Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಸಾಯ್ತು 30 ವರ್ಷಗಳ ಅರಣ್ಯದ ಕನಸು – 10 ಎಕರೆಯಲ್ಲಿ ತಲೆಯೆತ್ತಿದೆ ಸಮೃದ್ಧ ಕಾಡು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ನನಸಾಯ್ತು 30 ವರ್ಷಗಳ ಅರಣ್ಯದ ಕನಸು – 10 ಎಕರೆಯಲ್ಲಿ ತಲೆಯೆತ್ತಿದೆ ಸಮೃದ್ಧ ಕಾಡು

Dakshina Kannada

ನನಸಾಯ್ತು 30 ವರ್ಷಗಳ ಅರಣ್ಯದ ಕನಸು – 10 ಎಕರೆಯಲ್ಲಿ ತಲೆಯೆತ್ತಿದೆ ಸಮೃದ್ಧ ಕಾಡು

Public TV
Last updated: September 24, 2019 8:39 am
Public TV
Share
2 Min Read
MNG PUTTUR
SHARE

-ಸರ್ಕಾರವನ್ನೇ ನಾಚಿಸಿದ ಪುತ್ತೂರಿನ ಸದಾಶಿವ ಮರಿಕೆ

ಮಂಗಳೂರು: ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ.

vlcsnap 2019 09 24 08h32m08s123 e1569294537449

ಪರಿಸರದ ಬಗ್ಗೆ ಅತಿಯಾದ ಕಾಳಜಿ ಇರುವ ಸದಾಶಿವ ಮರಿಕೆ ತಮ್ಮಿಂದ ಏನಾದರೂ ಈ ಪ್ರಕೃತಿಗೆ ಅಳಿಲು ಸೇವೆ ಮಾಡಬೇಕೆಂದು ಕಳೆದ 30 ವರ್ಷಗಳ ಹಿಂದೆ ಕಂಡಿದ್ದ ಕನಸನ್ನು ಇದೀಗ ನನಸಾಗಿಸಿದ್ದಾರೆ. ನಾಶವಾಗುತ್ತಿರುವ ಪರಿಸರವನ್ನು ಉಳಿಸಬೇಕು, ಜೊತೆಗೆ ಪ್ರಾಣಿ ಪಕ್ಷಿಗಳಿಗೆ ಅದರಿಂದ ಸಹಕಾರಿ ಆಗಬೇಕೆಂದುಕೊಂಡ ಸದಾಶಿವರವರು ಅದಕ್ಕಾಗಿ ದಟ್ಟ ಅರಣ್ಯವನ್ನು ಮಾಡಬೇಕೆಂದು ಪಣ ತೊಟ್ಟಿದ್ದರು. ಅದರಂತೆ ತಮ್ಮ ಪೂರ್ವಜರಿಂದ ಬಂದಿರುವ ಒಟ್ಟು 25 ಎಕರೆ ಜಮೀನಿನ ಪೈಕಿ ಕೃಷಿ ರಹಿತ ಹತ್ತು ಎಕರೆ ಬರಡು ಭೂಮಿಯಲ್ಲಿ ಕಾಡು ಬೆಳೆಸಬೇಕೆಂದು ನಿರ್ಧರಿಸಿದ್ದರು. ಅದಕ್ಕಾಗಿ ಕಾಡಿನಲ್ಲಿರುವ ವಿವಿಧ ತಳಿಯ ಮರಗಳ ಗಿಡಗಳನ್ನು ತಂದು ಗುಡ್ಡದ ಉದ್ದಕ್ಕೂ ನೆಟ್ಟಿದ್ದರು.

PUTTUR 1

30 ವರ್ಷಗಳ ಸತತ ಪರಿಶ್ರಮದ ಬಳಿಕ ಗಿಡಗಳು ಮರವಾಗಿ ಬೆಳೆದಿದ್ದು ಇದೀಗ ದಟ್ಟ ಅರಣ್ಯವಾಗಿದೆ. ತಮ್ಮ ಸ್ವಂತ ಜಮೀನಿನಲ್ಲೇ ಅರಣ್ಯ ಇಲಾಖೆ ಹಾಗೂ ಸರ್ಕಾರವನ್ನು ನಾಚಿಸುವಂತಹ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇದರಿಂದಾಗಿ ಒಂದೆಡೆ ಸಮೃದ್ಧ ಕಾಡು, ಅದರಿಂದಾಗಿ ಜಮೀನಿನಲ್ಲಿ ನೀರಿನ ಉತ್ಪತ್ತಿಯೂ ಆಗಿದೆ. ಇದೀಗ ತಾವೇ ಬೆಳೆಸಿದ ದಟ್ಟ ಅರಣ್ಯದಲ್ಲಿ ಪ್ರತಿದಿನ ಒಂದು ಸುತ್ತು ಹೊಡೆಯುವ ಸದಾಶಿವರವರು ಅರಣ್ಯದಿಂದ ತೃಪ್ತಿ ಕಂಡಿದ್ದಾರೆ. ಕಾಡಿನಲ್ಲಿ ಹಕ್ಕಿಗಳ ಇಂಚರ, ಚಿಲಿಪಿಲಿಯ ನಾದ ಕೇಳುತ್ತಾರೆ. ಭೂಮಿಯಲ್ಲಿ ಕಾಡು, ಹಸಿರು ಇಲ್ಲದೇ ಇದ್ದರೆ ಮನುಷ್ಯನ ಉಳಿವು ಸಾಧ್ಯವಿಲ್ಲ ಎಂಬುವುದು ಸದಾಶಿವ ಅವರ ಮಾತು.

vlcsnap 2019 09 24 08h33m52s144

ಆರಂಭದಲ್ಲಿ ಜಮೀನಿನ ಮಧ್ಯೆ ಇದ್ದ ಕೆರೆಯಿಂದಲೇ ಗಿಡಗಳಿಗೆ ನೀರುಣಿಸುತ್ತಿದ್ದರು. ಬೇಸಿಗೆಯಲ್ಲಿ ನೀರು ಪೂರೈಸುವುದು ಕಷ್ಟವೂ ಆಗಿತ್ತು. ಆದರೆ ಕಾಡು ಬೆಳೆದಂತೆ ಜಮೀನಿನಲ್ಲಿ ನೀರಿನ ಸಮಸ್ಯೆಯೂ ಇಲ್ಲದಾಗಿದೆ. ಕಾಡಿನ ಮಧ್ಯೆ ಬಿದ್ದ ಮಳೆ ನೀರು ಅಲ್ಲಿಯೇ ಇಂಗುವಂತೆ ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ಈಗ ಒಂದೆಡೆ ಸಮೃದ್ಧ ಕಾಡು, ಇನ್ನೊಂದೆಡೆ ಯಾವ ಬರಗಾಲ ಬಂದರೂ ಕಡಿಮೆಯಾಗದಷ್ಟು ಯಥೇಚ್ಛ ನೀರು ಜಮೀನಿನಲ್ಲಿ ಸೃಷ್ಟಿಯಾಗಿದ್ದು ಕೃಷಿ ಬದುಕಿನಲ್ಲಿ ಸಂತೃಪ್ತಿ ಕಂಡಿದ್ದಾರೆ. ಇವರ ದಟ್ಟ ಕಾಡಿನಿಂದಾಗಿ ಅಕ್ಕಪಕ್ಕದ ಜಮೀನುಗಳಲ್ಲಿಯೂ ಅಂತರ್ಜಲ ಮಟ್ಟ ಹೆಚ್ಚಾಗಿದೆ.

PUTTUR

ಕಾಡು ಕಡಿದು ನಾಶ ಮಾಡುವ ಸರ್ಕಾರ, ತಮ್ಮ ಜಮೀನುಗಳಲ್ಲಿ ಬೆಳೆದು ನಿಂತ ಮರಗಳನ್ನು ಕಡಿದು ಮಾರಾಟ ಮಾಡೋ ಜನಸಾಮಾನ್ಯರ ಮಧ್ಯೆ ಸದಾಶಿವ ಮರಿಕೆ ತಮ್ಮದೇ ಜಾಗದಲ್ಲಿ ದಟ್ಟಾರಣ್ಯವನ್ನೇ ಬೆಳೆಸಿ ಗಮನ ಸೆಳೆದಿದ್ದಾರೆ.

TAGGED:agricultureenvironmentground waterMangaluruPublic TVpubluic heroPutturuಅಂತರ್ಜಲಅರಣ್ಯಕೃಷಿಪಬ್ಲಿಕ್ ಟಿವಿಪಬ್ಲಿಕ್ ಹೀರೋಪರಿಸರಪುತ್ತೂರುಮಂಗಳೂರು
Share This Article
Facebook Whatsapp Whatsapp Telegram

Cinema news

Kiara Adwani
ಯಶ್ ನಾಯಕಿ ಕಿಯಾರಾ ಫಸ್ಟ್ ಲುಕ್.. ಅಬ್ಬಬ್ಬಾ ಬೆಂಕಿ !
Cinema Latest Sandalwood Top Stories
jodettu chikkanna
ಹೊಸ ವರ್ಷಕ್ಕೆ ಚಿಕ್ಕಣ್ಣ ನಟನೆಯ ‘ಜೋಡೆತ್ತು’ ಶೂಟಿಂಗ್ ಶುರು
Cinema Latest Sandalwood Top Stories
sudeep 1 1
ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು – ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ; ಗುಡುಗಿದ ಕಿಚ್ಚ
Cinema Dharwad Latest Sandalwood Top Stories
Nora Fatehi
ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌
Bollywood Cinema Latest Main Post

You Might Also Like

ozempic
Explainer

PublicTV Explainer: ಮಧುಮೇಹಿಗಳು, ಸ್ಥೂಲಕಾಯರಿಗೆ ಗುಡ್ ನ್ಯೂಸ್; ಭಾರತಕ್ಕೆ ಬಂತು ಓಝೆಂಪಿಕ್ – ಏನಿದು ಔಷಧಿ?

Public TV
By Public TV
2 minutes ago
U19 Asia Cup Pakistan
Cricket

U19 Asia Cup Final: ಭಾರತ ಮಣಿಸಿ 2ನೇ ಬಾರಿಗೆ ಏಷ್ಯಾ ಕಪ್‌ ಗೆದ್ದ ಪಾಕಿಸ್ತಾನ

Public TV
By Public TV
41 minutes ago
Sabarimala Theft Case
Bellary

ಶಬರಿಮಲೆ ಚಿನ್ನ ಕಳ್ಳತನ ಕೇಸ್ – ಆರೋಪಿ ಮಾಸ್ಟರ್ ಪ್ಲ್ಯಾನ್‌ಗೆ ಕೇರಳ SIT ಶಾಕ್

Public TV
By Public TV
1 hour ago
mlc keshava prasad toll clash
Latest

ಯಾರಿಗೆ ಹೇಳ್ತೀರಾ ಹೇಳಿ..: ರಾಷ್ಟ್ರೀಯ ಹೆದ್ದಾರಿಯ ಟೋಲ್‌ನಲ್ಲಿ MLC ತಡೆದು ಅನುಚಿತ ವರ್ತನೆ

Public TV
By Public TV
2 hours ago
kerela murder accused
Crime

ಬಾಂಗ್ಲಾದೇಶದವನೆಂದು ತಪ್ಪು ತಿಳಿದು ಕೇರಳದಲ್ಲಿ ಗುಂಪಿನಿಂದ ಭೀಕರ ಹಲ್ಲೆ – ವಲಸೆ ಕಾರ್ಮಿಕ ಸಾವು

Public TV
By Public TV
3 hours ago
Lorry Accident
Bengaluru City

ಆನೇಕಲ್‌ನಲ್ಲಿ ಸರಣಿ ಅಪಘಾತ – 10ಕ್ಕೂ ಹೆಚ್ಚು ವಾಹನಗಳಿಗೆ ಬೃಹತ್‌ ಕಂಟೈನರ್‌ ಡಿಕ್ಕಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?