ಪಬ್ಲಿಕ್ ಟಿವಿ ಕ್ಯಾಮರಾಮನ್ ಸುರೇಂದ್ರ ಕುಡಾಳಕರ್‌ಗೆ ಈ ವರ್ಷದ ಟ್ಯಾಗೋರ್ ಪತ್ರಿಕಾ ಪ್ರಶಸ್ತಿ ಪ್ರದಾನ

Public TV
1 Min Read
award KARAWAR

ಕಾರವಾರ: ಉತ್ತರ ಕನ್ನಡ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಈ ವರ್ಷದ ಟ್ಯಾಗೋರ್ ಪತ್ರಿಕಾ ಪ್ರಶಸ್ತಿಯು ಪಬ್ಲಿಕ್ ಟಿವಿಯ ಕ್ಯಾಮರಾಮನ್ ಸುರೇಂದ್ರ ಕುಡಾಳಕರ್‌ಗೆ ಸಂದಿದೆ.

ಮಾಧ್ಯಮದಲ್ಲಿ ಛಾಯಾಗ್ರಾಹಕರಾಗಿ ಸೇವೆ ಹಾಗೂ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಉತ್ತಮ ಸುದ್ದಿ ಛಾಯಾಗ್ರಹಣಕ್ಕೆ ಈ ಪ್ರಶಸ್ತಿ ನೀಡಲಾಗಿದೆ. ಇದನ್ನೂ ಓದಿ: BSY ಮಾಸ್ ಲೀಡರ್, ಆದ್ರೆ ಟಿಕೆಟ್ ಫೈನಲ್ ಮಾಡೋದು ಪಾರ್ಲಿಮೆಂಟರಿ ಬೋರ್ಡ್: ಸಿ.ಟಿ.ರವಿ

award KARAWAR 1

ಪ್ರಶಸ್ತಿ ಹಾಗೂ ನಗದು ಪುರಸ್ಕಾರವನ್ನು ಇಂದು ಕಾರವಾರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಗಣಪತಿ ಉಳವೇಕರ್ ಅವರು ನೀಡಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಸುಭಾಷ್ ಧೂಪದಹೊಂಡ, ವರದಿಗಾರ ಮಯೂರ್ ಹೆಗಡೆಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಇದನ್ನೂ ಓದಿ: ಅಭಿಮಾನಿಯ ಹೊಸ ಜೀಪ್ ಓಡಿಸಿ ಮಹಿಳೆಯರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ರೇಣುಕಾಚಾರ್ಯ

ಕಾರ್ಯಕ್ರಮದಲ್ಲಿ ಕಾರವಾರ ವಿಧಾನಸಭಾ ಸದಸ್ಯರಾದ ರೂಪಾಲಿ ನಾಯ್ಕ, ನಗರಸಭಾ ಅಧ್ಯಕ್ಷ ನಿತಿನ್ ಪಿಕಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರಿಯಾಂಗಾ ಎಂ, ಪತ್ರಕರ್ತ ಸಂಘದ ಅಧ್ಯಕ್ಷ ಟಿಬಿ ಹರಿಕಾಂತ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *