ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತವರು ಮೈಸೂರಿನಲ್ಲಿ ಅಂಗನವಾಡಿಯ (Anganawadi) ದುಸ್ಥಿತಿಯ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಬಿತ್ತರಿಸಿದ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ಶೀಘ್ರವೇ ಸ್ವಂತ ಅಂಗನವಾಡಿ ಕಟ್ಟಡದ ಭರವಸೆಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಕೊಟ್ಟಿದ್ದಾರೆ.
ಪಬ್ಲಿಕ್ ಟಿವಿ ವರದಿಗೆ ಪ್ರತಿಕ್ರಿಯಿಸಿದ ಅವರು, ಮೈಸೂರಿನ ಅಂಗನಾವಾಡಿ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. 15 ದಿನದೊಳಗೆ ಬಾಡಿಗೆ ಕಟ್ಟಡಕ್ಕೆ ಶಿಫ್ಟ್ ಮಾಡಿಸುತ್ತೇನೆ. ಆದಷ್ಟು ಬೇಗ ಸರ್ಕಾರ ಸ್ವಂತ ಜಾಗ ಖರೀದಿಸುತ್ತೆ. ಅಲ್ಲೇ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡುವುದಾಗಿ ಸಚಿವೆ ಭರವಸೆ ನೀಡಿದ್ದಾರೆ.

ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಈ ವೇಳೆ ಸ್ಥಳೀಯರು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಅಂಗನವಾಡಿಗೆ ಜಾಗ ಮೀಸಲಿರಿಸಿವದ್ದೇವೆ. ಆದರು ಅದನ್ನು ಮಾಡುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದ ಪ್ರಸಂಗ ನಡೆಯಿತು.

