Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪಬ್ಲಿಕ್ ಟಿವಿ ಆಹಾರ ಮೇಳಕ್ಕೆ ಚಾಲನೆ – ಬನ್ನಿ ಭಾಗವಹಿಸಿ, ಬಹುಮಾನ ಗೆಲ್ಲಿ

Public TV
Last updated: January 25, 2020 1:18 pm
Public TV
Share
3 Min Read
food festival 2020 edit
SHARE

ಬೆಂಗಳೂರು: ಪಬ್ಲಿಕ್ ಟಿವಿಯ ಎರಡನೇ ಆವೃತ್ತಿಯ ಆಹಾರ ಮೇಳಕ್ಕೆ ಯಶಸ್ವಿ ಚಾಲನೆ ಸಿಕ್ಕಿದೆ.

ಮಲ್ಲೇಶ್ವರಂನ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಇಂದು ಮತ್ತು ನಾಳೆ ಆಹಾರ ಮೇಳ ನಡೆಯಲಿದ್ದು, ಅತಿಥಿಗಳು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್. ಆರ್ ರಂಗನಾಥ್, ಪೆಪ್ಸ್ ಮ್ಯಾಟ್ರಿಸ್‍ನ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಕೆ. ಮಾಧವನ್, ಟೈಟಲ್ ಸ್ಪಾನ್ಸರ್ ನಿತ್ಯಾಮೃತ ನೋನಿಯ ಕಮಲಾಕರ್ ಭಟ್, ಎಂ.ಕೆ ಆಗ್ರೋಟೆಕ್ ಸನ್ ಫ್ಯೂರ್ ಸನ್ ಪ್ಲವರ್ ಆಯಿಲ್ ರಿಜಿನಲ್ ಮ್ಯಾನೇಜರ್ ಸುಹೇಲ್ ಎಂ.ಎನ್, ಕೆಎಂಎಫ್ ಎಂಡಿ ಬಿ.ಸಿ ಸತೀಶ್, ಥ್ಯಾಂಕೋಸ್ ನ್ಯಾಚುರಲ್ ಐಸ್ ಕ್ರೀಮ್ ಎಂಡಿ ರಾಘವೇಂದ್ರ ಥಾಣೆ, ಥಾಟ್ ಬಾಕ್ಸ್ ಡೈರೆಕ್ಟರ್ ಕರಣ್, ನಟ ಪ್ರಜ್ವಲ್ ದೇವರಾಜ್, ನಟಿ ನಿಶ್ವಿಕಾ ನಾಯ್ಡು, ನಿರ್ದೇಶಕ ಗುರು ದೇಶಪಾಂಡೆ ಉಪಸ್ಥಿತರಿದ್ದರು.

food festival 2020 2

ಆಹಾರ ಮೇಳದಲ್ಲಿ 30 ಬಗೆಯ ಆಹಾರ ಮಳಿಗೆಗಳು ಇದೆ. ಕರ್ನಾಟಕ ಸೇರಿದಂತೆ ಭಾರತದ ವಿವಿಧ ಪ್ರಸಿದ್ಧ ಆಹಾರ ಖಾದ್ಯಗಳು ಆಹಾರ ಮೇಳದಲ್ಲಿ ಲಭ್ಯವಿದೆ. ಒಂದೇ ಸೂರಿನಡಿ ನೂರಾರು ಆಹಾರ ಖಾದ್ಯಗಳು ದೊರೆಯಲಿದೆ. ಆಹಾರ ಮೇಳಕ್ಕೆ ಬರಲು ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಆಹಾರ ಮೇಳಕ್ಕೆ ಬಂದು ಹೆಸರು ನೋಂದಾಯಿಸಿದ ಗ್ರಾಹಕರಿಗೆ ಪ್ರತಿ ಅರ್ಧ ಗಂಟೆಗೆ ಒಮ್ಮೆ ಲಕ್ಕಿ ಕೂಪನ್ ಬಹುಮಾನ ನೀಡಲಾಗುತ್ತದೆ. ಜೊತೆಗೆ ಇಂದು ಮಹಿಳೆಯರಿಗೆ ಪಾನಿಪೂರಿ ತಿನ್ನುವ ಸ್ಫರ್ಧೆ ಆಯೋಜಿಸಲಾಗಿದೆ. ಭಾನುವಾರ ಪುರುಷರಿಗೆ ಇಡ್ಲಿ ತಿನ್ನುವ ಸ್ಫರ್ಧೆ ಇರಲಿದ್ದು, ಆಹಾರ ಮೇಳಕ್ಕೆ ಭೇಟಿ ಕೊಟ್ಟು ಇಷ್ಟವಾದ ಖಾದ್ಯವನ್ನ ಸೇವನೆ ಮಾಡಿ, ಸ್ಪರ್ಧೆಗಳಲ್ಲೂ ಗ್ರಾಹಕರು ಭಾಗವಹಿಸಬಹುದು.

food festival 2020 4

ಕಾರ್ಯಕ್ರಮ ಉದ್ಘಾಟನೆ ಬಳಿಕ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್. ಆರ್ ರಂಗನಾಥ್ ಅವರು ಮಾತನಾಡಿ, ಎಲ್ಲ ರೋಗಗಳು ಆಹಾರದಿಂದಲೇ ಆರಂಭವಾಗುತ್ತದೆ. ಆದರೆ ಸರಿಯಾಗಿ ತಿನ್ನಿ, ಎಂಜಾಯ್ ಮಾಡಿ. ರಂಗೋಲಿ ಸ್ಫರ್ಧೆಗೆ ಬಂದವರಿಗೆ ಧನ್ಯವಾದ, ಚೆನ್ನಾಗಿ ರಂಗೋಲಿ ಬಿಡಿಸಿದ್ದೀರಿ. ಹಾಗೆಯೇ ಭಾಗವಹಿಸಿದ ಎಲ್ಲ ಸ್ಟಾಲ್ ನವರಿಗೆ ಧನ್ಯವಾದ ಎಂದರು.

ಆಹಾರ ಮೇಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೆಎಂಎಫ್ ಎಂಡಿ ಬಿ.ಸಿ ಸತೀಶ್ ಅವರು ಮಾತನಾಡಿ, ಈ ಕಾರ್ಯಕ್ರಮ ಆಯೋಜಿಸಿದಕ್ಕೆ ಧನ್ಯವಾದ. ಇಪ್ಪತ್ತೈದು ಲಕ್ಷ ರೈತ ಸಮೂದಾಯ ಹಾಗೂ ಐದು ಕೋಟಿಗೂ ಅಧಿಕ ಗ್ರಾಹಕರನ್ನು ಕೆಎಂಎಫ್ ಹೊಂದಿದೆ. ನಾವು ಗ್ರಾಹಕರಿಗೆ ಉತ್ಕೃಷ್ಟ ಉತ್ಪನ್ನ ನೀಡುತ್ತಿದ್ದೇವೆ. ನಮ್ಮನ್ನು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಿದಕ್ಕೆ ಪಬ್ಲಿಕ್ ಟಿವಿಗೆ ಧನ್ಯವಾದ. ರಂಗೋಲಿ ಸ್ಫರ್ಧೆ ಏರ್ಪಡಿಸಿರುವುದು ಉತ್ತಮವಾದದ್ದು, ನಮ್ಮ ಸಂಸ್ಕøತಿ, ಸಂಸ್ಕಾರವನ್ನು ಈ ರಂಗೋಲಿಯಲ್ಲಿ ಬಿಡಿಸಿದಂತಹ ಎಲ್ಲಾ ಹೆಣ್ಣು ಮಕ್ಕಳಿಗೆ ಧನ್ಯವಾದ ಹೇಳುತ್ತೇನೆ ಎಂದು ಖುಷಿಯನ್ನು ಹಂಚಿಕೊಂಡರು.

food festival 2020 6

ಕಮಲಾಕರ್ ಭಟ್ ಅವರು ಮಾತನಾಡಿ, ಆಹಾರ ಮೇಳ ಬೆಂಗಳೂರು ನಗರಕ್ಕೆ ಹಬ್ಬ. ಆಹಾರಕ್ಕೆ ಮಾತ್ರ ಇಲ್ಲಿ ಪ್ರಾಮುಖ್ಯತೆ ಕೊಟ್ಟಿಲ್ಲ. ರಂಗೋಲಿ ಸ್ವರ್ಧೆಯ ಮೂಲಕ ಸಂಸ್ಕಾರ, ಪರಂಪರೆ ನೆನಪಿಸಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಹಾಗೆಯೇ ಎಂ.ಕೆ ಆಗ್ರೋಟೆಕ್‍ನ ರಿಜಿನಲ್ ಮ್ಯಾನೇಜರ್ ಸೊಹೈಲ್ ಅವರು ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿ, ಈ ರೀತಿ ಕಾರ್ಯಕ್ರಮ ಹೆಚ್ಚು ಹೆಚ್ಚು ಆಗಲಿ. ಸದಾ ನಾವು ನಿಮ್ಮೊಂದಿಗೆ ಇರುತ್ತೇವೆ. ಈ ಕಾರ್ಯಕ್ರಮ ಆಯೋಜನೆ ಮಾಡಿದ್ದಕ್ಕೆ ಧನ್ಯವಾದಗಳು ಎಂದರು.

food festival 2020 prajwal devraj

ಪ್ರಜ್ವಲ್ ದೇವರಾಜ್ ಅವರು ಪ್ರತಿಕ್ರಿಯಿಸಿ, ಈ ಫುಡ್ ನೋಡಿದರೆ ನಂಗೆ ಡಯೆಟ್ ಮರಿಬೇಕು ಅನಿಸುತ್ತಿದೆ. ದಾರಿಯುದ್ದಕ್ಕೂ ರಂಗೋಲಿ ತುಂಬಾ ಚೆನ್ನಾಗಿತ್ತು. ಶನಿವಾರ, ಭಾನುವಾರ ಡಯೆಟ್ ಮರೆತು ಇಲ್ಲಿ ಬಂದು ಫುಡ್ ತಿಂದು ಎಂಜಾಯ್ ಮಾಡಿ ಎಂದು ಹೇಳಿದರು. ಇತ್ತ ನಟಿ ನಿಶ್ವಿಕಾ ನಾಯ್ಡು ಅವರು ಮಾತನಾಡಿ, ಈ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿದ್ದಕ್ಕೆ ಪಬ್ಲಿಕ್ ಟಿವಿಗೆ ಧನ್ಯವಾದ. ಡಯೆಟ್ ಎಲ್ಲಾ ಮರೆತು ಫುಡ್ ಫೆಸ್ಟ್ ನಲ್ಲಿ ಭಾಗಿಯಾಗಿ ಎಂದರು. ಹಾಗೆಯೇ ನಿರ್ದೇಶಕ ಗುರು ದೇಶಪಾಂಡೆ ಅವರು ಮಾತನಾಡಿ, ಆಹಾರವನ್ನು ವ್ಯರ್ಥ ಮಾಡಬೇಡಿ, ಹೆಚ್ಚು ಉಪಯೋಗ ಮಾಡಿಕೊಳ್ಳೋಣ. ಇಲ್ಲದೇ ಇರೋರಿಗೆ ಆಹಾರ ಕೊಡೋಣ. ಇದು ಎರಡನೇ ವರ್ಷ ನಾನು ಆಹಾರ ಮೇಳಕ್ಕೆ ಬರುತ್ತಿರೋದು. ಇಲ್ಲಿ ಆಹಾರ ರುಚಿ ಚೆನ್ನಾಗಿ ಇರುತ್ತೆ. ಎಲ್ಲರೂ ಬಂದು ಆಹಾರ ಸವಿಯಿರಿ ಎಂದು ಹೇಳಿದರು.

food festival 2020 1

ಆಹಾರ ಮೇಳಕ್ಕೆ ಚಾಲನೆಗೂ ಮುನ್ನ ರಂಗೋಲಿ ಸ್ಫರ್ಧೆ ನಡೆದಿದ್ದು, 120 ನಿಮಿಷದ ಒಳಗೆ ರಂಗೋಲಿಯನ್ನ ಬಿಡಿಸಿದ್ದಾರೆ. ರಂಗೋಲಿ ಸ್ಫರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಸಮಾಧಾನಕರ ಬಹುಮಾನ ನೀಡಲಾಯಿತು. ಈ ಸ್ಪರ್ಧೆಯ ತೃತೀಯ ಬಹುಮಾನ ವಿಜೇತೆ ಭಾಗ್ಯ, ದ್ವೀತಿಯ ಬಹುಮಾನ ವಿಜೇತೆ ಪ್ರತಿಮಾ ಉಡುಪ, ಪ್ರಥಮ ಬಹುಮಾನ ವಿಜೇತೆ ನಿರ್ಮಲ ಅವರಿಗೆ ಪೆಪ್ಸ್ ಮ್ಯಾಟ್ರಿಸ್ ವತಿಯಿಂದ ಹಾಸಿಗೆ ನೀಡಲಾಯ್ತು. ಇದೇ ವೇಳೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲಾ ಸ್ಪರ್ಧಿಗಳಿಗೂ ಪೆಪ್ಸ್ ಮ್ಯಾಟ್ರಿಸ್ ದಿಂಬುಗಳನ್ನು ಸಮಾಧಾನಕರ ಬಹುಮಾನವಾಗಿ ನೀಡಿ ಅಭಿನಂದಿಸಲಾಯಿತು.

TAGGED:bengaluruFood festivalOpeningPublic TVRangoli Competitionಆಹಾರ ಮೇಳಉದ್ಘಾಟನೆಪಬ್ಲಿಕ್ ಟಿವಿಬೆಂಗಳೂರುರಂಗೋಲಿ ಸ್ಪರ್ಧೆ
Share This Article
Facebook Whatsapp Whatsapp Telegram

You Might Also Like

Prakashi raj MB patil
Bengaluru City

ಬಹುಭಾಷಾ ನಟ ಪ್ರಕಾಶ್ ರಾಜ್ ಗುಜರಾತ್‌ನಲ್ಲೂ ಹೋರಾಟ ಮಾಡಲಿ – ಎಂಬಿಪಿ ತಿರುಗೇಟು

Public TV
By Public TV
48 seconds ago
Sanjay Bhandari
Court

ಯುಕೆ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿ ಪರಾರಿಯಾದ ಆರ್ಥಿಕ ಅಪರಾಧಿ: ದೆಹಲಿ ವಿಶೇಷ ಕೋರ್ಟ್‌ ಆದೇಶ

Public TV
By Public TV
10 minutes ago
Renukacharya
Bengaluru City

ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಮಕ್ಮಲ್ ಟೋಪಿ ಹಾಕಿದೆ: ರೇಣುಕಾಚಾರ್ಯ

Public TV
By Public TV
10 minutes ago
Punjab Police
Crime

ಮಾದಕ ವಸ್ತು, ಶಸ್ತ್ರಾಸ್ತ್ರ ಕೇಸ್‌ಲ್ಲಿ ಕರ್ನಾಟಕದ ಇಬ್ಬರು ಸೇರಿ 9 ಜನ ಅರೆಸ್ಟ್

Public TV
By Public TV
16 minutes ago
D.K Shivakumar
Bengaluru City

ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಕೆಶಿ

Public TV
By Public TV
18 minutes ago
Harshika Poonacha
Bengaluru City

ರಶ್ಮಿಕಾ ಬೈ ಮಿಸ್‌ ಆಗಿ ಹೇಳಿರಬೇಕು, ಕ್ಷಮಿಸಿಬಿಡೋಣ: ನಟಿ ಹರ್ಷಿಕಾ ಪೂಣಚ್ಚ

Public TV
By Public TV
29 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?