ಬೆಂಗಳೂರು: ಪಬ್ಲಿಕ್ ಟಿವಿಯ ದಶಮಾನೋತ್ಸವದ ನೆನಪನ್ನು ಹಚ್ಚ ಹಸಿರಾಗಿಸಬೇಕು ಎಂಬ ಆಶಯದೊಂದಿಗೆ ಇಂದು ರಾಜ್ಯಾದ್ಯಂತ 10 ಸಾವಿರ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 101 ಗಿಡಗಳನ್ನು ನೆಡಲಾಯಿತು.
- Advertisement 2
ಬೆಗಳೂರಿನಲ್ಲಿ ಅದಮ್ಯ ಚೇತನ ಸಂಸ್ಥೆ ಸಹಯೋಗದಲ್ಲಿ ಜ್ಞಾನಭಾರತಿ ಪ್ರದೇಶದಲ್ಲಿ ಸಾವಿರ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್, ನಿವೃತ್ತ ನ್ಯಾಯಮೂರ್ತಿ ಎನ್ ಕುಮಾರ್, ಆರ್ಎಸ್ಎಸ್ ಹಿರಿಯರಾದ ನಾಗರಾಜ್, ಬೆಂಗಳೂರು ವಿವಿ ವಿಸಿ, ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು, ಮಕ್ಕಳು ಸ್ವಯಂ ಪ್ರೇರಿತವಾಗಿ ಗಿಡ ನೆಟ್ಟರು. ಇದನ್ನೂ ಓದಿ: ಪಬ್ಲಿಕ್ ಟಿವಿ ಜ್ಞಾನದೀವಿಗೆ 2ನೇ ಆವೃತ್ತಿಗೆ ಬೊಮ್ಮಾಯಿ, ಸಿದ್ದರಾಮಯ್ಯ ಚಾಲನೆ
- Advertisement 3
ಹಲವು ಪ್ರಭೇದ ಸಸಿಗಳನ್ನು ನೆಟ್ಟು ಗೊಬ್ಬರ ಹಾಕಿ, ನೀರೆರೆಯಲಾಯ್ತು ಮೈಸೂರು, ಬೆಳಗಾವಿ, ಮಂಗಳೂರು, ಶಿವಮೊಗ್ಗ, ಮಂಡ್ಯ, ಧಾರವಾಡ ಸೇರಿ ಎಲ್ಲಾ ಜಿಲ್ಲೆಗಳಲ್ಲೂ ವನಮಹೋತ್ಸವ ನಡೆಯಿತು. ಇದನ್ನೂ ಓದಿ: ಪಬ್ಲಿಕ್ ಟಿವಿಗೆ ದಶಕದ ಸಂಭ್ರಮ – ಶಾಂತಿಧಾಮಕ್ಕೆ 25 ಲಕ್ಷ ರೂ. ವಿತರಣೆ