Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿಯ `ಬೆಳಕು’ ಇಂಪ್ಯಾಕ್ಟ್: ಜಂಗ್ಲಿ ಗ್ರಾಮದ ವಿದ್ಯಾರ್ಥಿಗಳಿಗೆ ಸ್ವಂತ ಹಣದಲ್ಲಿ ಬಸ್ ಕೊಡಿಸಿದ ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಪಬ್ಲಿಕ್ ಟಿವಿಯ `ಬೆಳಕು’ ಇಂಪ್ಯಾಕ್ಟ್: ಜಂಗ್ಲಿ ಗ್ರಾಮದ ವಿದ್ಯಾರ್ಥಿಗಳಿಗೆ ಸ್ವಂತ ಹಣದಲ್ಲಿ ಬಸ್ ಕೊಡಿಸಿದ ರೆಡ್ಡಿ

Bellary

ಪಬ್ಲಿಕ್ ಟಿವಿಯ `ಬೆಳಕು’ ಇಂಪ್ಯಾಕ್ಟ್: ಜಂಗ್ಲಿ ಗ್ರಾಮದ ವಿದ್ಯಾರ್ಥಿಗಳಿಗೆ ಸ್ವಂತ ಹಣದಲ್ಲಿ ಬಸ್ ಕೊಡಿಸಿದ ರೆಡ್ಡಿ

Public TV
Last updated: October 21, 2024 6:36 pm
Public TV
Share
2 Min Read
Koppala Belaku Impact
SHARE

ಕೊಪ್ಪಳ: ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಅಂಜನಾದ್ರಿ ಬೆಟ್ಟದ (Anjanadri Betta) ನೆರಳಿನಲ್ಲೇ ಇದ್ದ ಗ್ರಾಮವದು. ಆದರೂ, ಸಾರಿಗೆ ಸೌಲಭ್ಯದ ಕೊರತೆಯಿಂದ ಗ್ರಾಮದ ನೂರಾರು ವಿದ್ಯಾರ್ಥಿಗಳು ಹೈಸ್ಕೂಲ್ ಶಿಕ್ಷಣಕ್ಕೂ 5 ಕಿ.ಮೀ ನಡೆಯಬೇಕಿತ್ತು. ಸಾರಿಗೆ ಸೌಲಭ್ಯದ ಕೊರತೆಯಿಂದ ಹತ್ತಾರು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು. ಇದೀಗ ಈ ವಿದ್ಯಾರ್ಥಿಗಳಿಗೆ ಆಶಾಕಿರಣ ಮೂಡಿದ್ದು, ಶಾಸಕ ಜನಾರ್ದನ ರೆಡ್ಡಿ ಹೊಸ ಬಸ್ ಖರೀದಿಸಿ ಕೊಟ್ಟಿದ್ದಾರೆ. ಇದು `ಪಬ್ಲಿಕ್ ಟಿವಿ’ಯ ಬೆಳಕು (PUBLiC TV Belaku Impact) ಕಾರ್ಯಕ್ರಮದ ಬಿಗ್ ಇಂಪ್ಯಾಕ್ಟ್ ಆಗಿದೆ.

ಹೌದು. ಜಿಲ್ಲೆಯ ಗಂಗಾವತಿ ತಾಲೂಕಿನ ಜಂಗ್ಲಿ ಗ್ರಾಮದ ಜನರಿಗೆ ಸಾರಿಗೆ ಸೌಲಭ್ಯದ ಕೊರತೆಯಿತ್ತು. ಈ ಕುರಿತು `ಪಬ್ಲಿಕ್ ಟಿವಿ’ಯ ಬೆಳಕು ಕಾರ್ಯಕ್ರಮದಲ್ಲಿ ಪ್ರಸಾರವಾಗಿತ್ತು. ಈ ವರದಿಗೆ ಓಗೊಟ್ಟ ಶಾಸಕ ಜನಾರ್ದನ ರೆಡ್ಡಿ, ಹೊಸ ಬಸ್ ಖರೀದಿಸಿ ಕೊಟ್ಟಿದ್ದಾರೆ. ಶಾಸಕ ಜನಾರ್ದನ ರೆಡ್ಡಿಯವರ (Janardhana Reddy) ಪತ್ನಿ ಅರುಣಾ ಲಕ್ಷ್ಮೀ ಶಾಲಾ ವಾಹನವನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಿದ್ದು, ಹೊಸ ಶಾಲಾ ವಾಹನವನ್ನು ಖುಷಿಯಿಂದ ಪೂಜೆ ಮಾಡಿ ಗ್ರಾಮಸ್ಥರು ಬರಮಾಡಿಕೊಂಡಿದ್ದಾರೆ. ಜೊತೆಗೆ ಶಾಲಾ ವಾಹನವನ್ನು ಕಂಡು ಮಕ್ಕಳಲ್ಲಿ ಸಂತೋಷ ಮನೆಮಾಡಿದೆ.ಇದನ್ನೂ ಓದಿ:ದೇವೇಗೌಡರ ತುರ್ತು ಬುಲಾವ್‌ – ಚನ್ನಪಟ್ಟಣದಲ್ಲಿ ಅಖಾಡಕ್ಕಿಳಿಯುತ್ತಾರಾ ನಿಖಿಲ್‌ ಕುಮಾರಸ್ವಾಮಿ?

ಜಂಗ್ಲಿ ಮತ್ತು ರಂಗಾಪುರ ಗ್ರಾಮದ ವಿದ್ಯಾರ್ಥಿಗಳು ಈ ಕಾಲದಲ್ಲೂ ಹೈಸ್ಕೂಲ್ ಶಿಕ್ಷಣ ಪಡೆಯಲು ಬರೋಬ್ಬರಿ 5 ಕಿ.ಮೀ. ನಡೆದುಕೊಂಡು ಹೋಗಬೇಕಿದೆ. ಪ್ರತಿದಿನ ನೂರಾರು ವಿದ್ಯಾರ್ಥಿಗಳು ಬರೋಬ್ಬರಿ 5 ಕಿ.ಮೀ. ನಡೆದು ನಂತರ ಬಸ್ ಏರಿ ಶಾಲೆ ತಲುಪಬೇಕಿತ್ತು. ಇದರಿಂದ ಈ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಶಾಲೆ- ಕಾಲೇಜ್ ತಲುಪಲು ಸಾಧ್ಯವಾಗುತ್ತಿರಲಿಲ್ಲ. ನಿಗದಿತ ಸಮಯಕ್ಕೆ ಶಾಲೆಗೆ ತಲುಪದ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗುತ್ತಿದ್ದರು.

ಇಡೀ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದ ಪ್ರಚಾರ ವಸ್ತುವಾಗಿರುವ ಅಂಜನಾದ್ರಿ ಸಮೀಪದಲ್ಲಿ ಇಂತಹ ಅವ್ಯವಸ್ಥೆಯಿರುವ ಕುರಿತು ಪಬ್ಲಿಕ್ ಟಿವಿ ಬೆಳಕು ಕಾರ್ಯಕ್ರಮದ ವೀಕ್ಷಕರ ಮುಂದೆ ಇಟ್ಟಿತ್ತು. ವರದಿ ನೋಡಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ತಮ್ಮ ಸ್ವಂತ ಹಣದಲ್ಲಿ ಈ ಗ್ರಾಮಕ್ಕೆ ಶಾಲಾ ವಾಹನ ನೀಡಿದ್ದು, ಶಾಲಾ ವಾಹನವನ್ನು ಅರುಣಾ ಲಕ್ಷ್ಮೀ ಜಂಗ್ಲಿ, ರಂಗಪುರ, ಅಂಜನಳ್ಳಿ ಗ್ರಾಮಸ್ಥರಿಗೆ ಹಸ್ತಾಂತರಿಸಿದ್ದಾರೆ.

Koppala Belaku Impact 1

ಈ ಶಾಲಾ ವಾಹನದಿಂದ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಗಂಗಾವತಿ ಮತ್ತು ಆನೆಗೊಂದಿ ಗ್ರಾಮದ ಶಾಲೆ-ಕಾಲೇಜಿಗೆ ತೆರಳುವ ಪ್ರಾಥಮಿಕ ಶಾಲೆಯಿಂದ ಪದವಿ ವಿದ್ಯಾರ್ಥಿಗಳಿಗೆ ವಾಹನ ಅನುಕೂಲವಾಗಲಿದೆ. ಸಾರಿಗೆ ಸೌಲಭ್ಯ ಇಲ್ಲದ್ದರಿಂದ ಸಾಕಷ್ಟು ಪಾಲಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದನ್ನು ಬಿಡಿಸಿದ್ದರು. ಇನ್ನು ಗರ್ಭಿಣಿಯರು, ಬಾಣಂತಿಯರು ಹಾಗೂ ಕಾಯಿಲೆಗೆ ತುತ್ತಾದ ರೋಗಿಗಳು ತಾಲೂಕು ಕೇಂದ್ರ ತಲುಪಲು ಸಂಕಷ್ಟ ಪಡಬೇಕಿತ್ತು. ಆದರೆ

ಗ್ರಾಮಕ್ಕೆ ಸಾರಿಗೆ ಸೌಲಭ್ಯ ಪಡೆಯಲು ಈ ಗ್ರಾಮಸ್ಥರು ಎಲ್ಲ ರೀತಿಯಲ್ಲೂ ಪ್ರಯತ್ನ ಮಾಡಿದ್ದರು. ಮತದಾನ ಬಹಿಷ್ಕಾರ, ರಸ್ತೆ ತಡೆ, ತಾಲೂಕು ಕೇಂದ್ರದಲ್ಲಿ ಹಂತ-ಹಂತವಾಗಿ ಹೋರಾಟ ಮಾಡಿದ್ದರೂ, ಪ್ರಯೋಜನ ಆಗಿರಲಿಲ್ಲ. ಪಬ್ಲಿಕ್ ಟಿವಿ ಬೆಳಕು ಕಾರ್ಯಕ್ರಮದಲ್ಲಿ ಪ್ರಸಾರವಾದ ಬೆನ್ನಲ್ಲೇ ಇದೀಗ ಜಂಗ್ಲಿ ಗ್ರಾಮದ ಜನರಿಗೆ ಹಾಗೂ ಶಾಲಾ ಮಕ್ಕಳಿಗೆ ಸಾರಿಗೆ ಸೌಲಭ್ಯ ಒದಗಿದ್ದು, ಬಹು ವರ್ಷದ ಸಮಸ್ಯೆಗೆ ಪರಿಹಾರ ಸಿಕ್ಕಿದೆ.ಇದನ್ನೂ ಓದಿ:ಅಜ್ಜಿಯ ನೆನೆದು ಭಾವನಾತ್ಮಕ ಪತ್ರ ಬರೆದ ಸುದೀಪ್ ಪುತ್ರಿ

TAGGED:Anjanadri BettaBelaku ImpactG. Janardhana ReddyGangavatikoppalaSchool VanTransportationಅಂಜನಾದ್ರಿ ಬೆಟ್ಟಕೊಪ್ಪಳಗಂಗಾವತಿಜನಾರ್ದನ ರೆಡ್ಡಿಬೆಳಕು ಇಂಪ್ಯಾಕ್ಟ್ಶಾಲಾ ವಾಹನಸಾರಿಗೆ ಸೌಲಭ್ಯ
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
58 minutes ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
1 hour ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
2 hours ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
2 hours ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
3 hours ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?