Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್‌ ಟಿವಿಗೆ 12 ರ ಸಂಭ್ರಮ – Photo Gallery
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಬ್ಲಿಕ್‌ ಟಿವಿಗೆ 12 ರ ಸಂಭ್ರಮ – Photo Gallery

Latest

ಪಬ್ಲಿಕ್‌ ಟಿವಿಗೆ 12 ರ ಸಂಭ್ರಮ – Photo Gallery

Public TV
Last updated: February 12, 2024 10:27 pm
Public TV
Share
3 Min Read
public tv 12th anniversary celebration
SHARE

ಕನ್ನಡಿಗರ ಹೆಮ್ಮೆಯ ಸುದ್ದಿವಾಹಿನಿ ‘ಪಬ್ಲಿಕ್‌ ಟಿವಿ’ಯ 12ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ. ಪಬ್ಲಿಕ್ ಮೂವೀಸ್‌ಗೆ 6 ರ ಸಂಭ್ರಮ. ಈ ಅಮೂಲ್ಯ ಕ್ಷಣವನ್ನು ಆಯೋಧ್ಯೆಯ ರಾಮಮಂದಿರಕ್ಕೆ ಕೊಡುಗೆ ಕೊಟ್ಟ ಕರುನಾಡಿನ ಅಪರೂಪದ ಸಾಧಕರ ಜೊತೆಗೆ ಇಂದು (ಸೋಮವಾರ) ಬೆಂಗಳೂರಿನ ಕಚೇರಿಯಲ್ಲಿ ವಾರ್ಷಿಕೋತ್ಸವನ್ನು ಆಚರಿಸಿಕೊಳ್ಳಲಾಯಿತು.

ಅಯೋಧ್ಯೆ ರಾಮಮಂದಿರಕ್ಕೆ ತಮ್ಮದೇ ವಿಶಿಷ್ಟ ಕೊಡುಗೆ ನೀಡಿದ ನವರತ್ನಗಳನ್ನು ಸನ್ಮಾನಿಸಲಾಯಿತು. ಈ ಸಾಧಕರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್, ಲಹರಿ ಮ್ಯೂಸಿಕ್ ಮುಖ್ಯಸ್ಥ ಮನೋಹರ್ ನಾಯ್ಡು ಸನ್ಮಾನಿಸಿದರು. ಇದೇ ವೇಳೆ, ಪಬ್ಲಿಕ್‌ ಟಿವಿ ಸಿಇಒ ಅರುಣ್, ಸಿಓಓ ಸಿ.ಕೆ.ಹರೀಶ್ ಕುಮಾರ್ ಉಪಸ್ಥಿತರಿದ್ದರು.

senior advocate k.n.bhat

ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯಾಗಲು ಕಾನೂನಾತ್ಮಕ ಗೆಲುವಿಗೆ ಮೊದಲ ಅಡಿಪಾಯ ಹಾಕಿದ ಹೆಮ್ಮೆಯ ಕನ್ನಡಿಗ, ಹಿರಿಯ ನ್ಯಾಯವಾದಿ ಕೆ.ಎನ್.ಭಟ್‌. ದೇಶದೆಲ್ಲೆಡೆ ಸುತ್ತಿ, ಶ್ರೀರಾಮ ಜನಿಸಿದ ಅಯೋಧ್ಯೆ ಬಗ್ಗೆ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಭಗವಾನ್‌ ಶ್ರೀರಾಮನ ಪರ ವಾದ ಮಂಡಿಸಿದ್ದರು. ಅಯೋಧ್ಯೆಯೇ ಶ್ರೀರಾಮ ಜನ್ಮಸ್ಥಾನ ಎಂದು ಕಾನೂನಾತ್ಮಕವಾಗಿ ಜಯ ಸಿಕ್ಕಲು ಇದೇ ಮೊದಲ ಮೆಟ್ಟಿಲಾಯಿತು. ಸಾಧಕ ಕೆ.ಎನ್.ಭಟ್‌ ಅವರನ್ನು ಪಬ್ಲಿಕ್‌ ಟಿವಿ ವತಿಯಿಂದ ಸನ್ಮಾನಿಸಲಾಯಿತು.

sculptor arun yogiraj

ಕೋಟಿ ಕೋಟಿ ರಾಮಭಕ್ತರು ಬಯಸಿದ, ಕಾತರಿಸಿದ ಕ್ಷಣವೆಂದರೆ ಬಾಲಕರಾಮನ ವಿಗ್ರಹವನ್ನು ಕಣ್ತುಂಬಿಕೊಳ್ಳುವುದು. ಕನ್ನಡಿಗನ ಕೈಯಲ್ಲರಳಿದ ಬಾಲಕರಾಮನೇ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ. ಆ ಮೂರ್ತಿ ಕೆತ್ತಿದ ಶಿಲ್ಪಿ ಮೈಸೂರಿನ ಅರುಣ್‌ ಯೋಗಿರಾಜ್‌. ಇವರನ್ನೂ ಪಬ್ಲಿಕ್‌ ಟಿವಿ ವತಿಯಿಂದ ಗೌರವಿಸಲಾಯಿತು.

ramdas

ಅಯೋಧ್ಯೆ ಬಾಲರಾಮನ ವಿಗ್ರಹ ಸಾಕ್ಷಾತ್ಕಾರಕ್ಕೆ ಮೈಸೂರಿನ ಹಾರೋಹಳ್ಳಿಯ ರಾಮದಾಸ್‌ ಜಮೀನಿನಲ್ಲಿ ಸಿಕ್ಕ ಕೃಷ್ಣಶಿಲೆ ಕಾರಣ. ಶಿಲೆ ಸಿಕ್ಕ ಜಮೀನನ್ನು ರಾಮಮಂದಿರ ನಿರ್ಮಾಣಕ್ಕೆ ರಾಮದಾಸ್‌ ಅವರು ಕೊಡುಗೆಯಾಗಿ ನೀಡಿದ್ದಾರೆ. ಅವರನ್ನೂ ಪಬ್ಲಿಕ್‌ ಟಿವಿ ವತಿಯಿಂದ ಅಭಿನಂದಿಸಲಾಯಿತು.

sculptor Ganesh Bhatt

ರಾಮಲಲ್ಲಾ ಮೂರ್ತಿ ಕೆತ್ತಲು ಇಡೀ ದೇಶದಲ್ಲಿ ಕೇವಲ 3 ಶಿಲ್ಪಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಅವರಲ್ಲಿ ಇಡಗುಂಜಿ ಮೂಲದ ಗಣೇಶ್‌ ಭಟ್‌ ಅಪೂರ್ವ ಅವಕಾಶ ಗಿಟ್ಟಿಸಿಕೊಂಡಿದ್ದರು. ಇವರ ಕೈಯಲ್ಲೂ ರಾಮಲಲ್ಲಾ ಸುಂದರ ಮೂರ್ತಿ ಅರಳಿ ನಿಂತಿದೆ. ಗಣೇಶ್‌ ಭಟ್‌ ಅವರನ್ನು ಸನ್ಮಾನಿಸಲಾಯಿತು.

gajanana sharma

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ.. ಈ ಹಾಡಿನ ಸಾಲು ರಾಮಭಕ್ತರ ಹೃದಯಕ್ಕೆ ಹತ್ತಿರವಾಗಿದೆ. ಈ ಹಾಡು ಬರೆದವರು ನಮ್ಮ ಕರುನಾಡಿನ ಸಾಗರ ಮೂಲದ ಗಜಾನನ ಶರ್ಮಾ. ಇವರಿಗೂ ಅಭಿನಂದನೆ ಸಲ್ಲಿಸಲಾಯಿತು.

scientist rajan babu

ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಕೆಜಿಎಫ್‌ ರಾಷ್ಟ್ರೀಯ ಶಿಲಾ ತಂತ್ರಜ್ಞಾನ ಸಂಸ್ಥೆ ಪ್ರಮುಖ ಪಾತ್ರ ವಹಿಸಿದೆ. ಇದರ ನಿರ್ದೇಶಕರು ಹೆಚ್‌.ಎಸ್.ವೆಂಕಟೇಶ್‌ ಹಾಗೂ ಹಿರಿಯ ವಿಜ್ಞಾನಿ ಎ.ರಾಜನ್‌ ಬಾಬು ಅವರ ತಂಡವನ್ನು ಸ್ಮರಿಸಲೇಬೇಕು. ಮಂದಿರ ನಿರ್ಮಾಣದ ಅಡಿಪಾಯದಿಂದ ಹಿಡಿದು ಕೆತ್ತನೆಯವರೆಗೂ ಎಲ್ಲಾ ಕಲ್ಲುಗಳ ಗುಣಮಟ್ಟ ವಿಶ್ಲೇಷಣೆ ಮಾಡಿದರು. ಅಲ್ಲದೇ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಿರುವ ಶಿಲೆಯನ್ನೂ ಇವರೇ ಅಂತಿಮಗೊಳಿಸಿದ್ದು. ಹಿರಿಯ ವಿಜ್ಞಾನಿ ಎ.ರಾಜನ್‌ ಬಾಬು ಅವರನ್ನು ಗೌರವಿಸಲಾಯಿತು.

rajesh shetty

ಐತಿಹಾಸಿಕ ರಾಮಮಂದಿರ ಬೆಳಗುವ ಸದಾವಕಾಶ ಸಿಕ್ಕಿದ್ದು ಕೂಡ ಕನ್ನಡಿಗರಿಗೆ. ಕರಾವಳಿ ಮೂಲದ ಆರ್‌.ರಾಜೇಶ್‌ ಶೆಟ್ಟಿ ಮತ್ತು ತಂಡವು ರಾಮಮಂದಿರದ ಸಮಗ್ರ ವಿದ್ಯುತ್‌ ದೀಪಾಲಂಕಾರದ ಹೊಣೆ ಹೊತ್ತು ಯಶಸ್ವಿಯಾಗಿ ನಿಭಾಯಿಸಿದರು. ರಾಜೇಶ್‌ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

pandit vijayendra sharma

ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಬೆಳಗಾವಿಯ ಪಂಡಿತ ವಿಜಯೇಂದ್ರ ಶರ್ಮಾ ನೀಡಿದ ಮುಹೂರ್ತವೇ ಅಂತಿಮವಾಗಿತ್ತು. ಪಂಡಿತ ವಿಜಯೇಂದ್ರ ಶರ್ಮಾ ಅವರನ್ನು ಪಬ್ಲಿಕ್‌ ಟಿವಿ ವತಿಯಿಂದ ಸನ್ಮಾನಿಸಲಾಯಿತು.

ramesh g thippanur

ಭವ್ಯ ರಾಮಮಂದಿರದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯ ಮೇಲೆ ಪ್ರಜ್ವಲಿಸುವ ಸೂರ್ಯನ ಕಿರಣ ಲೋಗೋ ಇರುವ ಅಯೋಧ್ಯಾ ಲಾಂಛನ ಮಾಡಿದವರು ಕಲಬುರಗಿಯ ರಮೇಶ್‌ ಜಿ ತಿಪ್ಪನೂರ ಅವರು. ಇವರನ್ನೂ ಅಭಿನಂದಿಸಲಾಯಿತು.

pralhad joshi 1

ಪಬ್ಲಿಕ್‌ ಟಿವಿಯ 12 ರ ಸಂಭ್ರಮ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಅವರನ್ನು ಸಹ ಗೌರವಿಸಲಾಯಿತು.

TAGGED:bengaluruhr ranganathPublic TVPublic TV 12th Anniversary
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

dubai airport 1
Latest

ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

Public TV
By Public TV
1 minute ago
Vijayanagara Brother Murder
Bellary

ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ

Public TV
By Public TV
16 minutes ago
Odishas Cuttack Hospital Fire
Latest

ಒಡಿಶಾದ ಕಟಕ್‌ನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಸಾವು

Public TV
By Public TV
38 minutes ago
Hotel Association Meeting With Govt
Bengaluru City

20% ಗ್ಯಾಸ್ ವಿತರಣೆಗೆ ಕೇಂದ್ರ ಗ್ರೀನ್ ಸಿಗ್ನಲ್ – ಇಂದು ಹೋಟೆಲ್ ಸಂಘದಿಂದ ಸರ್ಕಾರದ ಭೇಟಿ

Public TV
By Public TV
48 minutes ago
UAE attack
Latest

ಇರಾನ್‌ ಯುದ್ಧದ ಬಗ್ಗೆ ಸುಳ್ಳು ಸುದ್ದಿ, ವೀಡಿಯೋ ಪೋಸ್ಟ್‌ – 19 ಭಾರತೀಯರ ಬಂಧನಕ್ಕೆ UAE ಆದೇಶ

Public TV
By Public TV
1 hour ago
Benjamin Netanyahu
Latest

7,656 ಕೋಟಿ ರೂ. ತುರ್ತು ಮಿಲಿಟರಿ ಬಜೆಟ್‌ಗೆ ಇಸ್ರೇಲ್ ಅನುಮೋದನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?