Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿಗೆ ದಶಕದ ಸಂಭ್ರಮ – ಶಾಂತಿಧಾಮಕ್ಕೆ 25 ಲಕ್ಷ ರೂ. ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್ ಟಿವಿಗೆ ದಶಕದ ಸಂಭ್ರಮ – ಶಾಂತಿಧಾಮಕ್ಕೆ 25 ಲಕ್ಷ ರೂ. ಪ್ರಶಸ್ತಿ

Bengaluru City

ಪಬ್ಲಿಕ್ ಟಿವಿಗೆ ದಶಕದ ಸಂಭ್ರಮ – ಶಾಂತಿಧಾಮಕ್ಕೆ 25 ಲಕ್ಷ ರೂ. ಪ್ರಶಸ್ತಿ

Public TV
Last updated: February 12, 2022 8:52 pm
Public TV
Share
4 Min Read
public tv shakthidhama check hr ranganath shivarajkumar
SHARE

ಬೆಂಗಳೂರು: ಪಬ್ಲಿಕ್ ಟಿವಿಗೆ ಇಂದು 10ನೇ ವಸಂತ. 2012ರ ಫೆಬ್ರವರಿ 12ರಂದು ಲೋಕಾರ್ಪಣೆಗೊಂಡ ನಿಮ್ಮ ಪ್ರೀತಿಯ ಕೂಸು ಪಬ್ಲಿಕ್ ಟಿವಿಗೆ ಇಂದು ಭರ್ತಿ 10 ವರ್ಷಗಳು. ನಿಮ್ಮೆಲ್ಲರ ಪ್ರೀತಿಯಿಂದ ಈ ಹತ್ತು ವರ್ಷದಲ್ಲಿ ಪಬ್ಲಿಕ್ ಟಿವಿ ಸಾಧಿಸಿದ್ದು ಬಹಳಷ್ಟು. ಸಾಧಿಸಬೇಕಿರೋದು ಇನ್ನಷ್ಟು. ಸಾರ್ಥಕ ದಶಕದ ಹಿಂದೆ ನಮ್ಮೊಡನೆ ನೀವಿದ್ದೀರಿ. ನಮ್ಮನ್ನು ಇಷ್ಟರ ಮಟ್ಟಿಗೆ ಬೆಳೆಸಿದ್ದೀರಿ. ನಿಮಗೆ ನಾವು ಚಿರಋಣಿ.

PUBLIC TV PROGRAM 1

ಯಶವಂತಪುರದಲ್ಲಿರುವ ಪಬ್ಲಿಕ್ ಟಿವಿ ಕಚೇರಿಯಲ್ಲಿ ಇಂದು ದಶಮಾನೋತ್ಸವ ಸಂಭ್ರಮವನ್ನು ಆಚರಿಸಲಾಯಿತು. ಬೆಳಗ್ಗೆ 10 ಗಂಟೆ 10 ನಿಮಿಷಕ್ಕೆ ಮುಖ್ಯ ಕಾರ್ಯಕ್ರಮ ನಡೆಯಿತು. ಈ ಸಂಭ್ರಮದ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿರುವ ಮೈಸೂರಿನ ಶಾಂತಿಧಾಮ ಆಶ್ರಮಕ್ಕೆ ಪಬ್ಲಿಕ್ ಟಿವಿ ವತಿಯಿಂದ 25 ಲಕ್ಷ ರೂ. ಪ್ರಶಸ್ತಿಯ ಚೆಕ್ ನೀಡಲಾಯಿತು. ನಟ ಶಿವರಾಜ್ ಕುಮಾರ್ ಮತ್ತು ಗೀತಾ ದಂಪತಿ ಚೆಕ್ ಸ್ವೀಕರಿಸಿದರು.

PUBLIC TV PROGRAM 3

ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್, ಪಬ್ಲಿಕ್ ಟಿವಿ ಆರಂಭವಾಗಿ 10 ವರ್ಷ ಸಂಭ್ರಮಕ್ಕೆ ಮೊಟ್ಟ ಮೊದಲು ಕಾರಣರಾದ ಲಹರಿ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ. ಲಹರಿ ಅವರ ನಂಬಿಕೆ ಇಟ್ಟು ಪಬ್ಲಿಕ್ ಟಿವಿ ಎಂದು ಹೆಸರಿಟ್ಟವರಿಗೆ ಧನ್ಯವಾದಗಳು. ರಾಜಕೀಯದ ಜೊತೆ ಹಲವು ದಿಗ್ಗಜರನ್ನು ನೋಡಿದ್ದೇನೆ. ಒಂದು ಬದ್ಧತೆಯೊಂದಿಗೆ ಸಂಸ್ಥೆ ನಡೆಸುವುದು ಬಹಳ ಕಷ್ಟ ಆದರೂ ಅದನ್ನು ಸುಲಭವಾಗಿಸಿಕೊಂಡು ಮಾಡಿದ್ದೀರಿ. ಈವರೆಗೆ ಯಾರು ಕೂಡ ಪಬ್ಲಿಕ್ ಟಿವಿ ಇವರ ಪರ, ವಿರುದ್ಧ ಎಂಬ ಮಾತು ಬಂದಿಲ್ಲ. ರಂಗನಾಥ್ ಅವರು ಸಮಾಜವನ್ನು ಸರಿಮಾಡುವಲ್ಲಿ, ರಾಜಕಾರಣಿಗಳನ್ನು, ಅಧಿಕಾರಿಗಳನ್ನು ಸರಿಮಾಡಲು ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಈ ಪಬ್ಲಿಕ್ ಟಿವಿಯಲ್ಲಿರುವ ಪ್ರತಿಯೊಬ್ಬ ಉದ್ಯೋಗಿಯು ಯಾವುದೇ ಅಮಿಷಕ್ಕೆ ಬಲಿಯಾಗದೆ ನಿಸ್ವಾರ್ಥ ಸೇವೆ ಮಾಡುತ್ತಿದ್ದಾರೆ. ರಂಗಣ್ಣ ಐದಾರು ವರ್ಷಗಳ ಹಿಂದೆ ಹಿರೇಮಠರನ್ನು ತಂದು ನನಗೆ ಫಿಕ್ಸ್ ಮಾಡಿದ್ದರು. ಅವರೊಂದಿಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದೆ ಆ ಸಂದರ್ಭ ನಾನು ನೀಡಿದ ಉತ್ತರವನ್ನು 13 ಬಾರಿ ರಿಪ್ಲೇ ಮಾಡಿ ತೋರಿಸಿದ್ದರು. ಇದರ ಉದ್ದೇಶ ಜನರಿಗೆ ಸರಿಯಾದ ಸ್ಪಷ್ಟವಾದ ಮಾಹಿತಿ ಕೊಡಬೇಕೆಂಬ ಸ್ಪಷ್ಟವಾಗಿತ್ತು ಇದು ಪಬ್ಲಿಕ್ ಟಿವಿಯ ವಿಶೇಷತೆ ಎಂದು ಹೊಗಳಿದರು.

ಹಲವು ಚಾಲೆಂಜ್‍ಗಳನ್ನು, ಅವಕಾಶಗಳನ್ನು ಮಾಡಿಕೊಂಡು ಪಬ್ಲಿಕ್ ಟಿವಿ ಮುಂದೆ ಬಂದಿದೆ. ಸಮಾಜದಲ್ಲಿ ಉತ್ತಮ ಹೆಸರು ಮಾಡಿದೆ. ವಾಹಿನಿ ಮುನ್ನಡೆಸಲು ಲೆಕ್ಕಾಚಾರ, ಜವಾಬ್ದಾರಿ, ನಿಷ್ಠೆ, ಪ್ರಾಮಾಣಿಕತೆ ಇದ್ದವರಿಗೆ ಮಾತ್ರ ಸಾಧ್ಯ. ರಂಗಣ್ಣ ಒಬ್ಬ ವ್ಯಕ್ತಿಯಲ್ಲ ಅವರೊಬ್ಬ ಸಂಸ್ಥೆ. ಹಲವು ಜನರಿಗೆ ಉದ್ಯೋಗ ನೀಡಿದ್ದಾರೆ. ಪಬ್ಲಿಕ್ ಟಿವಿ, ಪಬ್ಲಿಕ್ ಜೊತೆ ಸಂಬಂಧ ಇರುವಂತೆ ನೋಡಿಕೊಂಡಿದೆ. ಸಮಾಜವನ್ನು ಬದಲಾವಣೆ ಮಾಡಲು, ಹಲವು ಆದರ್ಶ ವ್ಯಕ್ತಿತ್ವವನ್ನು ಸಮಾಜಕ್ಕೆ ಪರಿಚಯಿಸಲು ಪಬ್ಲಿಕ್ ಟಿವಿ ಸಂಪೂರ್ಣವಾಗಿ ಶ್ರಮಿಸಿದೆ ಎಂದು ಅಭಿಪ್ರಾಯಪಟ್ಟರು.

ಯಶಸ್ಸು ಎಲ್ಲರಿಗೂ ದಕ್ಕುವುದಿಲ್ಲ. ಯಶಸ್ಸು ಸಿಗಬೇಕೆಂದರೆ, ಧರ್ಮರಾಯನ ಧರ್ಮತ್ವ, ದಾನ ಶೂರ ಕರ್ಣನ ದಾನತ್ವ ಇರಬೇಕು. ಅರ್ಜುನನ ಗುರಿ ಇರಬೇಕು, ಭೀಮನ ಬಲ ಇರಬೇಕು. ವಿಧುರನ ನೀತಿ ಇರಬೇಕು, ಕೃಷ್ಣನ ತಂತ್ರ ಇರಬೇಕು ಇದೆಲ್ಲ ರಂಗಣ್ಣನ ಬಳಿ ಇದೆ ಹಾಗಾಗಿ ಯಶಸ್ವಿಯಾಗಿದ್ದಾರೆ ಎಂದರು.

ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, 10 ವರ್ಷ ಪೂರೈಸಿದ ಸಾಧನೆ ಮತ್ತು ನೆನಪುಗಳ ಜೊತೆಗೆ ಪಬ್ಲಿಕ್ ಟಿವಿಗೆ ಅಭಿನಂದನೆಗಳು. ಪಬ್ಲಿಕ್ ಟಿವಿ ತನ್ನ ನಿಷ್ಠೆ, ಪ್ರಾಮಾಣಿಕತೆ ಕಾರ್ಯದಿಂದಾಗಿ 10 ವರ್ಷ ಪೂರೈಸಿರುವುದರ ಜೊತೆಗೆ ಮೊದಲ ಸ್ಥಾನಕ್ಕೇರಿದ್ದು, ಜನರ ಮನಸ್ಸನ್ನು ಗೆದ್ದಿದೆ ಎಂದರು.

ಪಬ್ಲಿಕ್ ಟಿವಿ ‘ಬೆಳಕು’ ಕಾರ್ಯಕ್ರಮದ ಮೂಲಕ ಹತ್ತಾರು ಜನರ ಬದುಕನ್ನು ಬೆಳಗಿಸಿದೆ. ಕೋವಿಡ್ ಸಂದರ್ಭದಲ್ಲಿ ದಿಕ್ಕೆಟ್ಟ ಜನತೆಗೆ ವಿಶ್ವಾಸ ಮೂಡಿಸಿದೆ. ಜೊತೆಗೆ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೂ ಆದ್ಯತೆ ನೀಡುವ ಕೆಲಸ ಮಾಡಿದೆ. ಶಕ್ತಿಧಾಮದಂತಹ ಸೇವಾ ಸಂಸ್ಥೆಗಳಿಗೆ ಪ್ರೋತ್ಸಾಹ ಧನವನ್ನೂ ನೀಡಿದೆ ಎಂದು ಹೊಗಳಿದರು.

ವ್ಯಾಪಾರೀಕರಣದ ಸಂಸ್ಥೆಗಳಿಗೆ ಸೇವಾ ಮನೋಭಾವ ಬರುವುದಿಲ್ಲ. ಸಮಾಜವನ್ನು ಪರಿವರ್ತೆಯೆಡೆಗೆ ಕೊಂಡೊಯ್ಯಲು ಬಯಸುವ ಸಂಸ್ಥೆಗೆ ಆ ಗುಣ ಬರುತ್ತದೆ. ಅದನ್ನು ಹೆಚ್.ಆರ್.ರಂಗನಾಥ್ ಅವರು ಮಾಡಿ ತೋರಿಸಿದ್ದಾರೆ ಎಂದು ಪ್ರಶಂಸಿಸಿದರು.

ನಟ ಶಿವರಾಜ್‍ಕುಮಾರ್ ಮಾತನಾಡಿ, ಪಬ್ಲಿಕ್ ಟಿವಿ 10 ವರ್ಷದ ಸಂಭ್ರಮದಲ್ಲಿದೆ. ಅದು 25, 50, 75, 100ರ ಸಂಭ್ರಮದವರೆಗೂ ತಲುಪಲಿ ಎಂದು ಆಶಿಸುತ್ತೇನೆ. ಪಬ್ಲಿಕ್ ಟಿವಿಯಂತಹ ಒಳ್ಳೆಯ ಮಾಧ್ಯಮದೊಂದಿಗೆ ಬದುಕಬೇಕು, ಸಂಭ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂಬ ಆಸೆ ನಮಗೂ ಇದೆ ಎಂದು ಆಶಯ ವ್ಯಕ್ತಪಡಿಸಿದರು.

SHIVARAJ KUMAR

ಅಪ್ಪಾಜಿಯ (ರಾಜ್‍ಕುಮಾರ್) ಕಾಳಜಿಯಿಂದಾಗಿ ಶಕ್ತಿಧಾಮ ಹುಟ್ಟಿತು. ನಂತರ ಹಲವಾರು ಕೈಗಳು ಸೇರಿ ಶಕ್ತಿಧಾಮಕ್ಕೆ ಜೀವ ತುಂಬಿವೆ. ನಮ್ಮ ತಂದೆ-ತಾಯಿಯಿಂದ ಮಾತ್ರ ಶಕ್ತಿಧಾಮ ಆಯಿತು ಎಂದು ಹೇಳಿಕೊಳ್ಳಲು ನಾನು ಇಚ್ಛಿಸುವುದಿಲ್ಲ. ಇಲ್ಲಿ ಸಾಕಷ್ಟು ಮಂದಿ ನೆರವು ನೀಡಿದ್ದಾರೆ ಎಂದು ಸ್ಮರಿಸಿದರು.

ಶಕ್ತಿಧಾಮದ ಮಕ್ಕಳು ನಮ್ಮನ್ನು ನೋಡಿದ ಕೂಡಲೇ ಓಡಿಬಂದು ಅಪ್ಪಿಕೊಂಡು, ನಮ್ಮಲ್ಲಿ ತಂದೆ, ಅಣ್ಣ, ಸ್ನೇಹಿತನನ್ನು ಕಾಣುತ್ತಾರೆ. ಅಪ್ಪು ಕೂಡ ಶಕ್ತಿಧಾಮಕ್ಕೆ ಹೆಚ್ಚಾಗಿ ಭೇಟಿ ಕೊಡುತ್ತಿದ್ದ. ಅಪ್ಪುನನ್ನು ನೆನೆದಾಗ ದುಃಖವಾಗುತ್ತದೆ. ಆ ನೋವಿನಲ್ಲೇ ನಾವು ಬದುಕಬೇಕಾಗಿದೆ. ಆತ ಹಾಕಿಕೊಟ್ಟ ಸಮಾಜ ಸೇವೆ ಹಾದಿಯಲ್ಲಿ ನಾವು ಮುಂದುವರಿಯುತ್ತೇವೆ. ಅಂತಹ ಶಕ್ತಿಧಾಮದ ಬೆಂಬಲವಾಗಿ ನಿಂತ ಪಬ್ಲಿಕ್ ಟಿವಿಗೂ ನಾವು ಚಿರಋಣಿ ಎಂದರು.

NIRMALANATH SWAMIJI

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಮಾತನಾಡಿ, ರಂಗಣ್ಣನವರನ್ನು ನೋಡಿ ಜ್ಞಾನವನ್ನು ಯಾವ ರೀತಿ ಉಪಯೋಗಿಸಬೇಕು. ವಿಚಾರಗಳನ್ನು ಯಾವ ರೀತಿ ನಿರೂಪಿಸಬೇಕೆಂಬುದನ್ನು ಕಲಿಬೇಕಾಗುತ್ತದೆ. ಆ ವ್ಯಕ್ತಿಯನ್ನು ನೋಡಿದಾಗ ಅವರ ಸರಳತೆ ನನಗೆ ತುಂಬಾ ಇಷ್ಟವಾಗುತ್ತದೆ. ಸರಳತೆ ಒಬ್ಬ ಮನುಷ್ಯನಿಗೆ ಜ್ಞಾನದ ಜೊತೆ ಸರಳತೆ ಬಂದರೆ ಬೆಟ್ಟವನ್ನೂ ಬೇಕಾದರೂ ಅಲುಗಾಡಿಸ ಬಹುದೆಂಬಂತೆ. ಇಂದು ನಮ್ಮೊಂದಿಗಿರುವ ಸರಳತೆಯ ಸಕಾರಮೂರ್ತಿಯಾಗಿ ರಂಗಣ್ಣನನ್ನು ನೋಡಬಹುದು. ಅವರ ಈ ವ್ಯಕ್ತಿತ್ವದಿಂದ ಸಂಸ್ಥೆ ಈ ಮಟ್ಟಿಗೆ ಬೆಳೆದಿದೆ ಎಂದು ಅಭಿಪ್ರಾಯಪಟ್ಟರು.

TAGGED:Public TVshaktidhamaಡಿಕೆ ಶಿವಕುಮಾರ್ನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಶಿವರಾಜ್ ಕುಮಾರ್
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
1 minute ago
Ashok Pattana
Bengaluru City

ಇಕ್ಬಾಲ್ ಹುಸೇನ್‌ಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇದೆ – ಅಶೋಕ್ ಪಟ್ಟಣ

Public TV
By Public TV
14 minutes ago
mahashivratri 2024 Kedige Flower Why Ketaki Flower is Not Offered to Lord Shiva
Districts

ಶಿವರಾತ್ರಿ ದಿನ ಕೇದಗೆ ಹೂ ಬಳಸಲ್ಲ ಯಾಕೆ?

Public TV
By Public TV
27 minutes ago
COURT
Latest

ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ 8,630 ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ

Public TV
By Public TV
31 minutes ago
Blessing Muzarabani
Cricket

T20 World Cup | ಆರ್‌ಸಿಬಿ ವೇಗಿಯ ಬೆಂಕಿ ಬೌಲಿಂಗ್‌ ದಾಳಿಗೆ ಆಸ್ಟ್ರೇಲಿಯಾ ಛಿದ್ರ

Public TV
By Public TV
44 minutes ago
Zimbabwe 1
Cricket

19 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ – T20 ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಜಿಂಬಾಬ್ವೆ

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?