದೆ.
- Advertisement 4
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿದ್ದ ದೀಪ್ತಿ ಅದಿತ್ಯಾ ಕಾನಡೆ ಅವರು ದೀರ್ಘಾವಧಿ ರಜೆ ಪಡೆದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಅನಿರುದ್ಧ್ ಶ್ರವಣ್ ರನ್ನ ಸರ್ಕಾರ ನೇಮಕ ಮಾಡಿದೆ.