Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆಗಾಗಿ 20 ವರ್ಷಗಳಿಂದ ಹೋರಾಟ ಮಾಡಿದ್ರೂ ಫಲ ಸಿಕ್ಕಿಲ್ಲ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | BELAKU | ರಸ್ತೆಗಾಗಿ 20 ವರ್ಷಗಳಿಂದ ಹೋರಾಟ ಮಾಡಿದ್ರೂ ಫಲ ಸಿಕ್ಕಿಲ್ಲ!

BELAKU

ರಸ್ತೆಗಾಗಿ 20 ವರ್ಷಗಳಿಂದ ಹೋರಾಟ ಮಾಡಿದ್ರೂ ಫಲ ಸಿಕ್ಕಿಲ್ಲ!

Public TV
Last updated: May 7, 2017 4:15 pm
Public TV
Share
2 Min Read
BELAKU BDR
SHARE

ಬೀದರ್: ರಾಜಕೀಯ ಪಕ್ಷಗಳ ಮುಸುಕಿನ ಗುದ್ದಾಟ. 20 ವರ್ಷಗಳಿಂದ ಒಂದು ಡಾಂಬರು  ರಸ್ತೆ ಬೇಕು ಎಂದು ಹಲವು ಬಾರಿ ಹೋರಾಟ ಮಾಡಿದ್ರೂ ನೋ ಯೂಸ್. ಮಳೆಗಾಲ ಬಂದ್ರೆ ಈ ಗ್ರಾಮ ಒಂದು ದ್ವೀಪವಾಗಿ ಸಾವಿನ ಸರಮಾಲೆಯನ್ನು ನೋಡಬೇಕಾಗುತ್ತದೆ. 4 ಕೀಲೋ ಮೀಟರ್ ರಸ್ತೆ ಮಾಡೋಕೆ ಯಾಕೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂಬುದೆ ತಿಳಿಯದ ಸಂಗತಿಯಾಗಿದೆ. ಹಲವು ವರ್ಷಗಳಿಂದ ಬೇಸತ್ತಿರುವ ಗ್ರಾಮಸ್ಥರು ಬೆಳಕು ಕಾರ್ಯಕ್ರಮದ ಮೂಲಕವಾದ್ರೂ ನಮ್ಮ ಗ್ರಾಮಕ್ಕೆ ಬೆಳಕು ಬರುತ್ತೆ ಎಂಬ ನಂಬಿಕೆಯಲ್ಲಿದ್ದಾರೆ.

ಹೌದು. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪಗೌಡಗಾಂವ್ ಗ್ರಾಮದ ಜನ ಪ್ರತಿನಿತ್ಯ ಪಡುತ್ತಿರುವ ನರಕಯಾತನೆಯ ಸ್ಟೋರಿ ಇದು. ಈ ಗ್ರಾಮದಿಂದ ಮೊರಂಬಿ ಹೋಬಳಿಗೆ ಸಂಪರ್ಕ ನೀಡುವ 4 ಕೀಲೋ ಮೀಟರ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ರಸ್ತೆ ನಿರ್ಮಾಣ ಮಾಡಿಕೊಡಿ ಸ್ವಾಮಿ ಎಂದು 20 ವರ್ಷಗಳಿಂದ ಪ್ರತಿಭಟನೆ, ಮನವಿ ಮಾಡಿದ್ರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ.

ಪ್ರತಿಭಟನೆ ಮತ್ತು ಮನವಿ ಮಾಡಿದಾಗ ಮಾಡಿಕೊಡುವುದಾಗಿ ಹೇಳಿದ ಅಧಿಕಾರಿಗಳು ಮತ್ತೆ ಮೇರೆತೇ ಬಿಡುತ್ತಾರೆ. ಇನ್ನು ರಾಜಕೀಯ ಮುಖಂಡರು ಈ ಗ್ರಾಮದ ಅಭಿವೃದ್ಧಿಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಈ ಬಗ್ಗೆ ಹಾಲಿ ಶಾಸಕರ ಗಮನಕ್ಕೆ ತಂದ್ರೂ ಯಾಕೆ ಅಭಿವೃದ್ಧಿ ಕಾರ್ಯಕ್ಕೆ ನಿರ್ಲಕ್ಷ್ಯ ಮಾಡುತ್ತಿದ್ದಾರೋ ತಿಳಿಯದ ಸಂಗತಿಯಾಗಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕೀಯ ಬಿಟ್ಟು ನಮ್ಮ ಗ್ರಾಮದ ಅಭಿವೃದ್ಧಿಗೆ ಶ್ರಮಿಸಿ ಎನ್ನುತ್ತಿದ್ದಾರೆ ಗ್ರಾಮಸ್ಥರು. ಇನ್ನು ಈ ಭಾಗದ ಸಂಸದ ಭಗವತ್ ಖೂಬಾ ಸಾಹೇಬ್ರು ಮಾತ್ರ ಮಾಡೋಣ ಎನ್ನುವ ಮೂಲಕ ಮೌನಕ್ಕೆ ಶರಣರಾಗಿದ್ದಾರೆ. ರಾಜಕೀಯ ನಾಯಕರ ಅಸಡ್ಡೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೂಲಕವಾದ್ರೂ ನಮ್ಮ ಗ್ರಾಮಕ್ಕೆ ರಸ್ತೆ ಭಾಗ್ಯ ಸಿಗುತ್ತೆ ಎಂಬ ಭರವಸೆಯಲ್ಲಿ  ಮನವಿ ಮಾಡಿಕೊಂಡಿದ್ದಾರೆ.

ರಸ್ತೆ ಸಮಸ್ಯೆಯಿಂದ ಈ ಕುಗ್ರಾಮಕ್ಕೆ ಹತ್ತು ಹಲವಾರು ಜ್ವಲಂತ ಸಮಸ್ಯೆಗಳು ಕಾಡುತ್ತಿವೆ. ಮಳೆಗಾಲ ಬಂದ್ರೆ ಇರುವ ಒಂದು ಸೇತುವೆ ನೀರು ತುಂಬಿ ಗ್ರಾಮ ದ್ವೀಪವಾಗಿ ಬಿಡುತ್ತೆ. ಹೀಗಾಗಿ ಯಾರು ಬೇರೆ ಕಡೆ ಹೋಗಲು ಸಾಧ್ಯವಾಗಲ್ಲ. ಮಹಿಳೆಯರು ಹೆರಿಗೆ ಅಂದ್ರೆ ಕನಸಿನಲ್ಲೂ ಭಯ ಬಿಳುತ್ತಾರೆ.

ತುರ್ತು ಚಿಕಿತ್ಸೆ ಇದ್ರೆ ಅಂಬುಲೆನ್ಸ್ ಬರುವುದಿಲ್ಲ. ಯಾರಾದ್ರು ಆಸ್ಪತ್ರೆಗೆ ಅಂದ್ರೆ ಕಷ್ಟ, ವಿದ್ಯಾರ್ಥಿಗಳ ಶಿಕ್ಷಣ ಮೊಟಕುಗೊಳ್ಳುತ್ತಿದೆ. ಈ ಗ್ರಾಮಕ್ಕೆ ಬಸ್ ವ್ಯವಸ್ಥೆ ಕೂಡ ಇಲ್ಲ. ಹಲವು ದಶಕಗಳಿಂದ ಈ ಕುಗ್ರಾಮದ ಸ್ಥಿತಿ ಚಿಂತಾಜನಕವಾಗಿದ್ದು , ಗುತ್ತಿಗೆದಾರರಿಗೆ ಮಾತ್ರ ಈ ರಸ್ತೆ ಲಾಭದಾಯಕ ರಸ್ತೆಯಾಗಿದೆ. ರಸ್ತೆಗಾಗಿ ಟೆಂಡರ್ ಮೇಲೆ ಟೆಂಡರ್ ಮಾಡಿಕೊಂಡು ಅಧಿಕಾರಿಗಳು ರಸ್ತೆ ಮಾಡದೆ ಲಕ್ಷ-ಲಕ್ಷ ಗೋಲ್‍ಮಾಲ್ ಮಾಡಿದ ಉದಾಹರಣೆಗಳು ಇವೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಕ್ಷೇತ್ರದ ಹಾಲಿ ಶಾಸಕರು ಮತ್ತು ಸಚಿವರಾಗಿರುವ ಈಶ್ವರ್ ಖಂಡ್ರೆಗೆ ಪ್ರಶ್ನೆಗಳ ಸುರಿಮಳೆಯನ್ನೇ ಹಾಕುತ್ತಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡೋದನ್ನು ಬಿಟ್ಟು ದಯವಿಟ್ಟು ನಮ್ಮ ಗ್ರಾಮಕ್ಕೆ ಒಂದು ಡಾಂಬರು ರಸ್ತೆ ಮಾಡಿಕೊಡಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಿನಲ್ಲಿ ಸ್ವಾತಂತ್ರ್ಯ ಬಂದು ಹಲವು ದಶಕಗಳಾದ್ರು ಇನ್ನೂ ಈ ಕುಗ್ರಾಮಕ್ಕೆ ಒಂದು ಸರಿಯಾದ ರಸ್ತೆ ಇಲ್ಲದೆ ಇರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕೀಯ ಮಿಶ್ರಣವಾದ್ರೆ ಗ್ರಾಮಗಳು ಯಾವ ರೀತಿ ಅಭಿವೃದ್ಧಿ ಕುಂಟಿತವಾಗುತ್ತವೆ ಎಂಬುದಕ್ಕೆ ಈ ಸ್ಟೋರಿ ನೈಜ ಉದಾಹರಣೆಯಾಗಿದೆ. ಇನ್ನಾದ್ರು ರಾಜಕೀಯ ಬಿಟ್ಟು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ಕೆ ಸ್ಪಂದಿಸುತ್ತಾರೆ ಎಂಬ ನಂಬಿಕೆಯಲ್ಲಿದ್ದಾರೆ ಗ್ರಾಮದ ಜನ.

https://www.youtube.com/watch?v=9nlGGvHWt4c

 

TAGGED:belakubidarPublic TVroadಪಬ್ಲಿಕ್ ಟಿವಿಬೀದರ್ಬೆಳಕುರಸ್ತೆ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Three guilty in murder case and Israeli Tourist Rape case
Court

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ರೇಪ್, ಓರ್ವನ ಹತ್ಯೆ ಕೇಸ್ – ಮೂವರಿಗೆ ಗಲ್ಲು ಶಿಕ್ಷೆ

Public TV
By Public TV
59 minutes ago
Anthropic
Bengaluru City

ಮಡುರೋ ಕಿಡ್ನಾಪ್‌ ಕೇಸ್‌ನಲ್ಲಿ ಸುದ್ದಿಯಾದ AI Anthropic ಕಂಪನಿಯ ಬೆಂಗಳೂರು ಕಚೇರಿ ಓಪನ್‌

Public TV
By Public TV
1 hour ago
Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
2 hours ago
Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
2 hours ago
mahadevappa
Bengaluru City

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

Public TV
By Public TV
2 hours ago
SUBBAREDDY
Bengaluru City

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?