ಬೆಂಗಳೂರು: ಪಬ್ಲಿಕ್ ಟಿವಿಯ ಮುಖ್ಯ ವರದಿಗಾರ ಬದ್ರುದ್ದೀನ್.ಕೆ ಮಾಣಿಯವರು ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸೇವೆ/ ಸಾಧನೆಗಾಗಿ ಮತ್ತು ಅತ್ಯುತ್ತಮ ವರದಿಗಳಿಗಾಗಿ ಪತ್ರಕರ್ತರಿಗೆ ನೀಡುವ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಬದ್ರುದ್ದೀನ್ ಮಾಣಿಯವರಿಗೆ ಲಭಿಸಿದೆ.
ಮಾ.7 ಮತ್ತು 8ರಂದು ಮಂಗಳೂರಿನಲ್ಲಿ ನಡೆಯಲಿರುವ 35ನೇ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.